HomeಮುಖಪುಟBihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ ನಿತೀಶ್?

Bihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ ನಿತೀಶ್?

ತಲೆ ಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು, ಮುಖಭಂಗಕ್ಕೊಳಗಾದ ಮಹಾಘಟಬಂಧನ್!

- Advertisement -
- Advertisement -

ಭಾರಿ ಕುತೂಹಲ ಮೂಡಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ NDA ವಿಜಯ ಪತಾಕೆ ಹಾರಿಸಿದೆ. ಹೆಚ್ಚಿನ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲುತ್ತದೆ ಎಂದಿದ್ದವಾದರೂ ಎಲ್ಲಾ ಸಮೀಕ್ಷೆಗಳು ನೆಲಕಚ್ಚಿವೆ.

NDA ಕೂಟ ಒಟ್ಟು 125 ಸ್ಥಾನಗಳನ್ನು ಗೆದ್ದಿದ್ದು ಸರಳ ಬಹುಮತ ಪಡೆದಿದೆ. ಮಹಾಘಟಬಂಧನ್ ಕೂಟ 110 ಸ್ಥಾನಗಳನ್ನು ಗೆದ್ದು NDA ತೀವ್ರ ಪೈಪೋಟಿ ನೀಡಿತು. ಅಸಾದುದ್ದೀನ್ ಒವೈಸಿ ನೇತೃತ್ವದ AIMIM ತನ್ನ ಮೊದಲನೇ ಭಾರಿ 5 ಸೀಟುಗಳನ್ನು ಪಡೆದು ಅಚ್ಚರಿ ಮೂಡಿಸಿದೆ. ಒಟ್ಟು 14 ಸ್ಪರ್ಧಿಗಳನ್ನು ಕಣಕ್ಕಿಳಿಸಿದ್ದ AIMIM ಸ್ಫರ್ಧೆಯು ಮಹಾಘಟಬಂಧನ್‌ ಮೈತ್ರಿ ಕೂಟಕ್ಕೆ ದುಬಾರಿಯಾಗಿ ಪರಿಣಮಿಸಿತು.

ಇದನ್ನೂ ಓದಿ: 119 ಕ್ಷೇತ್ರಗಳಲ್ಲಿ ಗೆದ್ದರೂ ಸರ್ಟಿಫಿಕೆಟ್ ನೀಡದ ಚುನಾವಣಾ ಆಯೋಗ: ಅಕ್ರಮ ನಡೆಯುತ್ತಿದೆಯೆಂದು RJD ಆರೋಪ

ಮಹಾಘಟಬಂಧನ್‌ನ ಪ್ರಮುಖ ಪಕ್ಷವಾಗಿದ್ದ ಕಾಂಗ್ರೆಸ್ 70 ಕ್ಷೇತ್ರದಲ್ಲಿ ಸ್ಫರ್ಧಿಸಿತ್ತಾದರೂ ಕೇವಲ 19 ಕ್ಷೇತ್ರಗಳಲ್ಲಿ ಗೆದ್ದು ತೀರಾ ಕಳಪೆ ಪ್ರದರ್ಶನ ತೋರಿದೆ. ಮೈತ್ರಿಯ ಇನ್ನೊಂದು ಮಿತ್ರಪಕ್ಷವಾದ RJD 144 ಕ್ಷೇತ್ರದಲ್ಲಿ ಸ್ಫರ್ಧಿಸಿದ್ದು 75 ಕ್ಷೇತ್ರದಲ್ಲಿ ಜಯಗಳಿಸಿದೆ. ಇನ್ನುಳಿದಂತೆ ಮೈತ್ರಿಯ ಭಾಗವಾಗಿದ್ದ ಎಡಪಕ್ಷಗಳು ತಮಗೆ ನೀಡಿದ್ದ ಒಟ್ಟು 29 ಕ್ಷೇತ್ರದಲ್ಲಿ 16 ಕ್ಷೇತ್ರದಲ್ಲಿ ಜಯಗಳಿಸಿದೆ.

NDA ಕೂಟದಲ್ಲಿ ಬಿಜೆಪಿ 110 ಸ್ಥಾನಗಳಿಗೆ ಸ್ಫರ್ಧಿಸಿ 74 ಕ್ಷೇತ್ರಗಳಲ್ಲಿ ಜಯಗಳಿಸಿದೆ. 115 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ JDU 43 ಕ್ಷೇತ್ರದಲ್ಲಿ ಗೆದ್ದಿದೆ. ಕಳೆದ ವಿಧಾನಸಭೆಯಲ್ಲಿ RJD 71 ಸ್ಥಾನಗಳನ್ನು ಗೆದ್ದಿತ್ತು. ಇನ್ನುಳಿದಂತೆ NDA ಕೂಟದ ಇತರ ಪಕ್ಷಗಳು 8 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಇನ್ನು ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಕ್ಷವಾದ ಚಿರಾಜ್ ಪಾಸ್ವಾನ್ ನೇತೃತ್ವದ ಎಲ್‌‌ಜೆಪಿ ಪಕ್ಷವು 135 ಕ್ಷೇತ್ರದಲ್ಲಿ ಸ್ಫರ್ಧಿಸಿದ್ದು ಕೇವಲ ಒಂದು ಕ್ಷೇತ್ರವನ್ನಷ್ಟೇ ಗೆದ್ದುಕೊಂಡಿದೆ. BSP ಒಂದು ಸ್ಥಾನವನ್ನು ಗೆದ್ದುಕೊಂಡರೆ, ಒಂದು ಕ್ಷೇತ್ರವನ್ನು ಪಕ್ಷೇತರ ಗೆದ್ದು ಕೊಂಡಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...