Homeಮುಖಪುಟಬಿಹಾರ | ಮಗಳು ಗರ್ಭಿಣಿಯಾಗಲು 2 ವರ್ಷದ ಮಗುವಿನ ಕತ್ತು ಹಿಸುಕಿ, ಕಾಲು ಕತ್ತರಿಸಿ ಬಲಿ

ಬಿಹಾರ | ಮಗಳು ಗರ್ಭಿಣಿಯಾಗಲು 2 ವರ್ಷದ ಮಗುವಿನ ಕತ್ತು ಹಿಸುಕಿ, ಕಾಲು ಕತ್ತರಿಸಿ ಬಲಿ

- Advertisement -
- Advertisement -

ಮೂಢನಂಬಿಕೆಗಳಿಂದ ಪ್ರೇರಿತಳಾಗಿ ತನ್ನ ಮಗಳು ಗರ್ಭಿಣಿಯಾಗುವ ಉದ್ದೇಶಕ್ಕಾಗಿ ಮಹಿಳೆಯೊಬ್ಬರು ಎರಡು ವರ್ಷದ ಮಗುವನ್ನು ಬಲಿ ನೀಡಿರುವ ಘಟನೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಿಹಾರ

ಜನವರಿ 22 ರಿಂದ ಕಾಣೆಯಾಗಿದ್ದ ಮಗು ಸುಮಾರು ಒಂದು ವಾರದ ನಂತರ ಕುದ್ರಾ ರೈಲು ನಿಲ್ದಾಣದ ಬಳಿಯ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿತ್ತು. ವ್ಯಾಪಕ ಹುಡುಕಾಟದ ನಂತರ ಮಗುವಿನ ಕೊಳೆತ ಶವ ಪತ್ತೆಯಾಗಿದೆ ಎಂದು ಕೈಮೂರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿ ಮೋಹನ್ ಶುಕ್ಲಾ ತಿಳಿಸಿದ್ದಾರೆ. ಮಗುವನ್ನು ಬಲಿ ಪಡೆದ ಮಹಿಳೆಯು ಮಂತ್ರವಾದಿಯ ಮಾತು ಕೇಳಿ ಈ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದು, ಮಂತ್ರವಾದಿ ಪ್ರಸ್ತುತ ಪರಾರಿಯಾಗಿದ್ದಾಗಿ ತಿಳಿಸಿದ್ದಾರೆ. ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಿಳೆಯು ಮಗುವನ್ನು ಕತ್ತು ಹಿಸುಕಿ ಗ್ರೇಡರ್ ಯಂತ್ರವನ್ನು ಬಳಸಿ ಕಾಲುಗಳನ್ನು ಕತ್ತರಿಸಿದ್ದಾಗಿ ಆರೋಪವಿದೆ. ಪೊಲೀಸರು ಗ್ರೇಡರ್‌ ಅನ್ನು ವಶಪಡಿಸಿಕೊಂಡಿದ್ದಾಗಿ ವರದಿಯಾಗಿದೆ. “ಮಂತ್ರವಾದಿಯ ಗುರುತು ಪತ್ತೆಯಾಗಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಅಧಿಕಾರಿ ಹೇಳಿದ್ದಾರೆ.

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯವರಾದ ಸಂತ್ರಸ್ತರು, ಕುಟುಂಬದ ಮದುವೆಯಲ್ಲಿ ಭಾಗವಹಿಸಲು ತನ್ನ ಮಗು ತಾಯಿಯೊಂದಿಗೆ ಲಾಲಾಪುರಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ತನ್ನ ಅಜ್ಜಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಮಗು ಕಣ್ಮರೆಯಾಗಿತ್ತು. ಇದರಿಂದಾಗಿ ಮಗುವಿನ ಚಿಕ್ಕಪ್ಪ ಅಜಯ್ ಪಾಲ್ ಕುದ್ರಾ ಪೊಲೀಸರಿಗೆ ದೂರು ದಾಖಲಿಸಿದ್ದರು.

ಎಲೆಕ್ಟ್ರಾನಿಕ್ ಕಣ್ಗಾವಲು ಮತ್ತು ಗುಪ್ತಚರ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಐದು ಮಂದಿ ಶಂಕಿತರನ್ನು ಬಂಧಿಸಲಾಗಿತ್ತು. ಬಂಧಿತರನ್ನು ಮುನ್ನಿ ಕುನ್ವರ್, ಅವರ ಮಗ ಅವಿನಾಶ್ ಕುಮಾರ್, ಅವರ ಸಹಚರ ಅಂಕಿತ್ ಕುಮಾರ್, ಲಕ್ಷ್ಮಿನಾ ದೇವಿ ಮತ್ತು ಅವರ ಮಗ ಪರಸ್ನಾಥ್ ಪಾಲ್ ಎಂದು ಗುರುತಿಸಲಾಗಿದೆ.

ವಿಚಾರಣೆಯ ಸಮಯದಲ್ಲಿ, ಮುನ್ನಿ ತಪ್ಪೊಪ್ಪಿಕೊಂಡಿದ್ದರು. ತನ್ನ ವಿವಾಹಿತ ಮಗಳು ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ ಗರ್ಭಿಣಿಯಾಗಿರಲಿಲ್ಲ. ಹಾಗಾಗಿ ಅವರ ಗಂಡನಿಗೆ ಎರಡನೇ ಮದುವೆಗೆ ಸಂಬಂಧಿಸಿದಂತೆ ಅವರ ಅತ್ತೆ ಮಾವರಿಂದ ಒತ್ತಡ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದರು. ಈ ವೇಳೆ ಮಂತ್ರವಾದಿಯನ್ನು ಸಂಪರ್ಕಿಸಿದ್ದು, ಅವರು ಚಿಕ್ಕ ಹುಡುಗನನ್ನು ಬಲಿ ನೀಡುವುದರಿಂದ ಮಗಳು ಗಂಡು ಮಗುವನ್ನು ಹೆರುತ್ತಾರೆ ಎಂದು ಭರವಸೆ ನೀಡಿದ್ದರು ಎಂದು ಮುನ್ನಿ ಹೇಳಿದ್ದಾರೆ.

ಅಪಹರಣವನ್ನು ನಡೆಸಲು ಮುನ್ನಿಯು ಲಕ್ಷ್ಮಿನಾ ಮತ್ತು ಅಂಕಿತ್ ಜೊತೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಜನವರಿ 22 ರಂದು, ಅಂಕಿತ್ ಮತ್ತು ಪರಸ್ನಾಥ್ ಮಗುವನ್ನು ಅಜ್ಜಿಯ ಮನೆಯ ಹೊರಗಿನಿಂದ ಅಪಹರಿಸಿ ಮುನ್ನಿಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹತ್ಯೆಯ ನಂತರ ಮಗುವನ್ನು ಲಕ್ಷ್ಮಿನಾ ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದಿದ್ದನು.

ಕೊಲೆ ನಡೆದ ಸ್ಥಳದ ಮೇಲೆ ಸಿಮೆಂಟ್ ಹಾಕುವ ಮೂಲಕ ಆರೋಪಿಗಳು ಸಾಕ್ಷ್ಯವನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದ ಮಂತ್ರವಾದಿಯ ಅಧಿಕಾರಿಗಳು ಹುಡುಕಾಟವನ್ನು ಮುಂದುವರೆಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿ-ಕಾಂಗ್ರೆಸ್ ವಿಭಜನೆಯಿಂದ ಬಿಜೆಪಿಗೆ ಲಾಭವಾಗಿದೆಯೇ?

ದೆಹಲಿ ಚುನಾವಣೆ: ಎಎಪಿ-ಕಾಂಗ್ರೆಸ್ ವಿಭಜನೆಯಿಂದ ಬಿಜೆಪಿಗೆ ಲಾಭವಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...