Homeಫ್ಯಾಕ್ಟ್‌ಚೆಕ್ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ನಾಮಪತ್ರ ಸಲ್ಲಿಸಲು ಬಂದ ವ್ಯಕ್ತಿಯನ್ನು ಪೋಲೀಸರು ಬಂಧಿಸಿ ಕರೆದೊಯ್ಯುತ್ತಿರುವ ಫೋಟೋದೊಂದಿಗೆ ‘ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿದ್ದ ಪಾಕಿಸ್ತಾನದ ಉಗ್ರವಾದಿಯನ್ನು ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿಯೇ ಬಂಧಿಸಿದ NIA’ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವ್ಯಕ್ತಿಯು 2014ರಲ್ಲಿ ನರೇಂದ್ರ ಮೋದಿಯವರು  ಪಾಲ್ಗೊಂಡ ಬಹಿರಂಗ ಸಭೆಯೊಂದರಲ್ಲಿ ಬಾಂಬ್ ದಾಳಿ ಮಾಡಿದ ಭಯೊತ್ಪಾದಕರಲ್ಲಿ ಒಬ್ಬನಾಗಿದ್ದು, ಆ ಪ್ರಕರಣದಲ್ಲಿ ಜಾಮೀನು ಸಿಕ್ಕಕೂಡಲೇ ಪಾಕಿಸ್ತಾನಕ್ಕೆ ಓಡಿ ಹೋಗಿದ್ದಾನೆಂದು ಬಿಜೆಪಿ ಪಕ್ಷ ಮತ್ತು ನ್ಯೂಸ್ 18 ಹಿಂದಿ ಚಾನೆಲ್ ವರದಿ ಮಾಡಿದೆ. ಇದು ನಿಜವೆ ಪರಿಶೀಲಿಸೋಣ ಬನ್ನಿ.

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಪೋಟೋದಲ್ಲಿ ಕಾಣಿಸುತ್ತಿರುವ ವ್ಯಕ್ತಿ  ಬಿಹಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲ. ಅವರು ಮಹಾಘಟಬಂಧನ್ ಮೈತ್ರಿಕೂಟದ ಸಿಪಿಐ-ಎಂಎಲ್ ಪಕ್ಷದ ಅಭ್ಯರ್ಥಿ ಆಫ್ತಾಬ್ ಆಲಂ ಆಗಿದ್ದಾರೆ.  ಸರ್ಕಾರಿ ಕೆಲಸದಲ್ಲಿ ಮಧ್ಯಪ್ರವೇಶ ಮಾಡಿದ ಆರೋಪದ ಮೇಲೆ ಮುಝಾಪುರ್ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಪ್ತಾಬ್ ಆಲಂರನ್ನು ಪೋಲೀಸರು ಬಂಧಿಸಿದರು. 2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಬಾಂಬ್ ದಾಳಿಗೂ, ಆಫ್ತಾಬ್ ಆಲಂಗೂ ಯಾವುದೇ ಸಂಬಂಧವಿಲ್ಲ.

ಪೋಸ್ಟ್‌ನಲ್ಲಿ ಹಂಚಿಕೊಂಡ ಪೋಟೋಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಇದೆ ಫೋಟೊ ‘Nav Bharat Times’ ನ್ಯೂಸ್ ವೆಬ್ ಸೈಟ್ 16 ಅಕ್ಟೋಬರ್ 2020 ರಂದು ಪ್ರಕಟಿಸಿದ ಲೇಖನ ಕಂಡುಬಂದಿದೆ. ಆ ಲೇಖನದ ಪ್ರಕಾರ, ಆ ವ್ಯಕ್ತಿಯು CPI-ML ಪಕ್ಷಕ್ಕೆ ಸೇರಿದ ಆಫ್ತಾಬ್ ಆಲಂ ಆಗಿದ್ದು, ಬಿಹಾರದ ಔರಾಯ್ ವಿಧಾನಸಭಾ ಕ್ಷೇತ್ರ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಲು ಬಂದಾಗ ಅವರನ್ನು ಪೋಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಸರ್ಕಾರಿ ಕಾರ್ಯಕಲಾಪದಲ್ಲಿ ಮಧ್ಯಪ್ರವೆಶಿಸಿದ ಕಾರಣದಿಂದ ಜಿಲ್ಲಾಧಿಕಾರಿ ಆಧೇಶದ ಮೇರೆಗೆ ಆಪ್ತಭ್ ಆಲಂರನ್ನು ಬಂಧಿಸಿದ್ದೇವೆಂದು ಪೋಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆಗಸ್ಟ್ 2020ರಲ್ಲಿ ಜರುಗಿದ ದೀಪಕ್ ರಾಯ್ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಾನು ಮಾಡಿದ ಶಾಂತಿಯುತ ಹೋರಾಟಗಳನ್ನು ಕೆಲವರು ರಾಜಕೀಯಗೊಳಿಸುತ್ತಿದ್ದಾರೆಂದು ಆಫ್ತಾಬ್ ಆಲಂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವಿಷಯವನ್ನು ಒಳಗೊಂಡಿರುವ ‘Hindustan Times’ ಸುದ್ದಿ ಸಂಸ್ಥೆ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು. ಈ ವಿವರಗಳ ಆಧಾರದ ಮೇಲೆ ಪೋಟೋದಲ್ಲಿನ ವ್ಯಕ್ತಿ ಕಾಂಗ್ರೆಸ್ ನಾಯಕನಲ್ಲ ಎಂದು ಖಚಿತವಾಗಿ ಹೇಳಬಹುದು. ಇನ್ನು, ಆತ ವಿಧಾನಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ  ವಿವರಗಳಲ್ಲಿಯೂ ಸಹ ಅವರ ಹೆಸರು ಮತ್ತು ಫೋಟೋವನ್ನು ಸ್ಪಷ್ಟವಾಗಿ ನೋಡಬಹುದು.

2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಸರಣಿ ಬಾಂಬ್ ದಾಳಿಗಳಿಗೂ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ದಾಳಿಗಳಿಗೆ ಸಂಬಂಧಿಸಿದಂತೆ NIA ದಾಖಲಿಸಿದ ಚಾರ್ಜ್‍ಶೀಟ್‍ನ ವರದಿ ಇಲ್ಲಿ ನೋಡಬಹುದು. ಈ ಘಟನೆಗೆ ಸಂಬಂಧಿಸಿದ ಮುಖ್ಯ ಅಪರಾಧಿಗಳ ಹೆಸರಗಳನ್ನು ತಿಳಿಸುತ್ತಾ NIA ಕೊಟ್ಟ ಪತ್ರಿಕಾ ಹೇಳಿಕೆಯಲ್ಲಿ ಆಫ್ತಬ್ ಆಲಂ ಹೆಸರು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಇತ್ತೀಚೆಗೆ ಬಂಧನಕ್ಕೊಳಗಾದ ಆಫ್ತಬ್ ಆಲಂಗೂ ಸರಣಿ ಬಾಂಬ್ ದಾಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಈ ವಿವರಗಳ ಆಧಾರದ ಮೇಲೆ ಹೇಳಬಹುದು.

ಒಟ್ಟಿನಲ್ಲಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿ ಬಂಧಿತನಾದ ಆಫ್ತಾಬ್ ಆಲಂಗೂ 2013ರಲ್ಲಿ ಪಾಟ್ನಾದಲ್ಲಿ ನಡೆದ ಸರಣಿ ಬಾಂಬ್ ದಾಳಿಗೂ ಸಂಬಂಧವಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...