Homeಮುಖಪುಟಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

ಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

- Advertisement -
- Advertisement -

ಬಿಹಾರದಲ್ಲಿ ಯುವಕನ ಲಾಕಪ್ ಡೆತ್ ವಿರೋಧಿಸಿ ಪ್ರತಿಭಟನೆ ನಡೆಸಿದ ಉದ್ರಿಕ್ತ ಗುಂಪಿನಿಂದಾಗಿ ಮಹಿಳಾ ಪೇದೆ ಸಾವನ್ನಪ್ಪಿದ್ದು, ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಜೆಹನಾಬಾದ್ ಜಿಲ್ಲೆಯ ಪರಾಸ್ಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಯಲ್ಲೇ ಮೃತ ಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಲು ತೂರಾಟದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪ್ರತಿಭಟನೆಯಿಂದಾಗಿ ಜೆಹಾನಾಬಾದ್-ಅರ್ವಾಲ್ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಜೆಹಾನಾಬಾದ್) ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಗೋವಿಂದ್ ಮಾಂಝಿ ಎಂಬಾತ ಮದ್ಯ ವ್ಯಾಪಾರದಲ್ಲಿ ತೊಡಗಿದ್ದಕ್ಕಾಗಿ ಸ್ವಲ್ಪ ಸಮಯದ ಹಿಂದೆ ಪೊಲೀಸರು ಬಂಧಿಸಿದ್ದರು. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಪಕ್ಕದ ಔರಂಗಾಬಾದ್ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಆತನ ಗ್ರಾಮಸ್ಥರಿಗೆ ತಲುಪಿತ್ತು. ಇದರಿಂದ ಗ್ರಾಮಸ್ಥರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.

“ಮಾಂಝಿ ಶುಕ್ರವಾರ ಜೈಲಿನಲ್ಲಿ ನಿಧನರಾದರು. ಸುದ್ದಿ ಗ್ರಾಮಸ್ಥರಿಗೆ ತಲುಪುತ್ತಿದ್ದಂತೆ, ಅವರ ಹಳ್ಳಿಯ ಜನರ ಗುಂಪು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಕಲ್ಲು ತೂರಾಟ ತಡೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಆರಂಭವಾಯಿತು” ಎಂದು ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರ ಕಠಿಣ ನಿಷೇಧ ಕಾನೂನು ತಂದಿದ್ದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

“ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಪರವಾನಗಿ ಪಡೆಯದ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಹಲವಾರು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ನಾವು ಐದು ಜನರನ್ನು ಬಂಧಿಸಿದ್ದೇವೆ” ಎಂದು ಪಾಂಡೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...