HomeUncategorizedಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?" ಎಂದು ಕೇಳಿದೆ.

- Advertisement -
- Advertisement -

ಮುಂದಿನ ವಾರ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ “ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ” ನೀಡುವ ಭರವಸೆಯು ಭಾರಿ ಟೀಕೆಗೆ ಗುರಿಯಾಗಿದೆ. ಆಡಳಿತ ಪಕ್ಷವು ತನ್ನ ರಾಜಕೀಯ ಕಾರ್ಯಕ್ಕೆ ಲಸಿಕೆಯನ್ನು ಬಳಸುವ ಪ್ರಯತ್ನದಲ್ಲಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇಂದು ಬಿಡುಗಡೆಯಾದ ಬಿಜೆಪಿ ಪ್ರಣಾಳಿಕೆಯಲ್ಲಿ 19 ಲಕ್ಷ ಉದ್ಯೋಗಗಳು ಸೇರಿದಂತೆ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ. ಜೊತೆಗೆ ಮುಂದಿನ ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷ ಒತ್ತಿ ಹೇಳಿದೆ.

“ಕೊರೊನಾ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಗೆ ಲಭ್ಯವಾದ ತಕ್ಷಣ, ಬಿಹಾರದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ಲಸಿಕೆ ಸಿಗುತ್ತದೆ. ಇದು ನಮ್ಮ ಮತದಾನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಮೊದಲ ಭರವಸೆ” ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಇಂದು ಹೇಳಿದ್ದರು.

ಪ್ರಣಾಳಿಕೆ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷಗಳು, ಸಾರ್ವಜನಿಕರು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಲಸಿಕೆಯನ್ನು ರಾಜಕೀಯ ಲಾಭಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ಪತ್ರಿಕಾಗೋಷ್ಠಿಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?” ಎಂದು ಕೇಳಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಭಾರತ ಸರ್ಕಾರ ಇದೀಗ ಕೊರೊನಾವನ್ನು ತಂತ್ರವನ್ನಾಗಿಸಿಕೊಂಡಿದೆ. ಲಸಿಕೆ ಪಡೆಯಲು ರಾಜ್ಯವಾರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ, ಜೊತೆಗೆ ನಿಮ್ಮ ಸುಳ್ಳು ಭರವಸೆಗಳನ್ನು ಕೂಡ” ಎಂದಿದ್ದಾರೆ.

 

ಕಾಂಗ್ರೆಸ್ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಟ್ವೀಟ್ ಮಾಡಿ, ” ನೀವು ನನಗೆ ಮತಗಳನ್ನು ನೀಡಿ, ನಾನು ನಿಮಗೆ ಲಸಿಕೆ ನೀಡುತ್ತೇನೆ” ಇದು ಭಯಾನಕ ಸಿನಿಕತನ! ಚುನಾವಣಾ ಆಯೋಗವು ಆಕೆಯ ಮೇಲೆ ಮತ್ತು ನಾಚಿಕೆಯಿಲ್ಲದ ಅವರ ಸರ್ಕಾರದ ಮೇಲೆ ಕ್ರಮ ಕೈಗೊಳ್ಳುತ್ತದೇಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

 

ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಳು ವೈರಲ್ ಆಗುತ್ತಿವೆ. ಸತೀಶ್ ಆಚಾರ್‍ಯ ಅವರ ’ಲಸಿಕೆ ರಾಜಕೀಯ’ ವ್ಯಂಗ್ಯಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ.

ಬಿಜೆಪಿಯೇತರ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಸಿಗುವುದಿಲ್ಲವೆ ಎಂದು ಹಲವು ಮಂದಿ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಫೇಸ್‌ಬುಕ್‌ನಲ್ಲಿ “ಬಿಹಾರದ ಜನರೇ, ಬಿಜೆಪಿಗೆ ವೋಟ್ ಹಾಕಿದ್ರೆ, 1.25 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ” ಎಂಬ ಫೋಸ್ಟ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರದವರೆ -ಬಿಜೆಪಿಗೆ ವೋಟ್ ಹಾಕಿದ್ರೆ,₹1.25 ಲಕ್ಷ ಕೋಟಿ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ ??‍♂️

Posted by Sharath Chandra on Thursday, October 22, 2020

 

ಕರ್ನಾಟಕ ವಿದ್ಯಾರ್ಥಿ ಸಂಘದ (ಕೆವಿಎಸ್‌) ಸಂಚಾಲಕರಾದ ಸರೋವರ್ ಬೆಂಕಿಕೆರೆ ಕರ್ನಾಟಕದವರಿಗೆ ಕರೋನಾ ಲಸಿಕೆ ಬೇಕು ಅಂದ್ರೆ ಚುನಾವಣೆ ಬರಬೇಕು ಅಂತಾನ? ಔಷಧ ಲಸಿಕೆಯನ್ನೂ ರಾಜಕೀಯಗೊಳಿಸಿಬಿಟ್ರಲ್ಲ ಗ್ರೇಟ್, ಗ್ರೇಟರ್, ಗ್ರೇಟೆಸ್ಟ್ ಕಣ್ರಿ ನೀವು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಐಟಿ ವಿಭಾಗದ ಅಮಿತ್ ಮಾಳವಿಯಾ,”ಬಿಜೆಪಿಯ ಪ್ರಣಾಳಿಕೆ ಉಚಿತ ಕೋವಿಡ್ ಲಸಿಕೆಯ ಭರವಸೆ ನೀಡುತ್ತದೆ. ಎಲ್ಲಾ ಕಾರ್ಯಕ್ರಮಗಳಂತೆ ಕೇಂದ್ರವು ರಾಜ್ಯಗಳಿಗೆ ಅತ್ಯಲ್ಪ ದರದಲ್ಲಿ ಲಸಿಕೆಗಳನ್ನು ನೀಡುತ್ತದೆ. ಆರೋಗ್ಯವು ರಾಜ್ಯ ವಿಷಯವಾಗಿರುವುದರಿಂದ ಲಸಿಕೆ ಉಚಿತವಾಗಿ ನೀಡಬೇಕೆ ಅಥವಾ ಬೇಡವೇ ಎಂದು ರಾಜ್ಯಕ್ಕೆ ಸರ್ಕಾರಗಳು ಅದನ್ನು ನಿರ್ಧರಿಸಬೇಕು. ಬಿಜೆಪಿ ಬಿಹಾರದಲ್ಲಿ ಅದನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ” ಎಂದಿದ್ದಾರೆ.

ಲಸಿಕೆ ವಿತರಣೆ ಮತ್ತು ಬೆಲೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಈವರೆಗೆ ಉತ್ತರಿಸಿಲ್ಲ. ಲಸಿಕೆಗಳ ಸಂಗ್ರಹಣೆ ಮತ್ತು ವಿತರಣೆಗಾಗಿ ಸರ್ಕಾರದ ಸಿದ್ಧತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...