Homeಮುಖಪುಟಬಿಹಾರ ಚುನಾವಣಾ ಕಾರ್ಯತಂತ್ರ | ದೆಹಲಿಯಲ್ಲಿ ಸಭೆ ನಡೆಸಿದ ಆರ್‌ಜೆಡಿ, ಕಾಂಗ್ರೆಸ್

ಬಿಹಾರ ಚುನಾವಣಾ ಕಾರ್ಯತಂತ್ರ | ದೆಹಲಿಯಲ್ಲಿ ಸಭೆ ನಡೆಸಿದ ಆರ್‌ಜೆಡಿ, ಕಾಂಗ್ರೆಸ್

- Advertisement -
- Advertisement -

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆ ಮಂಗಳವಾರ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಿತು. ಬಿಹಾರ ಚುನಾವಣಾ ಕಾರ್ಯತಂತ್ರ

ಕಾಂಗ್ರೆಸ್ ಮತ್ತು ಆರ್‌ಜೆಡಿ ಎರಡೂ ಪಕ್ಷಗಳ ನಾಯಕರು ಸೀಟು ಹಂಚಿಕೆ ಸೂತ್ರ ಸೇರಿದಂತೆ ವಿವಿಧ ಚುನಾವಣಾ ಪೂರ್ವ ವಿಷಯಗಳ ಕುರಿತು ಗಂಟೆಗಟ್ಟಲೆ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಚರ್ಚೆಗಳು ಸಕಾರಾತ್ಮಕವಾಗಿ ನಡೆದಿವೆ ಮತ್ತು ಏಪ್ರಿಲ್ 17 ರಂದು ಪಾಟ್ನಾದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ನಡೆಯುವ ಮುಂದಿನ ಸಭೆಯಲ್ಲಿ ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಎನ್‌ಡಿಎ ಸರ್ಕಾರವನ್ನು ಟೀಕಿಸಿದ ತೇಜಸ್ವಿ ಯಾದವ್, ರಾಜ್ಯದಲ್ಲಿ ಸಿಎಂ ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ ಮತ್ತು ಎನ್‌ಡಿಎ ಆಳ್ವಿಕೆಯಲ್ಲಿ ಯಾವುದೇ ಅರ್ಥಪೂರ್ಣ ಬೆಳವಣಿಗೆ ನಡೆದಿಲ್ಲ ಎಂದು ಹೇಳಿದ್ದಾರೆ.

ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿದಂತೆ ಇತರ ಪಕ್ಷಗಳನ್ನು ಒಳಗೊಂಡ ಮಹಾಘಟಬಂಧನ್ ಮೈತ್ರಿಯು ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರವನ್ನು ಸೋಲಿಸಲು ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದಾರೆ.

ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ “ವಿಷಯಾಧಾರಿತ” ವೇದಿಕೆಯಲ್ಲಿ ಸ್ಪರ್ಧಿಸಲಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಅಭಿವೃದ್ಧಿ ಸೇರಿದಂತೆ ಎಲ್ಲಾ ರಂಗಗಳಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಮಹಾಘಟಬಂಧನ್‌ ಮೈತ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ತೇಜಸ್ವಿ, “ಎಲ್ಲವನ್ನೂ ಸೂಕ್ತ ಸಮಯದಲ್ಲಿ ಮತ್ತು ಪರಸ್ಪರ ನಿರ್ಧರಿಸಲಾಗುತ್ತದೆ. ಅಭಿವೃದ್ಧಿ ಮಾಡುವಲ್ಲಿ ಶೋಚನೀಯವಾಗಿ ವಿಫಲವಾಗಿರುವ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಕಿತ್ತೊಗೆಯಲು ನಾವು ಒಗ್ಗಟ್ಟಾಗಿದ್ದೇವೆ. ನಾವು ರಾಜ್ಯವನ್ನು ಸಾಮಾನ್ಯ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕರೊಂದಿಗಿನ ಸಭೆ ಒಂದು ಗಂಟೆ ಕಾಲ ನಡೆಯಿತು. ಸಭೆಯಲ್ಲಿ ಬಿಹಾರದ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್, ಮನೋಜ್ ಕುಮಾರ್ ಝಾ (ಆರ್‌ಜೆಡಿ ಸಂಸದ, ರಾಜ್ಯಸಭೆ), ಸಂಜಯ್ ಯಾದವ್ (ಆರ್‌ಜೆಡಿ ಸಂಸದ, ರಾಜ್ಯಸಭೆ) ಸೇರಿದಂತೆ ಇತರ ಆರ್‌ಜೆಡಿ ನಾಯಕರು ಭಾಗವಹಿಸಿದ್ದರು. ಬಿಹಾರ ಚುನಾವಣಾ ಕಾರ್ಯತಂತ್ರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...