Homeಮುಖಪುಟಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ

ಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮಹಿಳೆಯೊಬ್ಬರನ್ನು ಭೀಕರವಾಗಿ ಥಳಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಬಿಹಾರದ ಮಾಧೇಪುರ ಜಿಲ್ಲೆಯ ಪೊಲೀಸರು ಗುರುವಾರ ಹಲ್ಲೆಕೋರನ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಸುಮಾರು 20ರ ವರ್ಷದ ಮಹಿಳೆ, ”ಬೆಳಿಗ್ಗೆಯಿಂದ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಮಲವಿಸರ್ಜನೆಗೆಂದು ರಾತ್ರಿ 10 ಗಂಟೆಯ ವೇಳೆಗೆ ಸಮೀಪದ ಜೋಳದ ಗದ್ದೆಗೆ ಹೋಗಿದ್ದೆ. ಅಷ್ಟರಲ್ಲಿ ಪಕ್ಕದಲ್ಲಿದ್ದ ಶಂಕರ್ ದಾಸ್, ಪ್ರದೀಪ್ ದಾಸ್, ಪಿಂಟು ದಾಸ್, ಅಭಯ್ ದಾಸ್ ಮತ್ತು ಇತರ ಯುವಕರು ನನ್ನನ್ನು ಹಿಂಬಾಲಿಸಿದರು. ನಿನ್ನೊಂದಿಗೆ ಬೇರೆ ಯಾರು ಇದ್ದರು, ಎಲ್ಲಿ ಓಡಿಹೋದಿರಿ ಎಂದು ಕೇಳಲು ಪ್ರಾರಂಭಿಸಿದರು. ಅಲ್ಲಿ ಯಾರೂ ಇರಲಿಲ್ಲ. ಹೊಟ್ಟೆನೋವು ಇದ್ದುದರಿಂದ ಮಲ ವಿಸರ್ಜನೆಗೆ ಬಂದಿದ್ದೆನಷ್ಟೇ. ಇದಾದ ನಂತರ ಈ ಜನರು ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಅಲ್ಲದೆ ಚಿನ್ನಾಭರಣ ದೋಚಿದ್ದಾರೆ. ಭಯದಿಂದಾಗಿ ನಾನು ದಾಳಿ ಮಾಡಲಿಲ್ಲ. ಆದರೆ ಮರುದಿನ ನನ್ನನ್ನು ಪಂಚಾಯಿತಿಗೆ ಕರೆದು ಬರ್ಬರವಾಗಿ ಥಳಿಸಿದ್ದಾರೆ. ಮಾರ್ಚ್ 19ರ ರಾತ್ರಿ ಘಟನೆ ನಡೆದಿದ್ದು, ಮಾರ್ಚ್ 20 ರಂದು ಹಲ್ಲೆ ನಡೆಸಲಾಗಿದೆ” ಎಂದು ಸಂತ್ರಸ್ತ ಮಹಿಳೆ ವಿವರಿಸಿದ್ದಾರೆ.

“ಮಾತನಾಡಿದರೆ ಗ್ರಾಮದಿಂದ ಹೊರಹಾಕುತ್ತೇವೆ ಅಥವಾ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರು. ನನ್ನ ಪತಿ ಬೇರೆ ಊರಿಗೆ ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ವಯಸ್ಸಾದ ಮಾವ ಮತ್ತು ಅತ್ತೆ ಮಾತ್ರ ಇದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದು ನನ್ನ ಪತಿ ಮನೆಗೆ ಬಂದಿದ್ದು, ನಂತರ ಚಿಕಿತ್ಸೆಗಾಗಿ ಮಾದೇಪುರದ ಸದರ್ ಆಸ್ಪತ್ರೆಗೆ ಸೇರಿದ್ದೇನೆ” ಎಂದು ಪೊಲೀಸರ ಮುಂದೆ ಹೇಳಿಕೆ ನೀಡುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸದ್ಯ ಸಂತ್ರಸ್ತೆಗೆ ಮಾಧೇಪುರದ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳೆಯ ಹೇಳಿಕೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಧೇಪುರ ಎಸ್ಪಿ ರಾಜೇಶ್ ಕುಮಾರ್ ತಿಳಿಸಿದ್ದಾರೆ. ವೈರಲ್ ಆಗಿರುವ ವೀಡಿಯೋ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ. ತನಿಖೆ ನಂತರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪ ಹೊರಿಸಿ ಪಂಚಾಯಿತಿ ನಡೆಸಿದಾಗ, ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಬಿದಿರು ಕೋಲಿನಿಂದ ಹೊಡೆಯಲು ಶುರು ಮಾಡಿದ್ದಾನೆ. ಈ ವೇಳೆ ಸುತ್ತಮುತ್ತ ಇದ್ದ ಇತರರೂ ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಲಿಲ್ಲ. ಮಹಿಳೆಯನ್ನು ಥಳಿಸುವಾಗಲೂ ಆಕೆಗೆ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ವಿವಾಹೇತರ ಸಂಬಂಧದ ಆರೋಪವನ್ನು ಆಕೆಯ ಪತಿ ನಿರಾಕರಿಸಿದ್ದಾರೆ. ಇಲ್ಲಿನ ತುಳಸಿದರಿ ಗ್ರಾಮದಲ್ಲಿ ಘಟನೆ ನಡೆದಾಗ ಅವರು ಮನೆಯಲ್ಲಿ ಇರಲಿಲ್ಲ.

ಘಟನೆ ಸಂಬಂಧ ದಿ ದಲಿತ್ ವಾಯ್ಸ್‌ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, “ಅತ್ಯಾಚಾರ ಯತ್ನವನ್ನು ವಿರೋಧಿಸಿದ್ದಕ್ಕಾಗಿ ಖಾಪ್ ಪಂಚಾಯತ್ ಆದೇಶದಂತೆ ಬ್ರಾಹ್ಮಣ್ಯದ ಪಿತೃಪ್ರಧಾನ ವ್ಯವಸ್ಥೆ ಮಹಿಳೆಯನ್ನು ಬಿಸಿ ಕೋಲುಗಳಿಂದ ಥಳಿಸಿದೆ. ಮಹಿಳೆಯನ್ನು ಚಾರಿತ್ರ್ಯ ಹೀನಳೆಂದು ಕರೆದಿರುವ ಈ ಗೂಂಡಾಗಳು ಆಕೆಯನ್ನು ವಿವಸ್ತ್ರಗೊಳಿಸಲು ಯತ್ನಿಸಿದ್ದಾರೆ” ಎಂದು ಟೀಕಿಸಲಾಗಿದೆ.


ಇದನ್ನೂ ಓದಿರಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...