Homeಮುಖಪುಟಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ

ಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮಹಿಳೆಯೊಬ್ಬರನ್ನು ಭೀಕರವಾಗಿ ಥಳಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಬಿಹಾರದ ಮಾಧೇಪುರ ಜಿಲ್ಲೆಯ ಪೊಲೀಸರು ಗುರುವಾರ ಹಲ್ಲೆಕೋರನ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಸುಮಾರು 20ರ ವರ್ಷದ ಮಹಿಳೆ, ”ಬೆಳಿಗ್ಗೆಯಿಂದ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಮಲವಿಸರ್ಜನೆಗೆಂದು ರಾತ್ರಿ 10 ಗಂಟೆಯ ವೇಳೆಗೆ ಸಮೀಪದ ಜೋಳದ ಗದ್ದೆಗೆ ಹೋಗಿದ್ದೆ. ಅಷ್ಟರಲ್ಲಿ ಪಕ್ಕದಲ್ಲಿದ್ದ ಶಂಕರ್ ದಾಸ್, ಪ್ರದೀಪ್ ದಾಸ್, ಪಿಂಟು ದಾಸ್, ಅಭಯ್ ದಾಸ್ ಮತ್ತು ಇತರ ಯುವಕರು ನನ್ನನ್ನು ಹಿಂಬಾಲಿಸಿದರು. ನಿನ್ನೊಂದಿಗೆ ಬೇರೆ ಯಾರು ಇದ್ದರು, ಎಲ್ಲಿ ಓಡಿಹೋದಿರಿ ಎಂದು ಕೇಳಲು ಪ್ರಾರಂಭಿಸಿದರು. ಅಲ್ಲಿ ಯಾರೂ ಇರಲಿಲ್ಲ. ಹೊಟ್ಟೆನೋವು ಇದ್ದುದರಿಂದ ಮಲ ವಿಸರ್ಜನೆಗೆ ಬಂದಿದ್ದೆನಷ್ಟೇ. ಇದಾದ ನಂತರ ಈ ಜನರು ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಅಲ್ಲದೆ ಚಿನ್ನಾಭರಣ ದೋಚಿದ್ದಾರೆ. ಭಯದಿಂದಾಗಿ ನಾನು ದಾಳಿ ಮಾಡಲಿಲ್ಲ. ಆದರೆ ಮರುದಿನ ನನ್ನನ್ನು ಪಂಚಾಯಿತಿಗೆ ಕರೆದು ಬರ್ಬರವಾಗಿ ಥಳಿಸಿದ್ದಾರೆ. ಮಾರ್ಚ್ 19ರ ರಾತ್ರಿ ಘಟನೆ ನಡೆದಿದ್ದು, ಮಾರ್ಚ್ 20 ರಂದು ಹಲ್ಲೆ ನಡೆಸಲಾಗಿದೆ” ಎಂದು ಸಂತ್ರಸ್ತ ಮಹಿಳೆ ವಿವರಿಸಿದ್ದಾರೆ.

“ಮಾತನಾಡಿದರೆ ಗ್ರಾಮದಿಂದ ಹೊರಹಾಕುತ್ತೇವೆ ಅಥವಾ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರು. ನನ್ನ ಪತಿ ಬೇರೆ ಊರಿಗೆ ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ವಯಸ್ಸಾದ ಮಾವ ಮತ್ತು ಅತ್ತೆ ಮಾತ್ರ ಇದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದು ನನ್ನ ಪತಿ ಮನೆಗೆ ಬಂದಿದ್ದು, ನಂತರ ಚಿಕಿತ್ಸೆಗಾಗಿ ಮಾದೇಪುರದ ಸದರ್ ಆಸ್ಪತ್ರೆಗೆ ಸೇರಿದ್ದೇನೆ” ಎಂದು ಪೊಲೀಸರ ಮುಂದೆ ಹೇಳಿಕೆ ನೀಡುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸದ್ಯ ಸಂತ್ರಸ್ತೆಗೆ ಮಾಧೇಪುರದ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳೆಯ ಹೇಳಿಕೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಧೇಪುರ ಎಸ್ಪಿ ರಾಜೇಶ್ ಕುಮಾರ್ ತಿಳಿಸಿದ್ದಾರೆ. ವೈರಲ್ ಆಗಿರುವ ವೀಡಿಯೋ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ. ತನಿಖೆ ನಂತರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪ ಹೊರಿಸಿ ಪಂಚಾಯಿತಿ ನಡೆಸಿದಾಗ, ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಬಿದಿರು ಕೋಲಿನಿಂದ ಹೊಡೆಯಲು ಶುರು ಮಾಡಿದ್ದಾನೆ. ಈ ವೇಳೆ ಸುತ್ತಮುತ್ತ ಇದ್ದ ಇತರರೂ ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಲಿಲ್ಲ. ಮಹಿಳೆಯನ್ನು ಥಳಿಸುವಾಗಲೂ ಆಕೆಗೆ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ವಿವಾಹೇತರ ಸಂಬಂಧದ ಆರೋಪವನ್ನು ಆಕೆಯ ಪತಿ ನಿರಾಕರಿಸಿದ್ದಾರೆ. ಇಲ್ಲಿನ ತುಳಸಿದರಿ ಗ್ರಾಮದಲ್ಲಿ ಘಟನೆ ನಡೆದಾಗ ಅವರು ಮನೆಯಲ್ಲಿ ಇರಲಿಲ್ಲ.

ಘಟನೆ ಸಂಬಂಧ ದಿ ದಲಿತ್ ವಾಯ್ಸ್‌ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, “ಅತ್ಯಾಚಾರ ಯತ್ನವನ್ನು ವಿರೋಧಿಸಿದ್ದಕ್ಕಾಗಿ ಖಾಪ್ ಪಂಚಾಯತ್ ಆದೇಶದಂತೆ ಬ್ರಾಹ್ಮಣ್ಯದ ಪಿತೃಪ್ರಧಾನ ವ್ಯವಸ್ಥೆ ಮಹಿಳೆಯನ್ನು ಬಿಸಿ ಕೋಲುಗಳಿಂದ ಥಳಿಸಿದೆ. ಮಹಿಳೆಯನ್ನು ಚಾರಿತ್ರ್ಯ ಹೀನಳೆಂದು ಕರೆದಿರುವ ಈ ಗೂಂಡಾಗಳು ಆಕೆಯನ್ನು ವಿವಸ್ತ್ರಗೊಳಿಸಲು ಯತ್ನಿಸಿದ್ದಾರೆ” ಎಂದು ಟೀಕಿಸಲಾಗಿದೆ.


ಇದನ್ನೂ ಓದಿರಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...