Homeಮುಖಪುಟಬಿಹಾರ ಚುನಾವಣೆ 'ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ' : ರಾಹುಲ್ ಗಾಂಧಿ

ಬಿಹಾರ ಚುನಾವಣೆ ‘ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ’ : ರಾಹುಲ್ ಗಾಂಧಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ‘ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ (ನವೆಂಬರ್ 14) ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸೋಲನುಭವಿಸಿದ ಕೆಲ ಗಂಟೆಗಳ ಬಳಿಕ ವಿಪಕ್ಷ ನಾಯಕ ಸಾಮಾಜಿಕ ಮಾಧ್ಯಮದಲ್ಲಿ ಮೇಲಿನ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಶುಕ್ರವಾರ (ನವೆಂಬರ್ 14) ಪ್ರಕಟಗೊಂಡಿದೆ. ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಭೂತಪೂರ್ವ ಗೆಲುವು ದಾಖಲಿಸಿದೆ. ಒಕ್ಕೂಟದ ಪ್ರಮುಖ ಪಕ್ಷ ಬಿಜೆಪಿ 89 ಸ್ಥಾನಗಳನ್ನು ಪಡೆದಿದ್ದು, ನಿತೀಶ್ ಕುಮಾರ್ ನೇತೃತ್ವದ ಜೆಡಿ (ಯು) 85 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. ಒಕ್ಕೂಟದ ಮತ್ತೊಂದು ಪಕ್ಷ ಎಲ್‌ಜೆಪಿ (ರಾಮ್‌ ವಿಲಾಸ್) 19 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

ಇತ್ತ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷ ಕಾಂಗ್ರೆಸ್‌ ಕೇವಲ 6 ಸ್ಥಾನಗಳಿಗೆ ತೃಪ್ತಿಪಡೆದುಕೊಂಡಿದೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ 24 ಸ್ಥಾನಗಳನ್ನು ಗಳಿಸಿದೆ. ಸಿಪಿಐ (ಎಂಎಲ್‌) (ಎಲ್) ಎರಡು ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 2020ರ ಚುನಾವಣೆಯಲ್ಲಿ 19 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ 6 ಕುಸಿದಿದೆ.

ಶುಕ್ರವಾರ ಸಂಜೆ ಹಾಕಿದ ಪೋಸ್ಟ್‌ನಲ್ಲಿ ವಿರೋಧ ಪಕ್ಷಗಳ ಮಹಾಘಟಬಂಧನ್ ಒಕ್ಕೂಟದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಮತದಾರರಿಗೆ ರಾಹುಲ್ ಗಾಂಧಿ ಧನ್ಯವಾದ ಅರ್ಪಿಸಿದ್ದಾರೆ. ಆದರೆ, ಫಲಿತಾಂಶ ನಿಜವಾಗಿಯೂ ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ.

“ಆರಂಭದಿಂದಲೂ ನ್ಯಾಯಯುತವಾಗಿರದ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ” ಎಂದಿದ್ದಾರೆ.

“ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಮಾಡುತ್ತಿರುವ ಹೋರಾಟವಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಒಕ್ಕೂಟ ಬಿಹಾರದ ಫಲಿತಾಂಶವನ್ನು ಆಳವಾಗಿ ಪರಿಶೀಲನೆ ನಡೆಸಲಿದೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇನ್ನಷ್ಟು ಪರಿಣಾಮಕಾರಿ ಪ್ರಯತ್ನ ಮಾಡಲಿದೆ” ಎಂದು ಬರೆದುಕೊಂಡಿದ್ದಾರೆ.

“ಬಿಹಾರದ ಚುನಾವಣಾ ಫಲಿತಾಂಶ ನಿಸ್ಸಂದೇಹವಾಗಿ ಬೃಹತ್ ಪ್ರಮಾಣದಲ್ಲಿ ಮತ ಕಳ್ಳತನವನ್ನು ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶುಕ್ರವಾರ ರಾತ್ರಿ ಹೇಳಿದ್ದಾರೆ. ಇದು ಪ್ರಧಾನಿ, ಕೇಂದ್ರ ಗೃಹ ಸಚಿವರು ಮತ್ತು ಚುನಾವಣಾ ಆಯೋಗದ ಮಾಸ್ಟರ್ ಮೈಂಡ್ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ ನಡೆದ ಮಹಾರಾಷ್ಟ್ರ, ಹರಿಯಾಣದ ವಿಧಾನಸಭಾ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಈಗಾಗಲೇ ಆರೋಪಿಸಿದ್ದಾರೆ.

2024ರ ಲೋಕಸಭೆ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಮತ್ತು 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ನಡೆದ ಮತಗಳ್ಳತನ ಕುರಿತು ಸುದ್ದಿಗೋಷ್ಠಿ ನಡೆಸಿ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ.

ರಾಹುಲ್ ಗಾಂಧಿ ಒಟ್ಟು 3 ಬಾರಿ ದೆಹಲಿಯಲ್ಲಿ ದೊಡ್ಡ ಮಟ್ಟದ ಪತ್ರಿಕಾಗೋಷ್ಠಿ ನಡೆಸಿ ಮತಗಳ್ಳತನ ಆರೋಪಗಳನ್ನು ಮಾಡಿದ್ದಾರೆ. ಚುನಾವಣಾ ಆಯೋಗ ಪ್ರತೀ ಬಾರಿಯೂ ಅವರ ಆರೋಪಗಳನ್ನು ನಿರಾಕರಿಸಿಕೊಂಡು ಬಂದಿದೆ.

ಚುನಾವಣಾ ಆಯೋಗವು ನಕಲಿ ಮತದಾರರನ್ನು ತೆಗೆದುಹಾಕದೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ನಾಶಮಾಡುವ ಮೂಲಕ ಸಾಕ್ಷ್ಯಗಳನ್ನು ಮುಚ್ಚಿಹಾಕಿ ಬಿಜೆಪಿಗೆ ಚುನಾವಣೆ ಗೆಲ್ಲಲು ಸಹಾಯ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ: ಕೊಲೆ ಆರೋಪಿ ಅನಂತ್ ಸಿಂಗ್ ಗೆ ಮೊಕಾಮಾದಲ್ಲಿ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...