Homeಫ್ಯಾಕ್ಟ್‌ಚೆಕ್ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ನಾಮಪತ್ರ ಸಲ್ಲಿಸಲು ಬಂದ ವ್ಯಕ್ತಿಯನ್ನು ಪೋಲೀಸರು ಬಂಧಿಸಿ ಕರೆದೊಯ್ಯುತ್ತಿರುವ ಫೋಟೋದೊಂದಿಗೆ ‘ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿದ್ದ ಪಾಕಿಸ್ತಾನದ ಉಗ್ರವಾದಿಯನ್ನು ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿಯೇ ಬಂಧಿಸಿದ NIA’ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವ್ಯಕ್ತಿಯು 2014ರಲ್ಲಿ ನರೇಂದ್ರ ಮೋದಿಯವರು  ಪಾಲ್ಗೊಂಡ ಬಹಿರಂಗ ಸಭೆಯೊಂದರಲ್ಲಿ ಬಾಂಬ್ ದಾಳಿ ಮಾಡಿದ ಭಯೊತ್ಪಾದಕರಲ್ಲಿ ಒಬ್ಬನಾಗಿದ್ದು, ಆ ಪ್ರಕರಣದಲ್ಲಿ ಜಾಮೀನು ಸಿಕ್ಕಕೂಡಲೇ ಪಾಕಿಸ್ತಾನಕ್ಕೆ ಓಡಿ ಹೋಗಿದ್ದಾನೆಂದು ಬಿಜೆಪಿ ಪಕ್ಷ ಮತ್ತು ನ್ಯೂಸ್ 18 ಹಿಂದಿ ಚಾನೆಲ್ ವರದಿ ಮಾಡಿದೆ. ಇದು ನಿಜವೆ ಪರಿಶೀಲಿಸೋಣ ಬನ್ನಿ.

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಪೋಟೋದಲ್ಲಿ ಕಾಣಿಸುತ್ತಿರುವ ವ್ಯಕ್ತಿ  ಬಿಹಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲ. ಅವರು ಮಹಾಘಟಬಂಧನ್ ಮೈತ್ರಿಕೂಟದ ಸಿಪಿಐ-ಎಂಎಲ್ ಪಕ್ಷದ ಅಭ್ಯರ್ಥಿ ಆಫ್ತಾಬ್ ಆಲಂ ಆಗಿದ್ದಾರೆ.  ಸರ್ಕಾರಿ ಕೆಲಸದಲ್ಲಿ ಮಧ್ಯಪ್ರವೇಶ ಮಾಡಿದ ಆರೋಪದ ಮೇಲೆ ಮುಝಾಪುರ್ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಪ್ತಾಬ್ ಆಲಂರನ್ನು ಪೋಲೀಸರು ಬಂಧಿಸಿದರು. 2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಬಾಂಬ್ ದಾಳಿಗೂ, ಆಫ್ತಾಬ್ ಆಲಂಗೂ ಯಾವುದೇ ಸಂಬಂಧವಿಲ್ಲ.

ಪೋಸ್ಟ್‌ನಲ್ಲಿ ಹಂಚಿಕೊಂಡ ಪೋಟೋಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಇದೆ ಫೋಟೊ ‘Nav Bharat Times’ ನ್ಯೂಸ್ ವೆಬ್ ಸೈಟ್ 16 ಅಕ್ಟೋಬರ್ 2020 ರಂದು ಪ್ರಕಟಿಸಿದ ಲೇಖನ ಕಂಡುಬಂದಿದೆ. ಆ ಲೇಖನದ ಪ್ರಕಾರ, ಆ ವ್ಯಕ್ತಿಯು CPI-ML ಪಕ್ಷಕ್ಕೆ ಸೇರಿದ ಆಫ್ತಾಬ್ ಆಲಂ ಆಗಿದ್ದು, ಬಿಹಾರದ ಔರಾಯ್ ವಿಧಾನಸಭಾ ಕ್ಷೇತ್ರ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಲು ಬಂದಾಗ ಅವರನ್ನು ಪೋಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಸರ್ಕಾರಿ ಕಾರ್ಯಕಲಾಪದಲ್ಲಿ ಮಧ್ಯಪ್ರವೆಶಿಸಿದ ಕಾರಣದಿಂದ ಜಿಲ್ಲಾಧಿಕಾರಿ ಆಧೇಶದ ಮೇರೆಗೆ ಆಪ್ತಭ್ ಆಲಂರನ್ನು ಬಂಧಿಸಿದ್ದೇವೆಂದು ಪೋಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆಗಸ್ಟ್ 2020ರಲ್ಲಿ ಜರುಗಿದ ದೀಪಕ್ ರಾಯ್ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಾನು ಮಾಡಿದ ಶಾಂತಿಯುತ ಹೋರಾಟಗಳನ್ನು ಕೆಲವರು ರಾಜಕೀಯಗೊಳಿಸುತ್ತಿದ್ದಾರೆಂದು ಆಫ್ತಾಬ್ ಆಲಂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವಿಷಯವನ್ನು ಒಳಗೊಂಡಿರುವ ‘Hindustan Times’ ಸುದ್ದಿ ಸಂಸ್ಥೆ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು. ಈ ವಿವರಗಳ ಆಧಾರದ ಮೇಲೆ ಪೋಟೋದಲ್ಲಿನ ವ್ಯಕ್ತಿ ಕಾಂಗ್ರೆಸ್ ನಾಯಕನಲ್ಲ ಎಂದು ಖಚಿತವಾಗಿ ಹೇಳಬಹುದು. ಇನ್ನು, ಆತ ವಿಧಾನಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ  ವಿವರಗಳಲ್ಲಿಯೂ ಸಹ ಅವರ ಹೆಸರು ಮತ್ತು ಫೋಟೋವನ್ನು ಸ್ಪಷ್ಟವಾಗಿ ನೋಡಬಹುದು.

2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಸರಣಿ ಬಾಂಬ್ ದಾಳಿಗಳಿಗೂ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ದಾಳಿಗಳಿಗೆ ಸಂಬಂಧಿಸಿದಂತೆ NIA ದಾಖಲಿಸಿದ ಚಾರ್ಜ್‍ಶೀಟ್‍ನ ವರದಿ ಇಲ್ಲಿ ನೋಡಬಹುದು. ಈ ಘಟನೆಗೆ ಸಂಬಂಧಿಸಿದ ಮುಖ್ಯ ಅಪರಾಧಿಗಳ ಹೆಸರಗಳನ್ನು ತಿಳಿಸುತ್ತಾ NIA ಕೊಟ್ಟ ಪತ್ರಿಕಾ ಹೇಳಿಕೆಯಲ್ಲಿ ಆಫ್ತಬ್ ಆಲಂ ಹೆಸರು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಇತ್ತೀಚೆಗೆ ಬಂಧನಕ್ಕೊಳಗಾದ ಆಫ್ತಬ್ ಆಲಂಗೂ ಸರಣಿ ಬಾಂಬ್ ದಾಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಈ ವಿವರಗಳ ಆಧಾರದ ಮೇಲೆ ಹೇಳಬಹುದು.

ಒಟ್ಟಿನಲ್ಲಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿ ಬಂಧಿತನಾದ ಆಫ್ತಾಬ್ ಆಲಂಗೂ 2013ರಲ್ಲಿ ಪಾಟ್ನಾದಲ್ಲಿ ನಡೆದ ಸರಣಿ ಬಾಂಬ್ ದಾಳಿಗೂ ಸಂಬಂಧವಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...