Homeಫ್ಯಾಕ್ಟ್‌ಚೆಕ್ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ನಾಮಪತ್ರ ಸಲ್ಲಿಸಲು ಬಂದ ವ್ಯಕ್ತಿಯನ್ನು ಪೋಲೀಸರು ಬಂಧಿಸಿ ಕರೆದೊಯ್ಯುತ್ತಿರುವ ಫೋಟೋದೊಂದಿಗೆ ‘ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿದ್ದ ಪಾಕಿಸ್ತಾನದ ಉಗ್ರವಾದಿಯನ್ನು ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿಯೇ ಬಂಧಿಸಿದ NIA’ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವ್ಯಕ್ತಿಯು 2014ರಲ್ಲಿ ನರೇಂದ್ರ ಮೋದಿಯವರು  ಪಾಲ್ಗೊಂಡ ಬಹಿರಂಗ ಸಭೆಯೊಂದರಲ್ಲಿ ಬಾಂಬ್ ದಾಳಿ ಮಾಡಿದ ಭಯೊತ್ಪಾದಕರಲ್ಲಿ ಒಬ್ಬನಾಗಿದ್ದು, ಆ ಪ್ರಕರಣದಲ್ಲಿ ಜಾಮೀನು ಸಿಕ್ಕಕೂಡಲೇ ಪಾಕಿಸ್ತಾನಕ್ಕೆ ಓಡಿ ಹೋಗಿದ್ದಾನೆಂದು ಬಿಜೆಪಿ ಪಕ್ಷ ಮತ್ತು ನ್ಯೂಸ್ 18 ಹಿಂದಿ ಚಾನೆಲ್ ವರದಿ ಮಾಡಿದೆ. ಇದು ನಿಜವೆ ಪರಿಶೀಲಿಸೋಣ ಬನ್ನಿ.

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಪೋಟೋದಲ್ಲಿ ಕಾಣಿಸುತ್ತಿರುವ ವ್ಯಕ್ತಿ  ಬಿಹಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲ. ಅವರು ಮಹಾಘಟಬಂಧನ್ ಮೈತ್ರಿಕೂಟದ ಸಿಪಿಐ-ಎಂಎಲ್ ಪಕ್ಷದ ಅಭ್ಯರ್ಥಿ ಆಫ್ತಾಬ್ ಆಲಂ ಆಗಿದ್ದಾರೆ.  ಸರ್ಕಾರಿ ಕೆಲಸದಲ್ಲಿ ಮಧ್ಯಪ್ರವೇಶ ಮಾಡಿದ ಆರೋಪದ ಮೇಲೆ ಮುಝಾಪುರ್ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಪ್ತಾಬ್ ಆಲಂರನ್ನು ಪೋಲೀಸರು ಬಂಧಿಸಿದರು. 2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಬಾಂಬ್ ದಾಳಿಗೂ, ಆಫ್ತಾಬ್ ಆಲಂಗೂ ಯಾವುದೇ ಸಂಬಂಧವಿಲ್ಲ.

ಪೋಸ್ಟ್‌ನಲ್ಲಿ ಹಂಚಿಕೊಂಡ ಪೋಟೋಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಇದೆ ಫೋಟೊ ‘Nav Bharat Times’ ನ್ಯೂಸ್ ವೆಬ್ ಸೈಟ್ 16 ಅಕ್ಟೋಬರ್ 2020 ರಂದು ಪ್ರಕಟಿಸಿದ ಲೇಖನ ಕಂಡುಬಂದಿದೆ. ಆ ಲೇಖನದ ಪ್ರಕಾರ, ಆ ವ್ಯಕ್ತಿಯು CPI-ML ಪಕ್ಷಕ್ಕೆ ಸೇರಿದ ಆಫ್ತಾಬ್ ಆಲಂ ಆಗಿದ್ದು, ಬಿಹಾರದ ಔರಾಯ್ ವಿಧಾನಸಭಾ ಕ್ಷೇತ್ರ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಲು ಬಂದಾಗ ಅವರನ್ನು ಪೋಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಸರ್ಕಾರಿ ಕಾರ್ಯಕಲಾಪದಲ್ಲಿ ಮಧ್ಯಪ್ರವೆಶಿಸಿದ ಕಾರಣದಿಂದ ಜಿಲ್ಲಾಧಿಕಾರಿ ಆಧೇಶದ ಮೇರೆಗೆ ಆಪ್ತಭ್ ಆಲಂರನ್ನು ಬಂಧಿಸಿದ್ದೇವೆಂದು ಪೋಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆಗಸ್ಟ್ 2020ರಲ್ಲಿ ಜರುಗಿದ ದೀಪಕ್ ರಾಯ್ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಾನು ಮಾಡಿದ ಶಾಂತಿಯುತ ಹೋರಾಟಗಳನ್ನು ಕೆಲವರು ರಾಜಕೀಯಗೊಳಿಸುತ್ತಿದ್ದಾರೆಂದು ಆಫ್ತಾಬ್ ಆಲಂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವಿಷಯವನ್ನು ಒಳಗೊಂಡಿರುವ ‘Hindustan Times’ ಸುದ್ದಿ ಸಂಸ್ಥೆ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು. ಈ ವಿವರಗಳ ಆಧಾರದ ಮೇಲೆ ಪೋಟೋದಲ್ಲಿನ ವ್ಯಕ್ತಿ ಕಾಂಗ್ರೆಸ್ ನಾಯಕನಲ್ಲ ಎಂದು ಖಚಿತವಾಗಿ ಹೇಳಬಹುದು. ಇನ್ನು, ಆತ ವಿಧಾನಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ  ವಿವರಗಳಲ್ಲಿಯೂ ಸಹ ಅವರ ಹೆಸರು ಮತ್ತು ಫೋಟೋವನ್ನು ಸ್ಪಷ್ಟವಾಗಿ ನೋಡಬಹುದು.

2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಸರಣಿ ಬಾಂಬ್ ದಾಳಿಗಳಿಗೂ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ದಾಳಿಗಳಿಗೆ ಸಂಬಂಧಿಸಿದಂತೆ NIA ದಾಖಲಿಸಿದ ಚಾರ್ಜ್‍ಶೀಟ್‍ನ ವರದಿ ಇಲ್ಲಿ ನೋಡಬಹುದು. ಈ ಘಟನೆಗೆ ಸಂಬಂಧಿಸಿದ ಮುಖ್ಯ ಅಪರಾಧಿಗಳ ಹೆಸರಗಳನ್ನು ತಿಳಿಸುತ್ತಾ NIA ಕೊಟ್ಟ ಪತ್ರಿಕಾ ಹೇಳಿಕೆಯಲ್ಲಿ ಆಫ್ತಬ್ ಆಲಂ ಹೆಸರು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಇತ್ತೀಚೆಗೆ ಬಂಧನಕ್ಕೊಳಗಾದ ಆಫ್ತಬ್ ಆಲಂಗೂ ಸರಣಿ ಬಾಂಬ್ ದಾಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಈ ವಿವರಗಳ ಆಧಾರದ ಮೇಲೆ ಹೇಳಬಹುದು.

ಒಟ್ಟಿನಲ್ಲಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿ ಬಂಧಿತನಾದ ಆಫ್ತಾಬ್ ಆಲಂಗೂ 2013ರಲ್ಲಿ ಪಾಟ್ನಾದಲ್ಲಿ ನಡೆದ ಸರಣಿ ಬಾಂಬ್ ದಾಳಿಗೂ ಸಂಬಂಧವಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...