Homeಮುಖಪುಟಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

ಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

- Advertisement -
- Advertisement -

ಬಿಹಾರದಲ್ಲಿ ಯುವಕನ ಲಾಕಪ್ ಡೆತ್ ವಿರೋಧಿಸಿ ಪ್ರತಿಭಟನೆ ನಡೆಸಿದ ಉದ್ರಿಕ್ತ ಗುಂಪಿನಿಂದಾಗಿ ಮಹಿಳಾ ಪೇದೆ ಸಾವನ್ನಪ್ಪಿದ್ದು, ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಜೆಹನಾಬಾದ್ ಜಿಲ್ಲೆಯ ಪರಾಸ್ಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಯಲ್ಲೇ ಮೃತ ಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಲು ತೂರಾಟದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪ್ರತಿಭಟನೆಯಿಂದಾಗಿ ಜೆಹಾನಾಬಾದ್-ಅರ್ವಾಲ್ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಜೆಹಾನಾಬಾದ್) ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಗೋವಿಂದ್ ಮಾಂಝಿ ಎಂಬಾತ ಮದ್ಯ ವ್ಯಾಪಾರದಲ್ಲಿ ತೊಡಗಿದ್ದಕ್ಕಾಗಿ ಸ್ವಲ್ಪ ಸಮಯದ ಹಿಂದೆ ಪೊಲೀಸರು ಬಂಧಿಸಿದ್ದರು. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಪಕ್ಕದ ಔರಂಗಾಬಾದ್ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಆತನ ಗ್ರಾಮಸ್ಥರಿಗೆ ತಲುಪಿತ್ತು. ಇದರಿಂದ ಗ್ರಾಮಸ್ಥರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.

“ಮಾಂಝಿ ಶುಕ್ರವಾರ ಜೈಲಿನಲ್ಲಿ ನಿಧನರಾದರು. ಸುದ್ದಿ ಗ್ರಾಮಸ್ಥರಿಗೆ ತಲುಪುತ್ತಿದ್ದಂತೆ, ಅವರ ಹಳ್ಳಿಯ ಜನರ ಗುಂಪು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಕಲ್ಲು ತೂರಾಟ ತಡೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಆರಂಭವಾಯಿತು” ಎಂದು ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರ ಕಠಿಣ ನಿಷೇಧ ಕಾನೂನು ತಂದಿದ್ದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

“ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಪರವಾನಗಿ ಪಡೆಯದ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಹಲವಾರು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ನಾವು ಐದು ಜನರನ್ನು ಬಂಧಿಸಿದ್ದೇವೆ” ಎಂದು ಪಾಂಡೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...