Homeಮುಖಪುಟಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ಸಿಎಂ ನಿತೀಶ್ ಕುಮಾರ್ ಹರ್ಲಾಕಿಯ ಸಾರ್ವಜನಿಕ ಶಾಲೆಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅಲ್ಲಿ ನಿರುದ್ಯೋಗದ ಬಗ್ಗೆ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ...

- Advertisement -
- Advertisement -

ಮಧುಬನಿ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಕಲ್ಲು ಮತ್ತು ಈರುಳ್ಳಿ ಎಸೆದು ಅಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ಹಿಂದೆ ನಿತೀಶ್‌ ಕುಮಾರ್‌ ರ್ಯಾಲಿಯಲ್ಲಿ ಜನರು ‘ತೇಜಸ್ವಿ ಯಾದವ್ ಜಿಂದಾಬಾದ್’ ಎಂದು ಘೋಷಣೆ ಹಾಕುವುದರ ಮೂಲಕ ನಿತೀಶ್‌ ಕುಮಾರ್‌ ಅವರನ್ನು ಮುಜುಗರಕ್ಕೆ ಈಡು ಮಾಡಿದ್ದರು.

ಸಿಎಂ ನಿತೀಶ್ ಕುಮಾರ್ ಹರ್ಲಾಕಿಯ ಸಾರ್ವಜನಿಕ ಶಾಲೆಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅಲ್ಲಿ ನಿರುದ್ಯೋಗದ ಬಗ್ಗೆ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ಗುಂಪಿನಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ವೇದಿಕೆಯ ಕಡೆಗೆ ಕಲ್ಲು ಮತ್ತು ಈರುಳ್ಳಿ ಎಸೆಯಲು ಪ್ರಾರಂಭಿಸಿದರು ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ…

ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ತಡೆಯಲು ಪ್ರಯತ್ನಿಸುತ್ತಿದ್ದಾಗ, ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಮದ್ಯವನ್ನು ಮುಕ್ತವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ವ್ಯಕ್ತಿ ಕಿರುಚುತ್ತಲೇ ಇದ್ದರು.

ಬಿಹಾರದಲ್ಲಿ ಅಕ್ರಮ ಮದ್ಯ ವ್ಯಾಪಾರವನ್ನು ತಡೆಯಲು ನಿತೀಶ್ ಕುಮಾರ್ ಸರ್ಕಾರ ವಿಫಲವಾಗಿದೆ ಎಂದು ಅಲ್ಲಿದ್ದ ಕೆಲವರು ಆರೋಪಿಸಿದ್ದಾರೆ. ವೇದಿಕೆಯಲ್ಲಿ ಮುಖ್ಯಮಂತ್ರಿಯ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದಿದ್ದರಿಂದ ಈ ದಾಳಿಯಲ್ಲಿ ಮುಖ್ಯಮಂತ್ರಿಗೆ ಯಾವುದೇ ಗಾಯಗಳಾಗಿಲ್ಲ.

ಇದನ್ನೂ ಓದಿ: ಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್…

ಇದರಿಂದ ಕೋಪಗೊಂಡ ನಿತೀಶ್ ಕುಮಾರ್ ಆ ವ್ಯಕ್ತಿಗೆ “ಎಸೆಯಿರಿ, ಎಸೆಯಿರಿ” ಎಂದು ಕೂಗುತ್ತಲೇ ಹೇಳಿದರು.

ಬಿಹಾರ ಚುನಾವಣಾ ರ್ಯಾಲಿಗಳಲ್ಲಿ ನಿತೀಶ್ ಕುಮಾರ್ ಪ್ರೇಕ್ಷಕರಿಂದ ತೊಂದರೆ ಎದುರಿಸುತ್ತಿರುವುದು ಇದೇ ಮೊದಲಲ್ಲ. ಈ ಮೊದಲು, ಅವರ ರ್ಯಾಲಿಗಳಲ್ಲಿ ಜನಸಮೂಹವು ಆರ್‌ಜೆಡಿಯನ್ನು ಬೆಂಬಲಿಸುವಂತೆ ಘೋಷಣೆಗಳನ್ನು ಕೂಗಿತ್ತು.


ಇದನ್ನೂ ಓದಿ: ’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...