Homeಮುಖಪುಟಬಿಹಾರ: ಮಗನ ಮೃತದೇಹ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 50 ಸಾವಿರಕ್ಕೆ ಬೇಡಿಕೆ, ಹಣಕ್ಕಾಗಿ ಭಿಕ್ಷೆ ಎತ್ತಿದ...

ಬಿಹಾರ: ಮಗನ ಮೃತದೇಹ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 50 ಸಾವಿರಕ್ಕೆ ಬೇಡಿಕೆ, ಹಣಕ್ಕಾಗಿ ಭಿಕ್ಷೆ ಎತ್ತಿದ ವೃದ್ಧ ದಂಪತಿ

- Advertisement -
- Advertisement -

ನಾಪತ್ತೆಯಾಗಿದ್ದ ಮಗನನ್ನು ಕಳೆದುಕೊಂಡು ನೊಂದಿದ್ದ ವೃದ್ಧ ತಂದೆ ತಾಯಿಗೆ ಆತನ ಮೃತದೇಹ ಆಸ್ಪತ್ರೆಯಲ್ಲಿದೆ ಎಂದು ತಿಳಿದು ಎದೆ ಬೀರಿಯುವಷ್ಟು ನೋವಾಗಿತ್ತು. ಆದರೆ, ಅದಿನ್ನು ಮೊದಲ ಹಂತ. ಮಗನ ಅಗಲಿಕೆಯ ನೋವಿನಲ್ಲಿದ್ದ ಅವರಿಗೆ ಆಸ್ಪತ್ರೆ ಸಿಬ್ಬಂದಿ ಮೃತದೇಹ ನೀಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಮಗನ ಮೃತದೇಹ ಪಡೆಯಲು ಈ ದಂಪತಿ ಭಿಕ್ಷೆ ಬೇಡುತ್ತಾ ಊರೂರು ಅಲೆಯುತ್ತಿರುವ ಹೃದಯ ವಿದ್ರಾವಕ ಘಟನೆ ಬಿಗಾರದ ಸಮಸ್ತಿಪುರದಲ್ಲಿ ನಡೆದಿದೆ.

ಈ ವೃದ್ಧ ದಂಪತಿ ಬಿಹಾರದ ಸಮಸ್ತಿಪುರದ ಬೀದಿಗಳಲ್ಲಿ “ತಮ್ಮ ಮಗನ ದೇಹವನ್ನು ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲು” ಹಣ ನೀಡಿ ಎಂದು ಭಿಕ್ಷೆ ಬೇಡುತ್ತಿದ್ದು, ಇವರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

“ಕೆಲವು ಸಮಯದ ಹಿಂದೆ ನನ್ನ ಮಗ ನಾಪತ್ತೆಯಾಗಿದ್ದನು, ಈಗ, ನನ್ನ ಮಗನ ಶವ ಸಮಸ್ತಿಪುರದ ಸದರ್ ಆಸ್ಪತ್ರೆಯಲ್ಲಿದೆ ಎಂದು ನಮಗೆ ಕರೆ ಬಂದಿದೆ, ನನ್ನ ಮಗನ ಮೃತದೇಹವನ್ನು ನೀಡಲು ಆಸ್ಪತ್ರೆಯ ಉದ್ಯೋಗಿ 50,000 ರೂಪಾಯಿ ಕೇಳಿದ್ದಾರೆ, ನಾವು ಬಡವರು, ಹೇಗೆ ನಾವು ಈ ಮೊತ್ತವನ್ನು ನೀಡುವುದು? ”ಎಂದು ಮೃತರ ತಂದೆ ಮಹೇಶ್ ಠಾಕೂರ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

 

ಸಾಮಾಜಿಕ ಮಾಧ್ಯಮಗಳಲ್ಲಿ ಜಿಲ್ಲಾಡಳಿತವನ್ನು ಗುರಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋ ಪೋಟೋಗಳು ವೈರಲ್ ಆದ ಮೇಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಸ್ತಿಪುರದ ಸಿವಿಲ್ ಸರ್ಜನ್ ಡಾ.ಎಸ್.ಕೆ.ಚೌಧರಿ, “ಪ್ರಕರಣದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಗೆ ಕಾರಣವಾಗಿರುವವರನ್ನು ಬಿಡುವುದಿಲ್ಲ. ಇದು ನಾಚಿಕೆಗೇಡಿನ ಸಂಗತಿ” ಎಂದಿದ್ದಾರೆ.

ಈ ಆಸ್ಪತ್ರೆಯಲ್ಲಿನ ಬಹುತೇಕ ಆರೋಗ್ಯ ಕಾರ್ಯಕರ್ತರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಸಮಯಕ್ಕೆ ಸರಿಯಾಗಿ ಸಂಬಳ ಸಿಗುತ್ತಿಲ್ಲ. ರೋಗಿಗಳ ಸಂಬಂಧಿಕರ ಬಳಿ ಸಿಬ್ಬಂದಿ ಹಣ ಪಡೆದಿರುವ, ಹಣಕ್ಕೆ ಬೇಡಿಕೆಯಿಟ್ಟಿರುವ ಹಲವಾರು ನಿದರ್ಶನಗಳಿವೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಡಿಎಂ ವಿನಯ್ ಕುಮಾರ್ ರೈ, ನಾ”ನು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ದಂಪತಿಗಳ ಆರೋಪಗಳು ತಪ್ಪು ಎಂದು ತಿಳಿದುಬಂದಿದೆ. ಯಾವುದೇ ಉದ್ಯೋಗಿ ತಪ್ಪಿತಸ್ಥರೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಪಬ್‌ಜಿ ಆಡುವುದನ್ನು ತಡೆದ ತಾಯಿಯನ್ನು ಕೊಲೆ ಮಾಡಿದ ಬಾಲಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ| ಆರೋಗ್ಯ ಇಲಾಖೆಯ ಕ್ವಾಟ್ರಸ್‌ನಲ್ಲೇ ಭ್ರೂಣ ಲಿಂಗ ಪತ್ತೆ, ಹತ್ಯೆ: ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಪೊಲೀಸರು ಭಾನುವಾರ (ಮೇ 5) ರಾತ್ರಿ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ದೊರೆತಿದೆ. ಪಾಂಡವಪುರದ ಆರೋಗ್ಯ ಇಲಾಖೆಯ ಕ್ವಾಟ್ರಸ್‌ನಲ್ಲೇ...