Homeಮುಖಪುಟಬಿಹಾರ: ಮಗನ ಮೃತದೇಹ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 50 ಸಾವಿರಕ್ಕೆ ಬೇಡಿಕೆ, ಹಣಕ್ಕಾಗಿ ಭಿಕ್ಷೆ ಎತ್ತಿದ...

ಬಿಹಾರ: ಮಗನ ಮೃತದೇಹ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 50 ಸಾವಿರಕ್ಕೆ ಬೇಡಿಕೆ, ಹಣಕ್ಕಾಗಿ ಭಿಕ್ಷೆ ಎತ್ತಿದ ವೃದ್ಧ ದಂಪತಿ

- Advertisement -
- Advertisement -

ನಾಪತ್ತೆಯಾಗಿದ್ದ ಮಗನನ್ನು ಕಳೆದುಕೊಂಡು ನೊಂದಿದ್ದ ವೃದ್ಧ ತಂದೆ ತಾಯಿಗೆ ಆತನ ಮೃತದೇಹ ಆಸ್ಪತ್ರೆಯಲ್ಲಿದೆ ಎಂದು ತಿಳಿದು ಎದೆ ಬೀರಿಯುವಷ್ಟು ನೋವಾಗಿತ್ತು. ಆದರೆ, ಅದಿನ್ನು ಮೊದಲ ಹಂತ. ಮಗನ ಅಗಲಿಕೆಯ ನೋವಿನಲ್ಲಿದ್ದ ಅವರಿಗೆ ಆಸ್ಪತ್ರೆ ಸಿಬ್ಬಂದಿ ಮೃತದೇಹ ನೀಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಮಗನ ಮೃತದೇಹ ಪಡೆಯಲು ಈ ದಂಪತಿ ಭಿಕ್ಷೆ ಬೇಡುತ್ತಾ ಊರೂರು ಅಲೆಯುತ್ತಿರುವ ಹೃದಯ ವಿದ್ರಾವಕ ಘಟನೆ ಬಿಗಾರದ ಸಮಸ್ತಿಪುರದಲ್ಲಿ ನಡೆದಿದೆ.

ಈ ವೃದ್ಧ ದಂಪತಿ ಬಿಹಾರದ ಸಮಸ್ತಿಪುರದ ಬೀದಿಗಳಲ್ಲಿ “ತಮ್ಮ ಮಗನ ದೇಹವನ್ನು ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲು” ಹಣ ನೀಡಿ ಎಂದು ಭಿಕ್ಷೆ ಬೇಡುತ್ತಿದ್ದು, ಇವರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

“ಕೆಲವು ಸಮಯದ ಹಿಂದೆ ನನ್ನ ಮಗ ನಾಪತ್ತೆಯಾಗಿದ್ದನು, ಈಗ, ನನ್ನ ಮಗನ ಶವ ಸಮಸ್ತಿಪುರದ ಸದರ್ ಆಸ್ಪತ್ರೆಯಲ್ಲಿದೆ ಎಂದು ನಮಗೆ ಕರೆ ಬಂದಿದೆ, ನನ್ನ ಮಗನ ಮೃತದೇಹವನ್ನು ನೀಡಲು ಆಸ್ಪತ್ರೆಯ ಉದ್ಯೋಗಿ 50,000 ರೂಪಾಯಿ ಕೇಳಿದ್ದಾರೆ, ನಾವು ಬಡವರು, ಹೇಗೆ ನಾವು ಈ ಮೊತ್ತವನ್ನು ನೀಡುವುದು? ”ಎಂದು ಮೃತರ ತಂದೆ ಮಹೇಶ್ ಠಾಕೂರ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

 

ಸಾಮಾಜಿಕ ಮಾಧ್ಯಮಗಳಲ್ಲಿ ಜಿಲ್ಲಾಡಳಿತವನ್ನು ಗುರಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋ ಪೋಟೋಗಳು ವೈರಲ್ ಆದ ಮೇಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಸ್ತಿಪುರದ ಸಿವಿಲ್ ಸರ್ಜನ್ ಡಾ.ಎಸ್.ಕೆ.ಚೌಧರಿ, “ಪ್ರಕರಣದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಗೆ ಕಾರಣವಾಗಿರುವವರನ್ನು ಬಿಡುವುದಿಲ್ಲ. ಇದು ನಾಚಿಕೆಗೇಡಿನ ಸಂಗತಿ” ಎಂದಿದ್ದಾರೆ.

ಈ ಆಸ್ಪತ್ರೆಯಲ್ಲಿನ ಬಹುತೇಕ ಆರೋಗ್ಯ ಕಾರ್ಯಕರ್ತರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಸಮಯಕ್ಕೆ ಸರಿಯಾಗಿ ಸಂಬಳ ಸಿಗುತ್ತಿಲ್ಲ. ರೋಗಿಗಳ ಸಂಬಂಧಿಕರ ಬಳಿ ಸಿಬ್ಬಂದಿ ಹಣ ಪಡೆದಿರುವ, ಹಣಕ್ಕೆ ಬೇಡಿಕೆಯಿಟ್ಟಿರುವ ಹಲವಾರು ನಿದರ್ಶನಗಳಿವೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಡಿಎಂ ವಿನಯ್ ಕುಮಾರ್ ರೈ, ನಾ”ನು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ದಂಪತಿಗಳ ಆರೋಪಗಳು ತಪ್ಪು ಎಂದು ತಿಳಿದುಬಂದಿದೆ. ಯಾವುದೇ ಉದ್ಯೋಗಿ ತಪ್ಪಿತಸ್ಥರೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಪಬ್‌ಜಿ ಆಡುವುದನ್ನು ತಡೆದ ತಾಯಿಯನ್ನು ಕೊಲೆ ಮಾಡಿದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...