Homeಫ್ಯಾಕ್ಟ್‌ಚೆಕ್ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ನಾಮಪತ್ರ ಸಲ್ಲಿಸಲು ಬಂದ ವ್ಯಕ್ತಿಯನ್ನು ಪೋಲೀಸರು ಬಂಧಿಸಿ ಕರೆದೊಯ್ಯುತ್ತಿರುವ ಫೋಟೋದೊಂದಿಗೆ ‘ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿದ್ದ ಪಾಕಿಸ್ತಾನದ ಉಗ್ರವಾದಿಯನ್ನು ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿಯೇ ಬಂಧಿಸಿದ NIA’ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವ್ಯಕ್ತಿಯು 2014ರಲ್ಲಿ ನರೇಂದ್ರ ಮೋದಿಯವರು  ಪಾಲ್ಗೊಂಡ ಬಹಿರಂಗ ಸಭೆಯೊಂದರಲ್ಲಿ ಬಾಂಬ್ ದಾಳಿ ಮಾಡಿದ ಭಯೊತ್ಪಾದಕರಲ್ಲಿ ಒಬ್ಬನಾಗಿದ್ದು, ಆ ಪ್ರಕರಣದಲ್ಲಿ ಜಾಮೀನು ಸಿಕ್ಕಕೂಡಲೇ ಪಾಕಿಸ್ತಾನಕ್ಕೆ ಓಡಿ ಹೋಗಿದ್ದಾನೆಂದು ಬಿಜೆಪಿ ಪಕ್ಷ ಮತ್ತು ನ್ಯೂಸ್ 18 ಹಿಂದಿ ಚಾನೆಲ್ ವರದಿ ಮಾಡಿದೆ. ಇದು ನಿಜವೆ ಪರಿಶೀಲಿಸೋಣ ಬನ್ನಿ.

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಪೋಟೋದಲ್ಲಿ ಕಾಣಿಸುತ್ತಿರುವ ವ್ಯಕ್ತಿ  ಬಿಹಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲ. ಅವರು ಮಹಾಘಟಬಂಧನ್ ಮೈತ್ರಿಕೂಟದ ಸಿಪಿಐ-ಎಂಎಲ್ ಪಕ್ಷದ ಅಭ್ಯರ್ಥಿ ಆಫ್ತಾಬ್ ಆಲಂ ಆಗಿದ್ದಾರೆ.  ಸರ್ಕಾರಿ ಕೆಲಸದಲ್ಲಿ ಮಧ್ಯಪ್ರವೇಶ ಮಾಡಿದ ಆರೋಪದ ಮೇಲೆ ಮುಝಾಪುರ್ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಪ್ತಾಬ್ ಆಲಂರನ್ನು ಪೋಲೀಸರು ಬಂಧಿಸಿದರು. 2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಬಾಂಬ್ ದಾಳಿಗೂ, ಆಫ್ತಾಬ್ ಆಲಂಗೂ ಯಾವುದೇ ಸಂಬಂಧವಿಲ್ಲ.

ಪೋಸ್ಟ್‌ನಲ್ಲಿ ಹಂಚಿಕೊಂಡ ಪೋಟೋಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಇದೆ ಫೋಟೊ ‘Nav Bharat Times’ ನ್ಯೂಸ್ ವೆಬ್ ಸೈಟ್ 16 ಅಕ್ಟೋಬರ್ 2020 ರಂದು ಪ್ರಕಟಿಸಿದ ಲೇಖನ ಕಂಡುಬಂದಿದೆ. ಆ ಲೇಖನದ ಪ್ರಕಾರ, ಆ ವ್ಯಕ್ತಿಯು CPI-ML ಪಕ್ಷಕ್ಕೆ ಸೇರಿದ ಆಫ್ತಾಬ್ ಆಲಂ ಆಗಿದ್ದು, ಬಿಹಾರದ ಔರಾಯ್ ವಿಧಾನಸಭಾ ಕ್ಷೇತ್ರ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಲು ಬಂದಾಗ ಅವರನ್ನು ಪೋಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಸರ್ಕಾರಿ ಕಾರ್ಯಕಲಾಪದಲ್ಲಿ ಮಧ್ಯಪ್ರವೆಶಿಸಿದ ಕಾರಣದಿಂದ ಜಿಲ್ಲಾಧಿಕಾರಿ ಆಧೇಶದ ಮೇರೆಗೆ ಆಪ್ತಭ್ ಆಲಂರನ್ನು ಬಂಧಿಸಿದ್ದೇವೆಂದು ಪೋಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆಗಸ್ಟ್ 2020ರಲ್ಲಿ ಜರುಗಿದ ದೀಪಕ್ ರಾಯ್ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಾನು ಮಾಡಿದ ಶಾಂತಿಯುತ ಹೋರಾಟಗಳನ್ನು ಕೆಲವರು ರಾಜಕೀಯಗೊಳಿಸುತ್ತಿದ್ದಾರೆಂದು ಆಫ್ತಾಬ್ ಆಲಂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವಿಷಯವನ್ನು ಒಳಗೊಂಡಿರುವ ‘Hindustan Times’ ಸುದ್ದಿ ಸಂಸ್ಥೆ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು. ಈ ವಿವರಗಳ ಆಧಾರದ ಮೇಲೆ ಪೋಟೋದಲ್ಲಿನ ವ್ಯಕ್ತಿ ಕಾಂಗ್ರೆಸ್ ನಾಯಕನಲ್ಲ ಎಂದು ಖಚಿತವಾಗಿ ಹೇಳಬಹುದು. ಇನ್ನು, ಆತ ವಿಧಾನಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ  ವಿವರಗಳಲ್ಲಿಯೂ ಸಹ ಅವರ ಹೆಸರು ಮತ್ತು ಫೋಟೋವನ್ನು ಸ್ಪಷ್ಟವಾಗಿ ನೋಡಬಹುದು.

2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಸರಣಿ ಬಾಂಬ್ ದಾಳಿಗಳಿಗೂ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ದಾಳಿಗಳಿಗೆ ಸಂಬಂಧಿಸಿದಂತೆ NIA ದಾಖಲಿಸಿದ ಚಾರ್ಜ್‍ಶೀಟ್‍ನ ವರದಿ ಇಲ್ಲಿ ನೋಡಬಹುದು. ಈ ಘಟನೆಗೆ ಸಂಬಂಧಿಸಿದ ಮುಖ್ಯ ಅಪರಾಧಿಗಳ ಹೆಸರಗಳನ್ನು ತಿಳಿಸುತ್ತಾ NIA ಕೊಟ್ಟ ಪತ್ರಿಕಾ ಹೇಳಿಕೆಯಲ್ಲಿ ಆಫ್ತಬ್ ಆಲಂ ಹೆಸರು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಇತ್ತೀಚೆಗೆ ಬಂಧನಕ್ಕೊಳಗಾದ ಆಫ್ತಬ್ ಆಲಂಗೂ ಸರಣಿ ಬಾಂಬ್ ದಾಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಈ ವಿವರಗಳ ಆಧಾರದ ಮೇಲೆ ಹೇಳಬಹುದು.

ಒಟ್ಟಿನಲ್ಲಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿ ಬಂಧಿತನಾದ ಆಫ್ತಾಬ್ ಆಲಂಗೂ 2013ರಲ್ಲಿ ಪಾಟ್ನಾದಲ್ಲಿ ನಡೆದ ಸರಣಿ ಬಾಂಬ್ ದಾಳಿಗೂ ಸಂಬಂಧವಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...