Homeಫ್ಯಾಕ್ಟ್‌ಚೆಕ್ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ನಾಮಪತ್ರ ಸಲ್ಲಿಸಲು ಬಂದ ವ್ಯಕ್ತಿಯನ್ನು ಪೋಲೀಸರು ಬಂಧಿಸಿ ಕರೆದೊಯ್ಯುತ್ತಿರುವ ಫೋಟೋದೊಂದಿಗೆ ‘ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿದ್ದ ಪಾಕಿಸ್ತಾನದ ಉಗ್ರವಾದಿಯನ್ನು ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿಯೇ ಬಂಧಿಸಿದ NIA’ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವ್ಯಕ್ತಿಯು 2014ರಲ್ಲಿ ನರೇಂದ್ರ ಮೋದಿಯವರು  ಪಾಲ್ಗೊಂಡ ಬಹಿರಂಗ ಸಭೆಯೊಂದರಲ್ಲಿ ಬಾಂಬ್ ದಾಳಿ ಮಾಡಿದ ಭಯೊತ್ಪಾದಕರಲ್ಲಿ ಒಬ್ಬನಾಗಿದ್ದು, ಆ ಪ್ರಕರಣದಲ್ಲಿ ಜಾಮೀನು ಸಿಕ್ಕಕೂಡಲೇ ಪಾಕಿಸ್ತಾನಕ್ಕೆ ಓಡಿ ಹೋಗಿದ್ದಾನೆಂದು ಬಿಜೆಪಿ ಪಕ್ಷ ಮತ್ತು ನ್ಯೂಸ್ 18 ಹಿಂದಿ ಚಾನೆಲ್ ವರದಿ ಮಾಡಿದೆ. ಇದು ನಿಜವೆ ಪರಿಶೀಲಿಸೋಣ ಬನ್ನಿ.

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಪೋಟೋದಲ್ಲಿ ಕಾಣಿಸುತ್ತಿರುವ ವ್ಯಕ್ತಿ  ಬಿಹಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲ. ಅವರು ಮಹಾಘಟಬಂಧನ್ ಮೈತ್ರಿಕೂಟದ ಸಿಪಿಐ-ಎಂಎಲ್ ಪಕ್ಷದ ಅಭ್ಯರ್ಥಿ ಆಫ್ತಾಬ್ ಆಲಂ ಆಗಿದ್ದಾರೆ.  ಸರ್ಕಾರಿ ಕೆಲಸದಲ್ಲಿ ಮಧ್ಯಪ್ರವೇಶ ಮಾಡಿದ ಆರೋಪದ ಮೇಲೆ ಮುಝಾಪುರ್ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಪ್ತಾಬ್ ಆಲಂರನ್ನು ಪೋಲೀಸರು ಬಂಧಿಸಿದರು. 2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಬಾಂಬ್ ದಾಳಿಗೂ, ಆಫ್ತಾಬ್ ಆಲಂಗೂ ಯಾವುದೇ ಸಂಬಂಧವಿಲ್ಲ.

ಪೋಸ್ಟ್‌ನಲ್ಲಿ ಹಂಚಿಕೊಂಡ ಪೋಟೋಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಇದೆ ಫೋಟೊ ‘Nav Bharat Times’ ನ್ಯೂಸ್ ವೆಬ್ ಸೈಟ್ 16 ಅಕ್ಟೋಬರ್ 2020 ರಂದು ಪ್ರಕಟಿಸಿದ ಲೇಖನ ಕಂಡುಬಂದಿದೆ. ಆ ಲೇಖನದ ಪ್ರಕಾರ, ಆ ವ್ಯಕ್ತಿಯು CPI-ML ಪಕ್ಷಕ್ಕೆ ಸೇರಿದ ಆಫ್ತಾಬ್ ಆಲಂ ಆಗಿದ್ದು, ಬಿಹಾರದ ಔರಾಯ್ ವಿಧಾನಸಭಾ ಕ್ಷೇತ್ರ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಲು ಬಂದಾಗ ಅವರನ್ನು ಪೋಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಸರ್ಕಾರಿ ಕಾರ್ಯಕಲಾಪದಲ್ಲಿ ಮಧ್ಯಪ್ರವೆಶಿಸಿದ ಕಾರಣದಿಂದ ಜಿಲ್ಲಾಧಿಕಾರಿ ಆಧೇಶದ ಮೇರೆಗೆ ಆಪ್ತಭ್ ಆಲಂರನ್ನು ಬಂಧಿಸಿದ್ದೇವೆಂದು ಪೋಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆಗಸ್ಟ್ 2020ರಲ್ಲಿ ಜರುಗಿದ ದೀಪಕ್ ರಾಯ್ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಾನು ಮಾಡಿದ ಶಾಂತಿಯುತ ಹೋರಾಟಗಳನ್ನು ಕೆಲವರು ರಾಜಕೀಯಗೊಳಿಸುತ್ತಿದ್ದಾರೆಂದು ಆಫ್ತಾಬ್ ಆಲಂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವಿಷಯವನ್ನು ಒಳಗೊಂಡಿರುವ ‘Hindustan Times’ ಸುದ್ದಿ ಸಂಸ್ಥೆ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು. ಈ ವಿವರಗಳ ಆಧಾರದ ಮೇಲೆ ಪೋಟೋದಲ್ಲಿನ ವ್ಯಕ್ತಿ ಕಾಂಗ್ರೆಸ್ ನಾಯಕನಲ್ಲ ಎಂದು ಖಚಿತವಾಗಿ ಹೇಳಬಹುದು. ಇನ್ನು, ಆತ ವಿಧಾನಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ  ವಿವರಗಳಲ್ಲಿಯೂ ಸಹ ಅವರ ಹೆಸರು ಮತ್ತು ಫೋಟೋವನ್ನು ಸ್ಪಷ್ಟವಾಗಿ ನೋಡಬಹುದು.

2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಸರಣಿ ಬಾಂಬ್ ದಾಳಿಗಳಿಗೂ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ದಾಳಿಗಳಿಗೆ ಸಂಬಂಧಿಸಿದಂತೆ NIA ದಾಖಲಿಸಿದ ಚಾರ್ಜ್‍ಶೀಟ್‍ನ ವರದಿ ಇಲ್ಲಿ ನೋಡಬಹುದು. ಈ ಘಟನೆಗೆ ಸಂಬಂಧಿಸಿದ ಮುಖ್ಯ ಅಪರಾಧಿಗಳ ಹೆಸರಗಳನ್ನು ತಿಳಿಸುತ್ತಾ NIA ಕೊಟ್ಟ ಪತ್ರಿಕಾ ಹೇಳಿಕೆಯಲ್ಲಿ ಆಫ್ತಬ್ ಆಲಂ ಹೆಸರು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಇತ್ತೀಚೆಗೆ ಬಂಧನಕ್ಕೊಳಗಾದ ಆಫ್ತಬ್ ಆಲಂಗೂ ಸರಣಿ ಬಾಂಬ್ ದಾಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಈ ವಿವರಗಳ ಆಧಾರದ ಮೇಲೆ ಹೇಳಬಹುದು.

ಒಟ್ಟಿನಲ್ಲಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿ ಬಂಧಿತನಾದ ಆಫ್ತಾಬ್ ಆಲಂಗೂ 2013ರಲ್ಲಿ ಪಾಟ್ನಾದಲ್ಲಿ ನಡೆದ ಸರಣಿ ಬಾಂಬ್ ದಾಳಿಗೂ ಸಂಬಂಧವಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...