Homeಮುಖಪುಟಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ಸಂಜೆಯ ಹೊತ್ತಿಗೆ, ನಾವು ಸರ್ಕಾರ ರಚನೆ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುತ್ತೇವೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

- Advertisement -
- Advertisement -

ಬಿಹಾರ ಮುಖ್ಯಮಂತ್ರಿಯಾಗಿ ಮತ್ತೆ ಪಟ್ಟಕ್ಕೇರುವ ನಿತೀಶ್ ಕುಮಾರ್ ಅವರ ಕನಸು ಈಗ ಸಂಪೂರ್ಣವಾಗಿ ಅವರ ಮಿತ್ರ ಪಕ್ಷ ಬಿಜೆಪಿಯ ಮೇಲೆ ಅವಲಂಬಿತವಾಗಿದೆ. ಮತ ಎಣಿಕೆ ಇನ್ನು ಮುಂದುವರೆಯುತ್ತಿರುವ ಸಂದರ್ಭದಲ್ಲೇ ಈಗಾಗಲೇ ಬಿಜೆಪಿ ಬಿಹಾರದಲ್ಲಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಮೊದಲ ಬಾರಿಗೆ ಅವರು ಪ್ರಧಾನ ಮಂತ್ರಿ ಪಕ್ಷದೊಂದಿಗಿನ ಎನ್‌ಡಿಎನಲ್ಲಿ ಕಿರಿಯ ಪಾಲುದಾರರಾಗುವ ಸಂಭವ ಹೆಚ್ಚಾಗಿದೆ. ನಿತೀಶ್ ಕುಮಾರ್ ಅವರ ಆಪ್ತ ನಾಯಕರು “ಬ್ರಾಂಡ್ ನಿತೀಶ್” ಅನ್ನು ದೂಷಿಸದಿದ್ದರೂ ಸಹ, ಬಿಹಾರದ ಫಲಿತಾಂಶವು ಪ್ರಬಲ ಆಡಳಿತ ವಿರೋಧಿ ತತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

“ಈ ಚುನಾವಣೆಯಲ್ಲಿ ಮೋದಿಯವರ ಇಮೇಜ್  ನಮ್ಮನ್ನು ಮುನ್ನುಗ್ಗಿಸಿದೆ” ಎಂದು ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದರು. “ಸಂಜೆಯ ಹೊತ್ತಿಗೆ, ನಾವು ಸರ್ಕಾರ ರಚನೆ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುತ್ತೇವೆ” ಎಂದು ಅವರು ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: 11 ರಾಜ್ಯಗಳಲ್ಲಿ ಉಪಚುನಾವಣೆ: 58 ಕ್ಷೇತ್ರಗಳಲ್ಲಿ 28 ರಲ್ಲಿ ಮುನ್ನಡೆಯಲ್ಲಿರುವ ಬಿಜೆಪಿ

ಕೈಲಾಶ್ ವಿಜಯವರ್ಗಿಯಾ ಹೇಳಿಕೆ, ಬಿಹಾರದಲ್ಲಿ ಸರ್ಕಾರದ ಮುಖ್ಯಸ್ಥರಾಗಲು ಹೊಸ ಅಭ್ಯರ್ಥಿಯ ಬಗ್ಗೆ ಬಿಜೆಪಿ ಯೋಚಿಸಬಹುದು ಎಂಬುದನ್ನು ಸೂಚಿಸುತ್ತದೆ. ಆದರೆ ಇದರ ಬಗ್ಗೆ ಪ್ರಶ್ನಿಸಿದರೇ, ಎನ್‌ಡಿಎ ಗೆಲುವು ಸಾಧಿಸಿದರೇ, ನಿತೀಶ್ ಕುಮಾರ್‌ಗೆ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟ ನೀಡುವ ತನ್ನ ಭರವಸೆಗೆ ಬಿಜೆಪಿ ಬದ್ಧವಾಗಿದೆ ಎಂದು ವಿಜಯವರ್ಗಿಯಾ ಹೇಳಿದರು.

ಬಿಹಾರ ಚುನಾವಣೆಯಲ್ಲಿ ಇಷ್ಟು ಕಳಪೆ ಫಲಿತಾಂಶ ಬರಲು ನಿತೀಶ್ ಕುಮಾರ್ ಅವರ ತಂಡವು ಕೊರೊನಾ ಮತ್ತು ಚಿರಾಗ್ ಪಾಸ್ವಾನ್  ಕಾರಣ ಎಂದಿದ್ದಾರೆ. 38 ವರ್ಷದ ಯುವ ರಾಜಕಾರಣಿ ಚಿರಾಗ್ ಪಾಸ್ವಾನ್ ಚುನಾವಣೆಯುದ್ದಕ್ಕೂ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ನಿತೀಶ್ ಕುಮಾರ್‌ ತಂಡ ಆರೋಪಿಸಿದೆ.

ವಾಸ್ತವವಾಗಿ, ಚಿರಾಗ್ ಪಾಸ್ವಾನ್ ಅವರನ್ನು ಈ ರೀತಿಯಾಗಿ ಹೊರಬರಲು, ನಿತೀಶ್ ಕುಮಾರ್‌ ವಿರುದ್ಧ ನಿಲ್ಲಲು ಬಿಜೆಪಿಯೇ ಅವಕಾಶ ನೀಡಿತ್ತು ಎಂದು ವಿಮರ್ಶಕರು ಮತ್ತು ನಿತೀಶ್ ಕುಮಾರ್ ಅವರ ಸಹಾಯಕರು ಹೇಳುತ್ತಾರೆ. ಚಿರಾಗ್ ಪಾಸ್ವಾನ್ ಬಿಜೆಪಿ ಬತ್ತಳಿಕೆಯಿಂದ ಬಂದ ಸಣ್ಣ ಆಟಗಾರ. ಆತನನ್ನು ಮುಂದಿಟ್ಟುಕೊಂಡು ತಮ್ಮ ಹಳೆಯ ಮಿತ್ರ ನಿತೀಶ್ ಕುಮಾರ್‌ ಭವಿಷ್ಯ ನಿರ್ಧರಿಸಲು ಬಿಜೆಪಿ  ಸಿದ್ಧವಾಗಿತ್ತು ಎಂದಿದ್ದಾರೆ.


ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....