Homeಮುಖಪುಟಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ಸಂಜೆಯ ಹೊತ್ತಿಗೆ, ನಾವು ಸರ್ಕಾರ ರಚನೆ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುತ್ತೇವೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

- Advertisement -
- Advertisement -

ಬಿಹಾರ ಮುಖ್ಯಮಂತ್ರಿಯಾಗಿ ಮತ್ತೆ ಪಟ್ಟಕ್ಕೇರುವ ನಿತೀಶ್ ಕುಮಾರ್ ಅವರ ಕನಸು ಈಗ ಸಂಪೂರ್ಣವಾಗಿ ಅವರ ಮಿತ್ರ ಪಕ್ಷ ಬಿಜೆಪಿಯ ಮೇಲೆ ಅವಲಂಬಿತವಾಗಿದೆ. ಮತ ಎಣಿಕೆ ಇನ್ನು ಮುಂದುವರೆಯುತ್ತಿರುವ ಸಂದರ್ಭದಲ್ಲೇ ಈಗಾಗಲೇ ಬಿಜೆಪಿ ಬಿಹಾರದಲ್ಲಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಮೊದಲ ಬಾರಿಗೆ ಅವರು ಪ್ರಧಾನ ಮಂತ್ರಿ ಪಕ್ಷದೊಂದಿಗಿನ ಎನ್‌ಡಿಎನಲ್ಲಿ ಕಿರಿಯ ಪಾಲುದಾರರಾಗುವ ಸಂಭವ ಹೆಚ್ಚಾಗಿದೆ. ನಿತೀಶ್ ಕುಮಾರ್ ಅವರ ಆಪ್ತ ನಾಯಕರು “ಬ್ರಾಂಡ್ ನಿತೀಶ್” ಅನ್ನು ದೂಷಿಸದಿದ್ದರೂ ಸಹ, ಬಿಹಾರದ ಫಲಿತಾಂಶವು ಪ್ರಬಲ ಆಡಳಿತ ವಿರೋಧಿ ತತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

“ಈ ಚುನಾವಣೆಯಲ್ಲಿ ಮೋದಿಯವರ ಇಮೇಜ್  ನಮ್ಮನ್ನು ಮುನ್ನುಗ್ಗಿಸಿದೆ” ಎಂದು ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದರು. “ಸಂಜೆಯ ಹೊತ್ತಿಗೆ, ನಾವು ಸರ್ಕಾರ ರಚನೆ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುತ್ತೇವೆ” ಎಂದು ಅವರು ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: 11 ರಾಜ್ಯಗಳಲ್ಲಿ ಉಪಚುನಾವಣೆ: 58 ಕ್ಷೇತ್ರಗಳಲ್ಲಿ 28 ರಲ್ಲಿ ಮುನ್ನಡೆಯಲ್ಲಿರುವ ಬಿಜೆಪಿ

ಕೈಲಾಶ್ ವಿಜಯವರ್ಗಿಯಾ ಹೇಳಿಕೆ, ಬಿಹಾರದಲ್ಲಿ ಸರ್ಕಾರದ ಮುಖ್ಯಸ್ಥರಾಗಲು ಹೊಸ ಅಭ್ಯರ್ಥಿಯ ಬಗ್ಗೆ ಬಿಜೆಪಿ ಯೋಚಿಸಬಹುದು ಎಂಬುದನ್ನು ಸೂಚಿಸುತ್ತದೆ. ಆದರೆ ಇದರ ಬಗ್ಗೆ ಪ್ರಶ್ನಿಸಿದರೇ, ಎನ್‌ಡಿಎ ಗೆಲುವು ಸಾಧಿಸಿದರೇ, ನಿತೀಶ್ ಕುಮಾರ್‌ಗೆ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟ ನೀಡುವ ತನ್ನ ಭರವಸೆಗೆ ಬಿಜೆಪಿ ಬದ್ಧವಾಗಿದೆ ಎಂದು ವಿಜಯವರ್ಗಿಯಾ ಹೇಳಿದರು.

ಬಿಹಾರ ಚುನಾವಣೆಯಲ್ಲಿ ಇಷ್ಟು ಕಳಪೆ ಫಲಿತಾಂಶ ಬರಲು ನಿತೀಶ್ ಕುಮಾರ್ ಅವರ ತಂಡವು ಕೊರೊನಾ ಮತ್ತು ಚಿರಾಗ್ ಪಾಸ್ವಾನ್  ಕಾರಣ ಎಂದಿದ್ದಾರೆ. 38 ವರ್ಷದ ಯುವ ರಾಜಕಾರಣಿ ಚಿರಾಗ್ ಪಾಸ್ವಾನ್ ಚುನಾವಣೆಯುದ್ದಕ್ಕೂ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ನಿತೀಶ್ ಕುಮಾರ್‌ ತಂಡ ಆರೋಪಿಸಿದೆ.

ವಾಸ್ತವವಾಗಿ, ಚಿರಾಗ್ ಪಾಸ್ವಾನ್ ಅವರನ್ನು ಈ ರೀತಿಯಾಗಿ ಹೊರಬರಲು, ನಿತೀಶ್ ಕುಮಾರ್‌ ವಿರುದ್ಧ ನಿಲ್ಲಲು ಬಿಜೆಪಿಯೇ ಅವಕಾಶ ನೀಡಿತ್ತು ಎಂದು ವಿಮರ್ಶಕರು ಮತ್ತು ನಿತೀಶ್ ಕುಮಾರ್ ಅವರ ಸಹಾಯಕರು ಹೇಳುತ್ತಾರೆ. ಚಿರಾಗ್ ಪಾಸ್ವಾನ್ ಬಿಜೆಪಿ ಬತ್ತಳಿಕೆಯಿಂದ ಬಂದ ಸಣ್ಣ ಆಟಗಾರ. ಆತನನ್ನು ಮುಂದಿಟ್ಟುಕೊಂಡು ತಮ್ಮ ಹಳೆಯ ಮಿತ್ರ ನಿತೀಶ್ ಕುಮಾರ್‌ ಭವಿಷ್ಯ ನಿರ್ಧರಿಸಲು ಬಿಜೆಪಿ  ಸಿದ್ಧವಾಗಿತ್ತು ಎಂದಿದ್ದಾರೆ.


ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...