Homeಮುಖಪುಟಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ

ಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮಹಿಳೆಯೊಬ್ಬರನ್ನು ಭೀಕರವಾಗಿ ಥಳಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಬಿಹಾರದ ಮಾಧೇಪುರ ಜಿಲ್ಲೆಯ ಪೊಲೀಸರು ಗುರುವಾರ ಹಲ್ಲೆಕೋರನ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಸುಮಾರು 20ರ ವರ್ಷದ ಮಹಿಳೆ, ”ಬೆಳಿಗ್ಗೆಯಿಂದ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಮಲವಿಸರ್ಜನೆಗೆಂದು ರಾತ್ರಿ 10 ಗಂಟೆಯ ವೇಳೆಗೆ ಸಮೀಪದ ಜೋಳದ ಗದ್ದೆಗೆ ಹೋಗಿದ್ದೆ. ಅಷ್ಟರಲ್ಲಿ ಪಕ್ಕದಲ್ಲಿದ್ದ ಶಂಕರ್ ದಾಸ್, ಪ್ರದೀಪ್ ದಾಸ್, ಪಿಂಟು ದಾಸ್, ಅಭಯ್ ದಾಸ್ ಮತ್ತು ಇತರ ಯುವಕರು ನನ್ನನ್ನು ಹಿಂಬಾಲಿಸಿದರು. ನಿನ್ನೊಂದಿಗೆ ಬೇರೆ ಯಾರು ಇದ್ದರು, ಎಲ್ಲಿ ಓಡಿಹೋದಿರಿ ಎಂದು ಕೇಳಲು ಪ್ರಾರಂಭಿಸಿದರು. ಅಲ್ಲಿ ಯಾರೂ ಇರಲಿಲ್ಲ. ಹೊಟ್ಟೆನೋವು ಇದ್ದುದರಿಂದ ಮಲ ವಿಸರ್ಜನೆಗೆ ಬಂದಿದ್ದೆನಷ್ಟೇ. ಇದಾದ ನಂತರ ಈ ಜನರು ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಅಲ್ಲದೆ ಚಿನ್ನಾಭರಣ ದೋಚಿದ್ದಾರೆ. ಭಯದಿಂದಾಗಿ ನಾನು ದಾಳಿ ಮಾಡಲಿಲ್ಲ. ಆದರೆ ಮರುದಿನ ನನ್ನನ್ನು ಪಂಚಾಯಿತಿಗೆ ಕರೆದು ಬರ್ಬರವಾಗಿ ಥಳಿಸಿದ್ದಾರೆ. ಮಾರ್ಚ್ 19ರ ರಾತ್ರಿ ಘಟನೆ ನಡೆದಿದ್ದು, ಮಾರ್ಚ್ 20 ರಂದು ಹಲ್ಲೆ ನಡೆಸಲಾಗಿದೆ” ಎಂದು ಸಂತ್ರಸ್ತ ಮಹಿಳೆ ವಿವರಿಸಿದ್ದಾರೆ.

“ಮಾತನಾಡಿದರೆ ಗ್ರಾಮದಿಂದ ಹೊರಹಾಕುತ್ತೇವೆ ಅಥವಾ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರು. ನನ್ನ ಪತಿ ಬೇರೆ ಊರಿಗೆ ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ವಯಸ್ಸಾದ ಮಾವ ಮತ್ತು ಅತ್ತೆ ಮಾತ್ರ ಇದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದು ನನ್ನ ಪತಿ ಮನೆಗೆ ಬಂದಿದ್ದು, ನಂತರ ಚಿಕಿತ್ಸೆಗಾಗಿ ಮಾದೇಪುರದ ಸದರ್ ಆಸ್ಪತ್ರೆಗೆ ಸೇರಿದ್ದೇನೆ” ಎಂದು ಪೊಲೀಸರ ಮುಂದೆ ಹೇಳಿಕೆ ನೀಡುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸದ್ಯ ಸಂತ್ರಸ್ತೆಗೆ ಮಾಧೇಪುರದ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳೆಯ ಹೇಳಿಕೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಧೇಪುರ ಎಸ್ಪಿ ರಾಜೇಶ್ ಕುಮಾರ್ ತಿಳಿಸಿದ್ದಾರೆ. ವೈರಲ್ ಆಗಿರುವ ವೀಡಿಯೋ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ. ತನಿಖೆ ನಂತರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪ ಹೊರಿಸಿ ಪಂಚಾಯಿತಿ ನಡೆಸಿದಾಗ, ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಬಿದಿರು ಕೋಲಿನಿಂದ ಹೊಡೆಯಲು ಶುರು ಮಾಡಿದ್ದಾನೆ. ಈ ವೇಳೆ ಸುತ್ತಮುತ್ತ ಇದ್ದ ಇತರರೂ ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಲಿಲ್ಲ. ಮಹಿಳೆಯನ್ನು ಥಳಿಸುವಾಗಲೂ ಆಕೆಗೆ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ವಿವಾಹೇತರ ಸಂಬಂಧದ ಆರೋಪವನ್ನು ಆಕೆಯ ಪತಿ ನಿರಾಕರಿಸಿದ್ದಾರೆ. ಇಲ್ಲಿನ ತುಳಸಿದರಿ ಗ್ರಾಮದಲ್ಲಿ ಘಟನೆ ನಡೆದಾಗ ಅವರು ಮನೆಯಲ್ಲಿ ಇರಲಿಲ್ಲ.

ಘಟನೆ ಸಂಬಂಧ ದಿ ದಲಿತ್ ವಾಯ್ಸ್‌ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, “ಅತ್ಯಾಚಾರ ಯತ್ನವನ್ನು ವಿರೋಧಿಸಿದ್ದಕ್ಕಾಗಿ ಖಾಪ್ ಪಂಚಾಯತ್ ಆದೇಶದಂತೆ ಬ್ರಾಹ್ಮಣ್ಯದ ಪಿತೃಪ್ರಧಾನ ವ್ಯವಸ್ಥೆ ಮಹಿಳೆಯನ್ನು ಬಿಸಿ ಕೋಲುಗಳಿಂದ ಥಳಿಸಿದೆ. ಮಹಿಳೆಯನ್ನು ಚಾರಿತ್ರ್ಯ ಹೀನಳೆಂದು ಕರೆದಿರುವ ಈ ಗೂಂಡಾಗಳು ಆಕೆಯನ್ನು ವಿವಸ್ತ್ರಗೊಳಿಸಲು ಯತ್ನಿಸಿದ್ದಾರೆ” ಎಂದು ಟೀಕಿಸಲಾಗಿದೆ.


ಇದನ್ನೂ ಓದಿರಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...