Homeಮುಖಪುಟಬಿಹಾರ | ಮಗಳು ಗರ್ಭಿಣಿಯಾಗಲು 2 ವರ್ಷದ ಮಗುವಿನ ಕತ್ತು ಹಿಸುಕಿ, ಕಾಲು ಕತ್ತರಿಸಿ ಬಲಿ

ಬಿಹಾರ | ಮಗಳು ಗರ್ಭಿಣಿಯಾಗಲು 2 ವರ್ಷದ ಮಗುವಿನ ಕತ್ತು ಹಿಸುಕಿ, ಕಾಲು ಕತ್ತರಿಸಿ ಬಲಿ

- Advertisement -
- Advertisement -

ಮೂಢನಂಬಿಕೆಗಳಿಂದ ಪ್ರೇರಿತಳಾಗಿ ತನ್ನ ಮಗಳು ಗರ್ಭಿಣಿಯಾಗುವ ಉದ್ದೇಶಕ್ಕಾಗಿ ಮಹಿಳೆಯೊಬ್ಬರು ಎರಡು ವರ್ಷದ ಮಗುವನ್ನು ಬಲಿ ನೀಡಿರುವ ಘಟನೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಿಹಾರ

ಜನವರಿ 22 ರಿಂದ ಕಾಣೆಯಾಗಿದ್ದ ಮಗು ಸುಮಾರು ಒಂದು ವಾರದ ನಂತರ ಕುದ್ರಾ ರೈಲು ನಿಲ್ದಾಣದ ಬಳಿಯ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿತ್ತು. ವ್ಯಾಪಕ ಹುಡುಕಾಟದ ನಂತರ ಮಗುವಿನ ಕೊಳೆತ ಶವ ಪತ್ತೆಯಾಗಿದೆ ಎಂದು ಕೈಮೂರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿ ಮೋಹನ್ ಶುಕ್ಲಾ ತಿಳಿಸಿದ್ದಾರೆ. ಮಗುವನ್ನು ಬಲಿ ಪಡೆದ ಮಹಿಳೆಯು ಮಂತ್ರವಾದಿಯ ಮಾತು ಕೇಳಿ ಈ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದು, ಮಂತ್ರವಾದಿ ಪ್ರಸ್ತುತ ಪರಾರಿಯಾಗಿದ್ದಾಗಿ ತಿಳಿಸಿದ್ದಾರೆ. ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಿಳೆಯು ಮಗುವನ್ನು ಕತ್ತು ಹಿಸುಕಿ ಗ್ರೇಡರ್ ಯಂತ್ರವನ್ನು ಬಳಸಿ ಕಾಲುಗಳನ್ನು ಕತ್ತರಿಸಿದ್ದಾಗಿ ಆರೋಪವಿದೆ. ಪೊಲೀಸರು ಗ್ರೇಡರ್‌ ಅನ್ನು ವಶಪಡಿಸಿಕೊಂಡಿದ್ದಾಗಿ ವರದಿಯಾಗಿದೆ. “ಮಂತ್ರವಾದಿಯ ಗುರುತು ಪತ್ತೆಯಾಗಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಅಧಿಕಾರಿ ಹೇಳಿದ್ದಾರೆ.

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯವರಾದ ಸಂತ್ರಸ್ತರು, ಕುಟುಂಬದ ಮದುವೆಯಲ್ಲಿ ಭಾಗವಹಿಸಲು ತನ್ನ ಮಗು ತಾಯಿಯೊಂದಿಗೆ ಲಾಲಾಪುರಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ತನ್ನ ಅಜ್ಜಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಮಗು ಕಣ್ಮರೆಯಾಗಿತ್ತು. ಇದರಿಂದಾಗಿ ಮಗುವಿನ ಚಿಕ್ಕಪ್ಪ ಅಜಯ್ ಪಾಲ್ ಕುದ್ರಾ ಪೊಲೀಸರಿಗೆ ದೂರು ದಾಖಲಿಸಿದ್ದರು.

ಎಲೆಕ್ಟ್ರಾನಿಕ್ ಕಣ್ಗಾವಲು ಮತ್ತು ಗುಪ್ತಚರ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಐದು ಮಂದಿ ಶಂಕಿತರನ್ನು ಬಂಧಿಸಲಾಗಿತ್ತು. ಬಂಧಿತರನ್ನು ಮುನ್ನಿ ಕುನ್ವರ್, ಅವರ ಮಗ ಅವಿನಾಶ್ ಕುಮಾರ್, ಅವರ ಸಹಚರ ಅಂಕಿತ್ ಕುಮಾರ್, ಲಕ್ಷ್ಮಿನಾ ದೇವಿ ಮತ್ತು ಅವರ ಮಗ ಪರಸ್ನಾಥ್ ಪಾಲ್ ಎಂದು ಗುರುತಿಸಲಾಗಿದೆ.

ವಿಚಾರಣೆಯ ಸಮಯದಲ್ಲಿ, ಮುನ್ನಿ ತಪ್ಪೊಪ್ಪಿಕೊಂಡಿದ್ದರು. ತನ್ನ ವಿವಾಹಿತ ಮಗಳು ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ ಗರ್ಭಿಣಿಯಾಗಿರಲಿಲ್ಲ. ಹಾಗಾಗಿ ಅವರ ಗಂಡನಿಗೆ ಎರಡನೇ ಮದುವೆಗೆ ಸಂಬಂಧಿಸಿದಂತೆ ಅವರ ಅತ್ತೆ ಮಾವರಿಂದ ಒತ್ತಡ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದರು. ಈ ವೇಳೆ ಮಂತ್ರವಾದಿಯನ್ನು ಸಂಪರ್ಕಿಸಿದ್ದು, ಅವರು ಚಿಕ್ಕ ಹುಡುಗನನ್ನು ಬಲಿ ನೀಡುವುದರಿಂದ ಮಗಳು ಗಂಡು ಮಗುವನ್ನು ಹೆರುತ್ತಾರೆ ಎಂದು ಭರವಸೆ ನೀಡಿದ್ದರು ಎಂದು ಮುನ್ನಿ ಹೇಳಿದ್ದಾರೆ.

ಅಪಹರಣವನ್ನು ನಡೆಸಲು ಮುನ್ನಿಯು ಲಕ್ಷ್ಮಿನಾ ಮತ್ತು ಅಂಕಿತ್ ಜೊತೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಜನವರಿ 22 ರಂದು, ಅಂಕಿತ್ ಮತ್ತು ಪರಸ್ನಾಥ್ ಮಗುವನ್ನು ಅಜ್ಜಿಯ ಮನೆಯ ಹೊರಗಿನಿಂದ ಅಪಹರಿಸಿ ಮುನ್ನಿಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹತ್ಯೆಯ ನಂತರ ಮಗುವನ್ನು ಲಕ್ಷ್ಮಿನಾ ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದಿದ್ದನು.

ಕೊಲೆ ನಡೆದ ಸ್ಥಳದ ಮೇಲೆ ಸಿಮೆಂಟ್ ಹಾಕುವ ಮೂಲಕ ಆರೋಪಿಗಳು ಸಾಕ್ಷ್ಯವನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದ ಮಂತ್ರವಾದಿಯ ಅಧಿಕಾರಿಗಳು ಹುಡುಕಾಟವನ್ನು ಮುಂದುವರೆಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿ-ಕಾಂಗ್ರೆಸ್ ವಿಭಜನೆಯಿಂದ ಬಿಜೆಪಿಗೆ ಲಾಭವಾಗಿದೆಯೇ?

ದೆಹಲಿ ಚುನಾವಣೆ: ಎಎಪಿ-ಕಾಂಗ್ರೆಸ್ ವಿಭಜನೆಯಿಂದ ಬಿಜೆಪಿಗೆ ಲಾಭವಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...