HomeಮುಖಪುಟBihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ ನಿತೀಶ್?

Bihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ ನಿತೀಶ್?

ತಲೆ ಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು, ಮುಖಭಂಗಕ್ಕೊಳಗಾದ ಮಹಾಘಟಬಂಧನ್!

- Advertisement -
- Advertisement -

ಭಾರಿ ಕುತೂಹಲ ಮೂಡಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ NDA ವಿಜಯ ಪತಾಕೆ ಹಾರಿಸಿದೆ. ಹೆಚ್ಚಿನ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲುತ್ತದೆ ಎಂದಿದ್ದವಾದರೂ ಎಲ್ಲಾ ಸಮೀಕ್ಷೆಗಳು ನೆಲಕಚ್ಚಿವೆ.

NDA ಕೂಟ ಒಟ್ಟು 125 ಸ್ಥಾನಗಳನ್ನು ಗೆದ್ದಿದ್ದು ಸರಳ ಬಹುಮತ ಪಡೆದಿದೆ. ಮಹಾಘಟಬಂಧನ್ ಕೂಟ 110 ಸ್ಥಾನಗಳನ್ನು ಗೆದ್ದು NDA ತೀವ್ರ ಪೈಪೋಟಿ ನೀಡಿತು. ಅಸಾದುದ್ದೀನ್ ಒವೈಸಿ ನೇತೃತ್ವದ AIMIM ತನ್ನ ಮೊದಲನೇ ಭಾರಿ 5 ಸೀಟುಗಳನ್ನು ಪಡೆದು ಅಚ್ಚರಿ ಮೂಡಿಸಿದೆ. ಒಟ್ಟು 14 ಸ್ಪರ್ಧಿಗಳನ್ನು ಕಣಕ್ಕಿಳಿಸಿದ್ದ AIMIM ಸ್ಫರ್ಧೆಯು ಮಹಾಘಟಬಂಧನ್‌ ಮೈತ್ರಿ ಕೂಟಕ್ಕೆ ದುಬಾರಿಯಾಗಿ ಪರಿಣಮಿಸಿತು.

ಇದನ್ನೂ ಓದಿ: 119 ಕ್ಷೇತ್ರಗಳಲ್ಲಿ ಗೆದ್ದರೂ ಸರ್ಟಿಫಿಕೆಟ್ ನೀಡದ ಚುನಾವಣಾ ಆಯೋಗ: ಅಕ್ರಮ ನಡೆಯುತ್ತಿದೆಯೆಂದು RJD ಆರೋಪ

ಮಹಾಘಟಬಂಧನ್‌ನ ಪ್ರಮುಖ ಪಕ್ಷವಾಗಿದ್ದ ಕಾಂಗ್ರೆಸ್ 70 ಕ್ಷೇತ್ರದಲ್ಲಿ ಸ್ಫರ್ಧಿಸಿತ್ತಾದರೂ ಕೇವಲ 19 ಕ್ಷೇತ್ರಗಳಲ್ಲಿ ಗೆದ್ದು ತೀರಾ ಕಳಪೆ ಪ್ರದರ್ಶನ ತೋರಿದೆ. ಮೈತ್ರಿಯ ಇನ್ನೊಂದು ಮಿತ್ರಪಕ್ಷವಾದ RJD 144 ಕ್ಷೇತ್ರದಲ್ಲಿ ಸ್ಫರ್ಧಿಸಿದ್ದು 75 ಕ್ಷೇತ್ರದಲ್ಲಿ ಜಯಗಳಿಸಿದೆ. ಇನ್ನುಳಿದಂತೆ ಮೈತ್ರಿಯ ಭಾಗವಾಗಿದ್ದ ಎಡಪಕ್ಷಗಳು ತಮಗೆ ನೀಡಿದ್ದ ಒಟ್ಟು 29 ಕ್ಷೇತ್ರದಲ್ಲಿ 16 ಕ್ಷೇತ್ರದಲ್ಲಿ ಜಯಗಳಿಸಿದೆ.

NDA ಕೂಟದಲ್ಲಿ ಬಿಜೆಪಿ 110 ಸ್ಥಾನಗಳಿಗೆ ಸ್ಫರ್ಧಿಸಿ 74 ಕ್ಷೇತ್ರಗಳಲ್ಲಿ ಜಯಗಳಿಸಿದೆ. 115 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ JDU 43 ಕ್ಷೇತ್ರದಲ್ಲಿ ಗೆದ್ದಿದೆ. ಕಳೆದ ವಿಧಾನಸಭೆಯಲ್ಲಿ RJD 71 ಸ್ಥಾನಗಳನ್ನು ಗೆದ್ದಿತ್ತು. ಇನ್ನುಳಿದಂತೆ NDA ಕೂಟದ ಇತರ ಪಕ್ಷಗಳು 8 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಇನ್ನು ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಕ್ಷವಾದ ಚಿರಾಜ್ ಪಾಸ್ವಾನ್ ನೇತೃತ್ವದ ಎಲ್‌‌ಜೆಪಿ ಪಕ್ಷವು 135 ಕ್ಷೇತ್ರದಲ್ಲಿ ಸ್ಫರ್ಧಿಸಿದ್ದು ಕೇವಲ ಒಂದು ಕ್ಷೇತ್ರವನ್ನಷ್ಟೇ ಗೆದ್ದುಕೊಂಡಿದೆ. BSP ಒಂದು ಸ್ಥಾನವನ್ನು ಗೆದ್ದುಕೊಂಡರೆ, ಒಂದು ಕ್ಷೇತ್ರವನ್ನು ಪಕ್ಷೇತರ ಗೆದ್ದು ಕೊಂಡಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...