Homeಮುಖಪುಟಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ - ನಿತೀಶ್‌ ಕುಮಾರ್‌ಗೆ ತಲೆನೋವು!

ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

"ಚಿರಾಗ್ ಪಾಸ್ವಾನ್ ಅವರೊಂದಿಗೆ ನಿತೀಶ್ ಕುಮಾರ್ ವರ್ತಿಸಿರುವ ರೀತಿ ಸರಿಯಲ್ಲ. ಚಿರಾಗ್ ಪಾಸ್ವಾನ್ ಅವರಿಗೆ ಹಿಂದೆಂದಿಗಿಂತಲೂ ಈ ಸಮಯದಲ್ಲಿ ಅವರ ತಂದೆಯ ಅಗತ್ಯವಿದೆ. ನಿತೀಶ್ ಕುಮಾರ್ ಅವರು ಚಿರಾಗ್‌ ಪಾಸ್ವಾನ್‌ಗೆ ಅನ್ಯಾಯ ಮಾಡಿದ್ದಾರೆ"- ತೇಜಸ್ವಿ ಯಾದವ್

- Advertisement -
- Advertisement -

ಬಿಹಾರ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರ ವಿರೋಧಿಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ನಿತೀಶ್ ಕುಮಾರ್ ನಾಯಕತ್ವ ವಿರೋಧಿಸಿ ಚಿರಾಗ್ ಪಾಸ್ವಾನ್ ಎನ್‌ಡಿಎ ಮೈತ್ರಿ ಮುರಿದಿದ್ದಾರೆ. ಈಗ ಚಿರಾಗ್ ಪಾಸ್ವಾನ್ ಪರ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಬ್ಯಾಟ್ ಬೀಸಿದ್ದಾರೆ.

ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಆಡಳಿತರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ (ಎನ್‌ಡಿಎ) ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ತಾವು ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹೋರಾಡುತ್ತಿದ್ದರೂ ಕೂಡ ಬಿಜೆಪಿಗೆ ಮಿತ್ರರಾಗಿಯೇ ಇರಬೇಕೆಂದು ಬಯಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಎಲ್‌ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಅನ್ಯಾಯವೆಸಗಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದಾರೆ. ಇದು ನಿತೀಶ್ ಕುಮಾರ್ ಅವರಲ್ಲಿ ಆತಂಕ ಉಂಟು ಮಾಡಿದೆ.

ಇದನ್ನೂ ಓದಿ: ಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

“ಚಿರಾಗ್ ಪಾಸ್ವಾನ್ ಅವರೊಂದಿಗೆ ನಿತೀಶ್ ಕುಮಾರ್ ವರ್ತಿಸಿರುವ ರೀತಿ ಸರಿಯಲ್ಲ. ಚಿರಾಗ್ ಪಾಸ್ವಾನ್ ಅವರಿಗೆ ಹಿಂದೆಂದಿಗಿಂತಲೂ ಈ ಸಮಯದಲ್ಲಿ ಅವರ ತಂದೆಯ ಅಗತ್ಯವಿದೆ. ಆದರೆ ರಾಮ್ ವಿಲಾಸ್ ಪಾಸ್ವಾನ್ ನಮ್ಮ ನಡುವೆ ಇಲ್ಲ. ಈ ಬಗ್ಗೆ ನಾವು ದುಃಖಿತರಾಗಿದ್ದೇವೆ. ನಿತೀಶ್ ಕುಮಾರ್ ಅವರು ಚಿರಾಗ್‌ ಪಾಸ್ವಾನ್‌ಗೆ ಅನ್ಯಾಯ ಮಾಡಿದ್ದಾರೆ” ಎಂಬ ತೇಜಸ್ವಿ ಯಾದವ್ ಅವರ ಹೇಳಿಕೆ ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ಚಿರಾಗ್ ಪಾಸ್ವಾನ್, ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮರಣದ ನಂತರ ನಿತೀಶ್ ಕುಮಾರ್ ಅವರ ವರ್ತನೆಯಿಂದ ತೀವ್ರ ನೋವುಂಟಾಗಿರುವುದಾಗಿ ತಿಳಿಸಿದ್ದರು.

ದುಖಃದ ಸಮಯದಲ್ಲೂ ಕೂಡ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಗಾಗಲಿ, ತಮ್ಮ ತಾಯಿಗಾಗಲಿ ಸಮಾಧಾನದ ಮಾತು ಕೂಡ ಆಡಲಿಲ್ಲ ಎಂದು ದೂಷಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ತೇಜಸ್ವಿ ಯಾದವ್ ಹೇಳಿಕೆ ಹೊರಬಿದ್ದಿದೆ.

ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ಬಿಹಾರ ಚುನಾವಣೆಯಲ್ಲಿ ಚಿರಾಗ್ ನೇತೃತ್ವದ ಎಲ್‌ಜೆಪಿ, 243 ಸದಸ್ಯರ ವಿಧಾನಸಭೆಗೆ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅಕ್ಟೋಬರ್ 21ರಿಂದ ಚಿರಾಗ್ ಪ್ರಚಾರ ಆರಂಭಿಸಲಿದ್ದಾರೆ. ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.

ಬಿಜೆಪಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಗ್ಗೆ ಕೋಪ ಇದ್ದರೂ ಸಹ ಮಿತ್ರರಾಗಿ “ಸಮ್ಮಿಶ್ರ ಧರ್ಮ” ವನ್ನು ಅನುಸರಿಸುತ್ತಿದೆ ಎಂದು ಚಿರಾಗ್ ಪಾಸ್ವಾನ್ ನಿನ್ನೆ ಹೇಳಿದ್ದರು.

ಆದರೆ ಕಳೆದ ಕೆಲವು ದಿನಗಳಲ್ಲಿ ಚಿರಾಗ್ ಹಿರಿಯ ನಾಯಕರ ಸಾಮೀಪ್ಯವನ್ನು ತಿಳಿಸುವ ಮೂಲಕ ಗೊಂದಲವನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಎನ್‌ಡಿಎ ಮೈತ್ರಿಕೂಟವು ಜಯಗಳಿಸಿದರೆ ನಿತೀಶ್ ಕುಮಾರ್ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಚರಿಸಿದೆ.


ಇದನ್ನೂ ಓದಿ: ಬಿಹಾರ: ಕಾಂಗ್ರೆಸ್ ಸೇರಿದ ಶರದ್ ಯಾದವ್ ಪುತ್ರಿ ಸುಭಾಷಿಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...