HomeUncategorizedಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, 2ನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಿನ್ನೆ ಮುಕ್ತಾಯವಾಗಿದೆ. ಇದರ ನಡುವೆಯೇ ಟ್ವಿಟ್ಟರ್‌ನಲ್ಲಿ #BiharRejectsModi ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.

ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಆಡಳಿತ ಮತ್ತು ಬಿಹಾರದ ನಿತಿಶ್‌ ಕುಮಾರ್ ಅವರ ಆಡಳಿತದ ವಿರುದ್ಧ ಅಲ್ಲಿನ ಜನ ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಗೀತ್‌ ವಿ ಎಂಬುವವರು ಟ್ವೀಟ್ ಮಾಡಿ, “ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ. #BiharrejectsModi” ಎಂದು ಬರೆದುಕೊಂಡು, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಪ್ರತಿನಿಧಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ವಸ್ಲಾಲಾ ಕುಮಾರಿ ಎಂಬುವವರು ಟ್ವೀಟ್ ಮಾಡಿ, “ರೈತರ ಆತ್ಮಹತ್ಯೆ, ನಿರುದ್ಯೋಗ, ಜಂಗಲ್ ರಾಜ್, ಸಾರ್ವಜನಿಕರ ಲೂಟಿ, ಕೋಮುದ್ವೇಷ, ಜುಮ್ಲಾ, ಭಾಷಾ ರಾಜಕೀಯ, ಹುಸಿ ರಾಷ್ಟ್ರೀಯತೆ, ಲಸಿಕೆ ರಾಜಕೀಯಗಳಿಗೆ ಸ್ಥಳವಿಲ್ಲ. ಬಿಹಾರ ಸಮೃದ್ಧಿಯಾಗಲಿದೆ. ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಗೆ ಮತದಾನ ನೀಡಿ” ಎಂದು ಬರೆದಿದ್ದು, ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಜಕೀಯ ತಂತ್ರಗಳನ್ನು ಚಿತ್ರಿಸಲಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ಎಂ.ಡಿ.ಒಬೇದುಲ್ಲಾ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಕೊರೊನಾ ರೋಗಿಗಳ ನಿರ್ವಹಣೆಯಲ್ಲಿ ಸರ್ಕಾರ ವ್ಯವಹರಿಸುವಿಕೆಯ ರೀತಿ ಇದಾಗಿದೆ. ಕೇಂದ್ರ ಸರ್ಕಾರ ಮತ್ತು ಬಿಹಾರ ರಾಜ್ಯ ಸರ್ಕಾರದ ವಿಫಲತೆಯಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. #BiharrejectsModi” ಎಂದು ಬರೆದುಕೊಂಡಿದ್ದಾರೆ.

ಕಳೆದ 15 ವರ್ಷಗಳಿಂದಲೂ ಬಿಹಾರ ರಾಜ್ಯವು ನಿತೀಶ್ ಕುಮಾರ್ ಆಡಳಿತದಲ್ಲಿಯೇ ಇದೆ. ಆದರೂ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂಬುದಾಗಿ ವಿರೋಧ ಪಕ್ಷಗಳೂ ಸೇರಿದಂತೆ ಹಲವರು ಆರೋಪಿಸಿದ್ದಾರೆ. ಅದೂ ಅಲ್ಲದೇ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದರ ವಿರುದ್ಧವೂ ಈಗ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ರಾಜಕೀಯ ವಲಯದಲ್ಲಿ ತೇಜಸ್ವಿ ಯಾದವ್, ಚಿರಾಗ್ ಪಾಸ್ವಾನ್ ಮತ್ತು ನಿತೀಶ್ ಕುಮಾರ್‌ ನಡುವೆ ಮಹಾ ಪೈಪೋಟಿ ನಡೆಯುತ್ತಿದೆ. ಎನ್‌ಡಿಎ ಮೈತ್ರಿಯಲ್ಲಿ ಬಿಜೆಪಿ, ‌ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳಿದ್ದವು. ಆದರೆ ನಿತೀಶ್ ಕುಮಾರ್‌ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಚಿರಾಗ್‌ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಇದು ಬಿಜೆಪಿ ಮತ್ತು ನಿತೀಶ್ ಕುಮಾರ್‌ಗೆ ಹಿನ್ನಡೆಯನ್ನುಂಟುಮಾಡಿದೆ. ಇನ್ನು ತೇಜಸ್ವಿಯವರ ಆರ್‌ಜೆಡಿ ಮತ್ತು ಎಲ್ಲಾ ಎಡ ಪಕ್ಷಗಳೂ ಸೇರಿ ಮಹಾಘಟಬಂಂಧನ್ ರಚಿಸಿಕೊಂಡಿವೆ. ರಾಜ್ಯದಲ್ಲಿ ಇದಕ್ಕೆ ಉತ್ತಮ ಬೆಂಬಲವಿದೆ ಎನ್ನಲಾಗಿದೆ.

ಇದರ ನಡುವೆ ಎನ್‌ಡಿಎ ಮೈತ್ರಿಕೂಟದ ಪ್ರನಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆಯ ವಿಷಯವನ್ನು ಪ್ರಸ್ತಾಪಿಸಿ ನಗೆಪಾಟಲಿಗೀಡಾಗಿದ್ದರು. ಜೊತೆಗೆ ಕೇಂದ್ರದಲ್ಲಿ ಬಿಜೆಪಿಯ ವೈಫಲ್ಯತೆ, ಆರ್ಥಿಕ ಕುಸಿತ, ಕೊರೊನಾ ನಿರ್ವಹಣೆ, ಸಿಎಎ, ಎನ್‌ಆರ್‌ಸಿ ಮುಂತಾದ ಎಲ್ಲಾ ಅಂಶಗಳೂ ಬಿಜೆಪಿಯ ವಿರುದ್ಧವಾಗಿದೆ. ಜೊತೆಗೆ ತೇಜಸ್ವಿ ಯಾದವ್ ತಮ್ಮ ರ್ಯಾಲಿಗಳಲ್ಲಿ ನಿತೀಶ್ ಮತ್ತು ಮೋದಿಯ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸುತ್ತಿದ್ದು ಉತ್ತಮ ಬೆಂಬಲ ಪಡೆಯುತ್ತಿದ್ದಾರೆ.

ಒಟ್ಟಾರೆಯಾಗಿ ಬಿಹಾರದ ಜನತೆ ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ನವೆಂಬರ್ 10 ರವರೆಗೆ ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...