Homeಮುಖಪುಟಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

ಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

- Advertisement -
- Advertisement -

ಬಿಹಾರದಲ್ಲಿ ಯುವಕನ ಲಾಕಪ್ ಡೆತ್ ವಿರೋಧಿಸಿ ಪ್ರತಿಭಟನೆ ನಡೆಸಿದ ಉದ್ರಿಕ್ತ ಗುಂಪಿನಿಂದಾಗಿ ಮಹಿಳಾ ಪೇದೆ ಸಾವನ್ನಪ್ಪಿದ್ದು, ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಜೆಹನಾಬಾದ್ ಜಿಲ್ಲೆಯ ಪರಾಸ್ಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಯಲ್ಲೇ ಮೃತ ಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಲು ತೂರಾಟದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪ್ರತಿಭಟನೆಯಿಂದಾಗಿ ಜೆಹಾನಾಬಾದ್-ಅರ್ವಾಲ್ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಜೆಹಾನಾಬಾದ್) ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಗೋವಿಂದ್ ಮಾಂಝಿ ಎಂಬಾತ ಮದ್ಯ ವ್ಯಾಪಾರದಲ್ಲಿ ತೊಡಗಿದ್ದಕ್ಕಾಗಿ ಸ್ವಲ್ಪ ಸಮಯದ ಹಿಂದೆ ಪೊಲೀಸರು ಬಂಧಿಸಿದ್ದರು. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಪಕ್ಕದ ಔರಂಗಾಬಾದ್ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಆತನ ಗ್ರಾಮಸ್ಥರಿಗೆ ತಲುಪಿತ್ತು. ಇದರಿಂದ ಗ್ರಾಮಸ್ಥರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.

“ಮಾಂಝಿ ಶುಕ್ರವಾರ ಜೈಲಿನಲ್ಲಿ ನಿಧನರಾದರು. ಸುದ್ದಿ ಗ್ರಾಮಸ್ಥರಿಗೆ ತಲುಪುತ್ತಿದ್ದಂತೆ, ಅವರ ಹಳ್ಳಿಯ ಜನರ ಗುಂಪು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಕಲ್ಲು ತೂರಾಟ ತಡೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಆರಂಭವಾಯಿತು” ಎಂದು ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರ ಕಠಿಣ ನಿಷೇಧ ಕಾನೂನು ತಂದಿದ್ದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

“ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಪರವಾನಗಿ ಪಡೆಯದ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಹಲವಾರು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ನಾವು ಐದು ಜನರನ್ನು ಬಂಧಿಸಿದ್ದೇವೆ” ಎಂದು ಪಾಂಡೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...