Homeಮುಖಪುಟಬಿಹಾರ | ಮಗಳು ಗರ್ಭಿಣಿಯಾಗಲು 2 ವರ್ಷದ ಮಗುವಿನ ಕತ್ತು ಹಿಸುಕಿ, ಕಾಲು ಕತ್ತರಿಸಿ ಬಲಿ

ಬಿಹಾರ | ಮಗಳು ಗರ್ಭಿಣಿಯಾಗಲು 2 ವರ್ಷದ ಮಗುವಿನ ಕತ್ತು ಹಿಸುಕಿ, ಕಾಲು ಕತ್ತರಿಸಿ ಬಲಿ

- Advertisement -
- Advertisement -

ಮೂಢನಂಬಿಕೆಗಳಿಂದ ಪ್ರೇರಿತಳಾಗಿ ತನ್ನ ಮಗಳು ಗರ್ಭಿಣಿಯಾಗುವ ಉದ್ದೇಶಕ್ಕಾಗಿ ಮಹಿಳೆಯೊಬ್ಬರು ಎರಡು ವರ್ಷದ ಮಗುವನ್ನು ಬಲಿ ನೀಡಿರುವ ಘಟನೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಿಹಾರ

ಜನವರಿ 22 ರಿಂದ ಕಾಣೆಯಾಗಿದ್ದ ಮಗು ಸುಮಾರು ಒಂದು ವಾರದ ನಂತರ ಕುದ್ರಾ ರೈಲು ನಿಲ್ದಾಣದ ಬಳಿಯ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿತ್ತು. ವ್ಯಾಪಕ ಹುಡುಕಾಟದ ನಂತರ ಮಗುವಿನ ಕೊಳೆತ ಶವ ಪತ್ತೆಯಾಗಿದೆ ಎಂದು ಕೈಮೂರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿ ಮೋಹನ್ ಶುಕ್ಲಾ ತಿಳಿಸಿದ್ದಾರೆ. ಮಗುವನ್ನು ಬಲಿ ಪಡೆದ ಮಹಿಳೆಯು ಮಂತ್ರವಾದಿಯ ಮಾತು ಕೇಳಿ ಈ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದು, ಮಂತ್ರವಾದಿ ಪ್ರಸ್ತುತ ಪರಾರಿಯಾಗಿದ್ದಾಗಿ ತಿಳಿಸಿದ್ದಾರೆ. ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಿಳೆಯು ಮಗುವನ್ನು ಕತ್ತು ಹಿಸುಕಿ ಗ್ರೇಡರ್ ಯಂತ್ರವನ್ನು ಬಳಸಿ ಕಾಲುಗಳನ್ನು ಕತ್ತರಿಸಿದ್ದಾಗಿ ಆರೋಪವಿದೆ. ಪೊಲೀಸರು ಗ್ರೇಡರ್‌ ಅನ್ನು ವಶಪಡಿಸಿಕೊಂಡಿದ್ದಾಗಿ ವರದಿಯಾಗಿದೆ. “ಮಂತ್ರವಾದಿಯ ಗುರುತು ಪತ್ತೆಯಾಗಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಅಧಿಕಾರಿ ಹೇಳಿದ್ದಾರೆ.

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯವರಾದ ಸಂತ್ರಸ್ತರು, ಕುಟುಂಬದ ಮದುವೆಯಲ್ಲಿ ಭಾಗವಹಿಸಲು ತನ್ನ ಮಗು ತಾಯಿಯೊಂದಿಗೆ ಲಾಲಾಪುರಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ತನ್ನ ಅಜ್ಜಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಮಗು ಕಣ್ಮರೆಯಾಗಿತ್ತು. ಇದರಿಂದಾಗಿ ಮಗುವಿನ ಚಿಕ್ಕಪ್ಪ ಅಜಯ್ ಪಾಲ್ ಕುದ್ರಾ ಪೊಲೀಸರಿಗೆ ದೂರು ದಾಖಲಿಸಿದ್ದರು.

ಎಲೆಕ್ಟ್ರಾನಿಕ್ ಕಣ್ಗಾವಲು ಮತ್ತು ಗುಪ್ತಚರ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಐದು ಮಂದಿ ಶಂಕಿತರನ್ನು ಬಂಧಿಸಲಾಗಿತ್ತು. ಬಂಧಿತರನ್ನು ಮುನ್ನಿ ಕುನ್ವರ್, ಅವರ ಮಗ ಅವಿನಾಶ್ ಕುಮಾರ್, ಅವರ ಸಹಚರ ಅಂಕಿತ್ ಕುಮಾರ್, ಲಕ್ಷ್ಮಿನಾ ದೇವಿ ಮತ್ತು ಅವರ ಮಗ ಪರಸ್ನಾಥ್ ಪಾಲ್ ಎಂದು ಗುರುತಿಸಲಾಗಿದೆ.

ವಿಚಾರಣೆಯ ಸಮಯದಲ್ಲಿ, ಮುನ್ನಿ ತಪ್ಪೊಪ್ಪಿಕೊಂಡಿದ್ದರು. ತನ್ನ ವಿವಾಹಿತ ಮಗಳು ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ ಗರ್ಭಿಣಿಯಾಗಿರಲಿಲ್ಲ. ಹಾಗಾಗಿ ಅವರ ಗಂಡನಿಗೆ ಎರಡನೇ ಮದುವೆಗೆ ಸಂಬಂಧಿಸಿದಂತೆ ಅವರ ಅತ್ತೆ ಮಾವರಿಂದ ಒತ್ತಡ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದರು. ಈ ವೇಳೆ ಮಂತ್ರವಾದಿಯನ್ನು ಸಂಪರ್ಕಿಸಿದ್ದು, ಅವರು ಚಿಕ್ಕ ಹುಡುಗನನ್ನು ಬಲಿ ನೀಡುವುದರಿಂದ ಮಗಳು ಗಂಡು ಮಗುವನ್ನು ಹೆರುತ್ತಾರೆ ಎಂದು ಭರವಸೆ ನೀಡಿದ್ದರು ಎಂದು ಮುನ್ನಿ ಹೇಳಿದ್ದಾರೆ.

ಅಪಹರಣವನ್ನು ನಡೆಸಲು ಮುನ್ನಿಯು ಲಕ್ಷ್ಮಿನಾ ಮತ್ತು ಅಂಕಿತ್ ಜೊತೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಜನವರಿ 22 ರಂದು, ಅಂಕಿತ್ ಮತ್ತು ಪರಸ್ನಾಥ್ ಮಗುವನ್ನು ಅಜ್ಜಿಯ ಮನೆಯ ಹೊರಗಿನಿಂದ ಅಪಹರಿಸಿ ಮುನ್ನಿಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹತ್ಯೆಯ ನಂತರ ಮಗುವನ್ನು ಲಕ್ಷ್ಮಿನಾ ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದಿದ್ದನು.

ಕೊಲೆ ನಡೆದ ಸ್ಥಳದ ಮೇಲೆ ಸಿಮೆಂಟ್ ಹಾಕುವ ಮೂಲಕ ಆರೋಪಿಗಳು ಸಾಕ್ಷ್ಯವನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದ ಮಂತ್ರವಾದಿಯ ಅಧಿಕಾರಿಗಳು ಹುಡುಕಾಟವನ್ನು ಮುಂದುವರೆಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿ-ಕಾಂಗ್ರೆಸ್ ವಿಭಜನೆಯಿಂದ ಬಿಜೆಪಿಗೆ ಲಾಭವಾಗಿದೆಯೇ?

ದೆಹಲಿ ಚುನಾವಣೆ: ಎಎಪಿ-ಕಾಂಗ್ರೆಸ್ ವಿಭಜನೆಯಿಂದ ಬಿಜೆಪಿಗೆ ಲಾಭವಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...