Homeಮುಖಪುಟಬಿಹಾರ: ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಸಚಿವರ ವಿರುದ್ಧ ಎಫ್‌ಐಆರ್‌!

ಬಿಹಾರ: ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಸಚಿವರ ವಿರುದ್ಧ ಎಫ್‌ಐಆರ್‌!

ಗಯಾ ಮೂಲದ ಶಾಸಕರಾಗಿರುವ ಪ್ರೇಮ್ ಕುಮಾರ್ ಬಿಜೆಪಿ ಪಕ್ಷದ ಕಮಲದ ಗುರುತಿರುವ ಮಾಸ್ಕ್ ಧರಿಸಿ ಮತ ಚಲಾಯಿಸಲು ಬೈಸಿಕಲ್‌ನಲ್ಲಿ ಬಂದಿದ್ದರು

- Advertisement -
- Advertisement -

ಗಯಾದ ಬಿಜೆಪಿ ಅಭ್ಯರ್ಥಿ ಮತ್ತು ಕೃಷಿ ಸಚಿವ ಪ್ರೇಮ್ ಕುಮಾರ್ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡ ಜಿಲ್ಲಾಡಳಿತ ಇಂದು ಕೊಟ್ವಾಲಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.

ತಮ್ಮ ಪಕ್ಷದ ಕಮಲದ ಗುರುತಿರುವ ಮುಖವಾಡ (ಮಾಸ್ಕ್) ಧರಿಸಿ ಗಯಾ ಮೂಲದ ಶಾಸಕರಾಗಿರುವ ಪ್ರೇಮ್ ಕುಮಾರ್ ಅವರು ಮತ ಚಲಾಯಿಸಲು ಬೈಸಿಕಲ್‌ನಲ್ಲಿ ಬಂದಿದ್ದರು. ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಮತದಾನದ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಸಚಿವರನ್ನು ತಡೆದರು.

ಮುಖ್ಯ ಚುನಾವಣಾ ಅಧಿಕಾರಿ ಎಚ್.ಆರ್.ಶ್ರೀನವಾಸ ಅವರ ಪ್ರಕಾರ, “ಜಿಲ್ಲಾಡಳಿತದ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಕೃಷಿ ಸಚಿವರು ತಮ್ಮ ಪಕ್ಷದ ಗುರುತು ಹೊಂದಿರುವ ಮಾಸ್ಕ್‌ ಧರಿಸಿ ಮತ ಚಲಾಯಿಸಿದರು ಮಾತ್ರವಲ್ಲದೆ ಗೆಲುವು ಸಾಧಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ. ಕಮಲದ ಗುರುತಿನ ಮುಖವಾಡ ಧರಿಸಿ ಬೂತ್‌ಗೆ ಹೋಗಿದ್ದಕ್ಕಾಗಿ ಆತನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಾಗಿದೆ. ಡಿಎಂ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ನೀತಿಸಂಹಿತೆ ಉಲ್ಲಂಘನೆ ಆರೋಪ: RR ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಪ್ರಕರಣ ದಾಖಲು

ಇದರ ನಡುವೆ ಹೇಳಿಕೆ ನೀಡಿರುವ ಸಚಿವರು, ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಉದ್ದೇಶವಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದರು. “ನಾನು ಬಿಜೆಪಿ ಚಿಹ್ನೆಯ ಕಮಲದ ಗುರುತಿನ ಮಾಸ್ಕ್‌ ಅನ್ನು ತೆಗೆದುಹಾಕಲು ಮರೆತು ಮತ ಚಲಾಯಿಸಿದೆ. ಅರಿತುಕೊಂಡ ಕೂಡಲೇ ನಾನು ಅದನ್ನು ತೆಗೆದುಹಾಕಿದೆ” ಎಂದು ಅವರು ಹೇಳಿದ್ದಾರೆ.

ಗಯಾದ 230 ಪ್ರದೇಶಗಳ ವಲಯ ಮ್ಯಾಜಿಸ್ಟ್ರೇಟ್ ಬಿಪಿನ್ ಕುಮಾರ್ ಅವರು ಕೊಟ್ವಾಲಿ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸಲು ಆದೇಶಿಸಿದ್ದಾರೆ. ಕೊಟ್ವಾಲಿ ಪೊಲೀಸರು, 171 (ಎಫ್)/188,128/130 ಆರ್‌ಪಿ ಕಾಯ್ದೆ 1951 ರ ಅಡಿಯಲ್ಲಿ ಎಫ್ಐಆರ್ (408/20) ಅನ್ನು ನೋಂದಾಯಿಸಿದ್ದಾರೆ.

ಇಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ನವೆಂಬರ್‌ ೧೦ ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಯಡಿಯೂರಪ್ಪಗೆ ಸಮನ್ಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...