HomeಮುಖಪುಟBihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ ನಿತೀಶ್?

Bihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ ನಿತೀಶ್?

ತಲೆ ಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು, ಮುಖಭಂಗಕ್ಕೊಳಗಾದ ಮಹಾಘಟಬಂಧನ್!

- Advertisement -
- Advertisement -

ಭಾರಿ ಕುತೂಹಲ ಮೂಡಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ NDA ವಿಜಯ ಪತಾಕೆ ಹಾರಿಸಿದೆ. ಹೆಚ್ಚಿನ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲುತ್ತದೆ ಎಂದಿದ್ದವಾದರೂ ಎಲ್ಲಾ ಸಮೀಕ್ಷೆಗಳು ನೆಲಕಚ್ಚಿವೆ.

NDA ಕೂಟ ಒಟ್ಟು 125 ಸ್ಥಾನಗಳನ್ನು ಗೆದ್ದಿದ್ದು ಸರಳ ಬಹುಮತ ಪಡೆದಿದೆ. ಮಹಾಘಟಬಂಧನ್ ಕೂಟ 110 ಸ್ಥಾನಗಳನ್ನು ಗೆದ್ದು NDA ತೀವ್ರ ಪೈಪೋಟಿ ನೀಡಿತು. ಅಸಾದುದ್ದೀನ್ ಒವೈಸಿ ನೇತೃತ್ವದ AIMIM ತನ್ನ ಮೊದಲನೇ ಭಾರಿ 5 ಸೀಟುಗಳನ್ನು ಪಡೆದು ಅಚ್ಚರಿ ಮೂಡಿಸಿದೆ. ಒಟ್ಟು 14 ಸ್ಪರ್ಧಿಗಳನ್ನು ಕಣಕ್ಕಿಳಿಸಿದ್ದ AIMIM ಸ್ಫರ್ಧೆಯು ಮಹಾಘಟಬಂಧನ್‌ ಮೈತ್ರಿ ಕೂಟಕ್ಕೆ ದುಬಾರಿಯಾಗಿ ಪರಿಣಮಿಸಿತು.

ಇದನ್ನೂ ಓದಿ: 119 ಕ್ಷೇತ್ರಗಳಲ್ಲಿ ಗೆದ್ದರೂ ಸರ್ಟಿಫಿಕೆಟ್ ನೀಡದ ಚುನಾವಣಾ ಆಯೋಗ: ಅಕ್ರಮ ನಡೆಯುತ್ತಿದೆಯೆಂದು RJD ಆರೋಪ

ಮಹಾಘಟಬಂಧನ್‌ನ ಪ್ರಮುಖ ಪಕ್ಷವಾಗಿದ್ದ ಕಾಂಗ್ರೆಸ್ 70 ಕ್ಷೇತ್ರದಲ್ಲಿ ಸ್ಫರ್ಧಿಸಿತ್ತಾದರೂ ಕೇವಲ 19 ಕ್ಷೇತ್ರಗಳಲ್ಲಿ ಗೆದ್ದು ತೀರಾ ಕಳಪೆ ಪ್ರದರ್ಶನ ತೋರಿದೆ. ಮೈತ್ರಿಯ ಇನ್ನೊಂದು ಮಿತ್ರಪಕ್ಷವಾದ RJD 144 ಕ್ಷೇತ್ರದಲ್ಲಿ ಸ್ಫರ್ಧಿಸಿದ್ದು 75 ಕ್ಷೇತ್ರದಲ್ಲಿ ಜಯಗಳಿಸಿದೆ. ಇನ್ನುಳಿದಂತೆ ಮೈತ್ರಿಯ ಭಾಗವಾಗಿದ್ದ ಎಡಪಕ್ಷಗಳು ತಮಗೆ ನೀಡಿದ್ದ ಒಟ್ಟು 29 ಕ್ಷೇತ್ರದಲ್ಲಿ 16 ಕ್ಷೇತ್ರದಲ್ಲಿ ಜಯಗಳಿಸಿದೆ.

NDA ಕೂಟದಲ್ಲಿ ಬಿಜೆಪಿ 110 ಸ್ಥಾನಗಳಿಗೆ ಸ್ಫರ್ಧಿಸಿ 74 ಕ್ಷೇತ್ರಗಳಲ್ಲಿ ಜಯಗಳಿಸಿದೆ. 115 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ JDU 43 ಕ್ಷೇತ್ರದಲ್ಲಿ ಗೆದ್ದಿದೆ. ಕಳೆದ ವಿಧಾನಸಭೆಯಲ್ಲಿ RJD 71 ಸ್ಥಾನಗಳನ್ನು ಗೆದ್ದಿತ್ತು. ಇನ್ನುಳಿದಂತೆ NDA ಕೂಟದ ಇತರ ಪಕ್ಷಗಳು 8 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಇನ್ನು ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಕ್ಷವಾದ ಚಿರಾಜ್ ಪಾಸ್ವಾನ್ ನೇತೃತ್ವದ ಎಲ್‌‌ಜೆಪಿ ಪಕ್ಷವು 135 ಕ್ಷೇತ್ರದಲ್ಲಿ ಸ್ಫರ್ಧಿಸಿದ್ದು ಕೇವಲ ಒಂದು ಕ್ಷೇತ್ರವನ್ನಷ್ಟೇ ಗೆದ್ದುಕೊಂಡಿದೆ. BSP ಒಂದು ಸ್ಥಾನವನ್ನು ಗೆದ್ದುಕೊಂಡರೆ, ಒಂದು ಕ್ಷೇತ್ರವನ್ನು ಪಕ್ಷೇತರ ಗೆದ್ದು ಕೊಂಡಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...