Homeಮುಖಪುಟಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

ಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

- Advertisement -
- Advertisement -

ಬಿಹಾರದಲ್ಲಿ ಯುವಕನ ಲಾಕಪ್ ಡೆತ್ ವಿರೋಧಿಸಿ ಪ್ರತಿಭಟನೆ ನಡೆಸಿದ ಉದ್ರಿಕ್ತ ಗುಂಪಿನಿಂದಾಗಿ ಮಹಿಳಾ ಪೇದೆ ಸಾವನ್ನಪ್ಪಿದ್ದು, ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಜೆಹನಾಬಾದ್ ಜಿಲ್ಲೆಯ ಪರಾಸ್ಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಯಲ್ಲೇ ಮೃತ ಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಲು ತೂರಾಟದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪ್ರತಿಭಟನೆಯಿಂದಾಗಿ ಜೆಹಾನಾಬಾದ್-ಅರ್ವಾಲ್ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಜೆಹಾನಾಬಾದ್) ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಗೋವಿಂದ್ ಮಾಂಝಿ ಎಂಬಾತ ಮದ್ಯ ವ್ಯಾಪಾರದಲ್ಲಿ ತೊಡಗಿದ್ದಕ್ಕಾಗಿ ಸ್ವಲ್ಪ ಸಮಯದ ಹಿಂದೆ ಪೊಲೀಸರು ಬಂಧಿಸಿದ್ದರು. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಪಕ್ಕದ ಔರಂಗಾಬಾದ್ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಆತನ ಗ್ರಾಮಸ್ಥರಿಗೆ ತಲುಪಿತ್ತು. ಇದರಿಂದ ಗ್ರಾಮಸ್ಥರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.

“ಮಾಂಝಿ ಶುಕ್ರವಾರ ಜೈಲಿನಲ್ಲಿ ನಿಧನರಾದರು. ಸುದ್ದಿ ಗ್ರಾಮಸ್ಥರಿಗೆ ತಲುಪುತ್ತಿದ್ದಂತೆ, ಅವರ ಹಳ್ಳಿಯ ಜನರ ಗುಂಪು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಕಲ್ಲು ತೂರಾಟ ತಡೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಆರಂಭವಾಯಿತು” ಎಂದು ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರ ಕಠಿಣ ನಿಷೇಧ ಕಾನೂನು ತಂದಿದ್ದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

“ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಪರವಾನಗಿ ಪಡೆಯದ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಹಲವಾರು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ನಾವು ಐದು ಜನರನ್ನು ಬಂಧಿಸಿದ್ದೇವೆ” ಎಂದು ಪಾಂಡೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...