HomeUncategorizedಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?" ಎಂದು ಕೇಳಿದೆ.

- Advertisement -
- Advertisement -

ಮುಂದಿನ ವಾರ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ “ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ” ನೀಡುವ ಭರವಸೆಯು ಭಾರಿ ಟೀಕೆಗೆ ಗುರಿಯಾಗಿದೆ. ಆಡಳಿತ ಪಕ್ಷವು ತನ್ನ ರಾಜಕೀಯ ಕಾರ್ಯಕ್ಕೆ ಲಸಿಕೆಯನ್ನು ಬಳಸುವ ಪ್ರಯತ್ನದಲ್ಲಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇಂದು ಬಿಡುಗಡೆಯಾದ ಬಿಜೆಪಿ ಪ್ರಣಾಳಿಕೆಯಲ್ಲಿ 19 ಲಕ್ಷ ಉದ್ಯೋಗಗಳು ಸೇರಿದಂತೆ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ. ಜೊತೆಗೆ ಮುಂದಿನ ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷ ಒತ್ತಿ ಹೇಳಿದೆ.

“ಕೊರೊನಾ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಗೆ ಲಭ್ಯವಾದ ತಕ್ಷಣ, ಬಿಹಾರದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ಲಸಿಕೆ ಸಿಗುತ್ತದೆ. ಇದು ನಮ್ಮ ಮತದಾನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಮೊದಲ ಭರವಸೆ” ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಇಂದು ಹೇಳಿದ್ದರು.

ಪ್ರಣಾಳಿಕೆ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷಗಳು, ಸಾರ್ವಜನಿಕರು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಲಸಿಕೆಯನ್ನು ರಾಜಕೀಯ ಲಾಭಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ಪತ್ರಿಕಾಗೋಷ್ಠಿಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?” ಎಂದು ಕೇಳಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಭಾರತ ಸರ್ಕಾರ ಇದೀಗ ಕೊರೊನಾವನ್ನು ತಂತ್ರವನ್ನಾಗಿಸಿಕೊಂಡಿದೆ. ಲಸಿಕೆ ಪಡೆಯಲು ರಾಜ್ಯವಾರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ, ಜೊತೆಗೆ ನಿಮ್ಮ ಸುಳ್ಳು ಭರವಸೆಗಳನ್ನು ಕೂಡ” ಎಂದಿದ್ದಾರೆ.

 

ಕಾಂಗ್ರೆಸ್ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಟ್ವೀಟ್ ಮಾಡಿ, ” ನೀವು ನನಗೆ ಮತಗಳನ್ನು ನೀಡಿ, ನಾನು ನಿಮಗೆ ಲಸಿಕೆ ನೀಡುತ್ತೇನೆ” ಇದು ಭಯಾನಕ ಸಿನಿಕತನ! ಚುನಾವಣಾ ಆಯೋಗವು ಆಕೆಯ ಮೇಲೆ ಮತ್ತು ನಾಚಿಕೆಯಿಲ್ಲದ ಅವರ ಸರ್ಕಾರದ ಮೇಲೆ ಕ್ರಮ ಕೈಗೊಳ್ಳುತ್ತದೇಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

 

ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಳು ವೈರಲ್ ಆಗುತ್ತಿವೆ. ಸತೀಶ್ ಆಚಾರ್‍ಯ ಅವರ ’ಲಸಿಕೆ ರಾಜಕೀಯ’ ವ್ಯಂಗ್ಯಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ.

ಬಿಜೆಪಿಯೇತರ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಸಿಗುವುದಿಲ್ಲವೆ ಎಂದು ಹಲವು ಮಂದಿ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಫೇಸ್‌ಬುಕ್‌ನಲ್ಲಿ “ಬಿಹಾರದ ಜನರೇ, ಬಿಜೆಪಿಗೆ ವೋಟ್ ಹಾಕಿದ್ರೆ, 1.25 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ” ಎಂಬ ಫೋಸ್ಟ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರದವರೆ -ಬಿಜೆಪಿಗೆ ವೋಟ್ ಹಾಕಿದ್ರೆ,₹1.25 ಲಕ್ಷ ಕೋಟಿ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ ??‍♂️

Posted by Sharath Chandra on Thursday, October 22, 2020

 

ಕರ್ನಾಟಕ ವಿದ್ಯಾರ್ಥಿ ಸಂಘದ (ಕೆವಿಎಸ್‌) ಸಂಚಾಲಕರಾದ ಸರೋವರ್ ಬೆಂಕಿಕೆರೆ ಕರ್ನಾಟಕದವರಿಗೆ ಕರೋನಾ ಲಸಿಕೆ ಬೇಕು ಅಂದ್ರೆ ಚುನಾವಣೆ ಬರಬೇಕು ಅಂತಾನ? ಔಷಧ ಲಸಿಕೆಯನ್ನೂ ರಾಜಕೀಯಗೊಳಿಸಿಬಿಟ್ರಲ್ಲ ಗ್ರೇಟ್, ಗ್ರೇಟರ್, ಗ್ರೇಟೆಸ್ಟ್ ಕಣ್ರಿ ನೀವು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಐಟಿ ವಿಭಾಗದ ಅಮಿತ್ ಮಾಳವಿಯಾ,”ಬಿಜೆಪಿಯ ಪ್ರಣಾಳಿಕೆ ಉಚಿತ ಕೋವಿಡ್ ಲಸಿಕೆಯ ಭರವಸೆ ನೀಡುತ್ತದೆ. ಎಲ್ಲಾ ಕಾರ್ಯಕ್ರಮಗಳಂತೆ ಕೇಂದ್ರವು ರಾಜ್ಯಗಳಿಗೆ ಅತ್ಯಲ್ಪ ದರದಲ್ಲಿ ಲಸಿಕೆಗಳನ್ನು ನೀಡುತ್ತದೆ. ಆರೋಗ್ಯವು ರಾಜ್ಯ ವಿಷಯವಾಗಿರುವುದರಿಂದ ಲಸಿಕೆ ಉಚಿತವಾಗಿ ನೀಡಬೇಕೆ ಅಥವಾ ಬೇಡವೇ ಎಂದು ರಾಜ್ಯಕ್ಕೆ ಸರ್ಕಾರಗಳು ಅದನ್ನು ನಿರ್ಧರಿಸಬೇಕು. ಬಿಜೆಪಿ ಬಿಹಾರದಲ್ಲಿ ಅದನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ” ಎಂದಿದ್ದಾರೆ.

ಲಸಿಕೆ ವಿತರಣೆ ಮತ್ತು ಬೆಲೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಈವರೆಗೆ ಉತ್ತರಿಸಿಲ್ಲ. ಲಸಿಕೆಗಳ ಸಂಗ್ರಹಣೆ ಮತ್ತು ವಿತರಣೆಗಾಗಿ ಸರ್ಕಾರದ ಸಿದ್ಧತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...