Homeಮುಖಪುಟಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ - ನಿತೀಶ್‌ ಕುಮಾರ್‌ಗೆ ತಲೆನೋವು!

ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

"ಚಿರಾಗ್ ಪಾಸ್ವಾನ್ ಅವರೊಂದಿಗೆ ನಿತೀಶ್ ಕುಮಾರ್ ವರ್ತಿಸಿರುವ ರೀತಿ ಸರಿಯಲ್ಲ. ಚಿರಾಗ್ ಪಾಸ್ವಾನ್ ಅವರಿಗೆ ಹಿಂದೆಂದಿಗಿಂತಲೂ ಈ ಸಮಯದಲ್ಲಿ ಅವರ ತಂದೆಯ ಅಗತ್ಯವಿದೆ. ನಿತೀಶ್ ಕುಮಾರ್ ಅವರು ಚಿರಾಗ್‌ ಪಾಸ್ವಾನ್‌ಗೆ ಅನ್ಯಾಯ ಮಾಡಿದ್ದಾರೆ"- ತೇಜಸ್ವಿ ಯಾದವ್

- Advertisement -
- Advertisement -

ಬಿಹಾರ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರ ವಿರೋಧಿಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ನಿತೀಶ್ ಕುಮಾರ್ ನಾಯಕತ್ವ ವಿರೋಧಿಸಿ ಚಿರಾಗ್ ಪಾಸ್ವಾನ್ ಎನ್‌ಡಿಎ ಮೈತ್ರಿ ಮುರಿದಿದ್ದಾರೆ. ಈಗ ಚಿರಾಗ್ ಪಾಸ್ವಾನ್ ಪರ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಬ್ಯಾಟ್ ಬೀಸಿದ್ದಾರೆ.

ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಆಡಳಿತರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ (ಎನ್‌ಡಿಎ) ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ತಾವು ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹೋರಾಡುತ್ತಿದ್ದರೂ ಕೂಡ ಬಿಜೆಪಿಗೆ ಮಿತ್ರರಾಗಿಯೇ ಇರಬೇಕೆಂದು ಬಯಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಎಲ್‌ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಅನ್ಯಾಯವೆಸಗಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದಾರೆ. ಇದು ನಿತೀಶ್ ಕುಮಾರ್ ಅವರಲ್ಲಿ ಆತಂಕ ಉಂಟು ಮಾಡಿದೆ.

ಇದನ್ನೂ ಓದಿ: ಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

“ಚಿರಾಗ್ ಪಾಸ್ವಾನ್ ಅವರೊಂದಿಗೆ ನಿತೀಶ್ ಕುಮಾರ್ ವರ್ತಿಸಿರುವ ರೀತಿ ಸರಿಯಲ್ಲ. ಚಿರಾಗ್ ಪಾಸ್ವಾನ್ ಅವರಿಗೆ ಹಿಂದೆಂದಿಗಿಂತಲೂ ಈ ಸಮಯದಲ್ಲಿ ಅವರ ತಂದೆಯ ಅಗತ್ಯವಿದೆ. ಆದರೆ ರಾಮ್ ವಿಲಾಸ್ ಪಾಸ್ವಾನ್ ನಮ್ಮ ನಡುವೆ ಇಲ್ಲ. ಈ ಬಗ್ಗೆ ನಾವು ದುಃಖಿತರಾಗಿದ್ದೇವೆ. ನಿತೀಶ್ ಕುಮಾರ್ ಅವರು ಚಿರಾಗ್‌ ಪಾಸ್ವಾನ್‌ಗೆ ಅನ್ಯಾಯ ಮಾಡಿದ್ದಾರೆ” ಎಂಬ ತೇಜಸ್ವಿ ಯಾದವ್ ಅವರ ಹೇಳಿಕೆ ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ಚಿರಾಗ್ ಪಾಸ್ವಾನ್, ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮರಣದ ನಂತರ ನಿತೀಶ್ ಕುಮಾರ್ ಅವರ ವರ್ತನೆಯಿಂದ ತೀವ್ರ ನೋವುಂಟಾಗಿರುವುದಾಗಿ ತಿಳಿಸಿದ್ದರು.

ದುಖಃದ ಸಮಯದಲ್ಲೂ ಕೂಡ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಗಾಗಲಿ, ತಮ್ಮ ತಾಯಿಗಾಗಲಿ ಸಮಾಧಾನದ ಮಾತು ಕೂಡ ಆಡಲಿಲ್ಲ ಎಂದು ದೂಷಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ತೇಜಸ್ವಿ ಯಾದವ್ ಹೇಳಿಕೆ ಹೊರಬಿದ್ದಿದೆ.

ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ಬಿಹಾರ ಚುನಾವಣೆಯಲ್ಲಿ ಚಿರಾಗ್ ನೇತೃತ್ವದ ಎಲ್‌ಜೆಪಿ, 243 ಸದಸ್ಯರ ವಿಧಾನಸಭೆಗೆ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅಕ್ಟೋಬರ್ 21ರಿಂದ ಚಿರಾಗ್ ಪ್ರಚಾರ ಆರಂಭಿಸಲಿದ್ದಾರೆ. ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.

ಬಿಜೆಪಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಗ್ಗೆ ಕೋಪ ಇದ್ದರೂ ಸಹ ಮಿತ್ರರಾಗಿ “ಸಮ್ಮಿಶ್ರ ಧರ್ಮ” ವನ್ನು ಅನುಸರಿಸುತ್ತಿದೆ ಎಂದು ಚಿರಾಗ್ ಪಾಸ್ವಾನ್ ನಿನ್ನೆ ಹೇಳಿದ್ದರು.

ಆದರೆ ಕಳೆದ ಕೆಲವು ದಿನಗಳಲ್ಲಿ ಚಿರಾಗ್ ಹಿರಿಯ ನಾಯಕರ ಸಾಮೀಪ್ಯವನ್ನು ತಿಳಿಸುವ ಮೂಲಕ ಗೊಂದಲವನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಎನ್‌ಡಿಎ ಮೈತ್ರಿಕೂಟವು ಜಯಗಳಿಸಿದರೆ ನಿತೀಶ್ ಕುಮಾರ್ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಚರಿಸಿದೆ.


ಇದನ್ನೂ ಓದಿ: ಬಿಹಾರ: ಕಾಂಗ್ರೆಸ್ ಸೇರಿದ ಶರದ್ ಯಾದವ್ ಪುತ್ರಿ ಸುಭಾಷಿಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...