Homeಮುಖಪುಟಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

- Advertisement -
- Advertisement -

ಬಿಹಾರ ಚುನಾವಣೆಗೆ ಸಿಪಿಐ-ಎಂಎಲ್ (ಲಿಬರೇಷನ್) ‘ಬದ್ಲೋ ಬಿಹಾರ’ ರ‍್ಯಾಲಿಯನ್ನು ಆಯೋಜಿಸುವ ಮೂಲಕ ತನ್ನ ಚುನಾವಣಾ ಪ್ರಚಾರವನ್ನು ಆರಂಭಿಸಿದೆ. ಈ ವೇಳೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುವಂತೆ ಜನರನ್ನು ಕೇಳಿಕೊಂಡಿದ್ದಾರೆ. ಎನ್‌ಡಿಎ ಸರ್ಕಾರವನ್ನು

ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ದೀಪಂಕರ್ ಅವರು, ಬಿಹಾರದಲ್ಲಿಯೂ ಜಾರ್ಖಂಡ್‌ನ ಚುನಾವಣಾ ಇತಿಹಾಸವನ್ನು ಪುನರಾವರ್ತಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ಸುಮಾರು 75 ಪ್ರತಿಶತದಷ್ಟು ಜನರು ಪ್ರಸ್ತುತ ಸರ್ಕಾರವು ತಮಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಎನ್‌ಡಿಎ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರವನ್ನು

“ಬಿಜೆಪಿ ಮತ್ತು ಎನ್‌ಡಿಎ ಹಗಲುಗನಸು ಕಾಣಲಿ. ಮಹಾರಾಷ್ಟ್ರ ಮತ್ತು ದೆಹಲಿಯ ನಂತರ, ಬಿಹಾರದಲ್ಲಿ ಕೂಡಾ ಚುನಾವಣೆಗಳನ್ನು ಗೆಲ್ಲುತ್ತೇವೆ ಎಂದು ಅವರು ಭಾವಿಸಲಿ. ಆದರೆ, ನೆರೆಯ ಜಾರ್ಖಂಡ್‌ನಲ್ಲಿ ಬಿಜೆಪಿ ಹೀನಾಯ ಸೋಲನ್ನು ಎದುರಿಸಿತು. ಅಲ್ಲಿ ಜೆಎಂಎಂ, ಕಾಂಗ್ರೆಸ್ ಮತ್ತು ಸಿಪಿಐ-ಎಂಎಲ್ (ಲಿಬರೇಷನ್) ಒಟ್ಟಿಗೆ ಸೇರಿದವು. ಅದೇ ರೀತಿ, ಬಿಹಾರ ಕೂಡಾ ಮಾಡಲಿದೆ” ಎಂದು ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದ ಜಾರ್ಖಂಡ್‌ನಂತೆಯೇ ಬಿಹಾರ ಕೂಡ ಅದೇ ಮಾರ್ಗವನ್ನು ಅನುಸರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ದೀಪಂಕರ್, “ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಕಳೆದ ವರ್ಷ ಬಿಹಾರದಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ನಾವು ಲೋಕಸಭೆಯಲ್ಲಿ ಹಲವಾರು ಸ್ಥಾನಗಳನ್ನು ಗೆದ್ದಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ ಸೂಕ್ತ ಉತ್ತರ ನೀಡಲು ವಿರೋಧ ಪಕ್ಷಗಳು ಸಿದ್ಧರಾಗಿರುವುದರಿಂದ ಇಂದಿನ ಒಗ್ಗಟ್ಟು ಎನ್‌ಡಿಎ ಪಕ್ಷಗಳಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಪಿತೂರಿ ನಡೆಸುವುದರಲ್ಲಿ ನಂಬಿಕೆ ಇಟ್ಟಿದೆ ಎಂದು ದೀಪಂಕರ್ ಹೇಳಿದ್ದಾರೆ. ಪ್ರದೇಶದಲ್ಲಿ ಎನ್‌ಡಿಎ ಮತದಾರರನ್ನು ಒಟ್ಟುಗೂಡಿಸಲು ಕೋಮು ಗಲಭೆಯನ್ನು ಪ್ರಚೋದಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಇತ್ತೀಚಿನ ಸೀಮಾಂಚಲ್‌ಗೆ ನೀಡಿದ್ದ ಭೇಟಿಯನ್ನು ಅವರು ಉಲ್ಲೇಖಿಸಿದ್ದಾರೆ.

ಆದಾಗ್ಯೂ, ವಿರೋಧ ಪಕ್ಷಗಳು ಜನರ ಗಮನವನ್ನು ಬೇರೆಡೆಗೆ ತಿರುಗುವುದಿಲ್ಲ ಮತ್ತು ಬಹಳ ಹಿಂದಿನಿಂದಲೂ ಬಿಹಾರವನ್ನು ಕಾಡುತ್ತಿರುವ ನಿಜವಾದ ಸಮಸ್ಯೆಗಳ ಮೇಲೆ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಿರುದ್ಯೋಗ ಮತ್ತು ವಲಸೆಗಳು ಸೇರಿದಂತೆ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಮುಖ ವಿಚಾರಗಳನ್ನು ಎತ್ತಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಮಸ್ಯೆಗಳು ಮತ್ತು ನೋವುಗಳು ಹಲವು ಆದರೂ, ಆದರೆ ಪರಿಹಾರವು ಒಂದೇ ಒಂದು ಇದ್ದು, ಅದು ಬಿಹಾರವನ್ನು ಬದಲಾಯಿಸುವುದಾಗಿದೆ ಎಂದು ಅವರು ಹೇಳಿದ್ದಾರೆ. “ರಾಜ್ಯ ರಾಜಧಾನಿಯ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಇಂದು ಬೃಹತ್ ಜನಸಮೂಹದೊಂದಿಗೆ ಬದಲಾವಣೆಗಾಗಿ ನಾವು ಕಹಳೆ ಮೊಳಗಿಸಿದ್ದೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...