HomeUncategorizedಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, 2ನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಿನ್ನೆ ಮುಕ್ತಾಯವಾಗಿದೆ. ಇದರ ನಡುವೆಯೇ ಟ್ವಿಟ್ಟರ್‌ನಲ್ಲಿ #BiharRejectsModi ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.

ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಆಡಳಿತ ಮತ್ತು ಬಿಹಾರದ ನಿತಿಶ್‌ ಕುಮಾರ್ ಅವರ ಆಡಳಿತದ ವಿರುದ್ಧ ಅಲ್ಲಿನ ಜನ ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಗೀತ್‌ ವಿ ಎಂಬುವವರು ಟ್ವೀಟ್ ಮಾಡಿ, “ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ. #BiharrejectsModi” ಎಂದು ಬರೆದುಕೊಂಡು, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಪ್ರತಿನಿಧಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ವಸ್ಲಾಲಾ ಕುಮಾರಿ ಎಂಬುವವರು ಟ್ವೀಟ್ ಮಾಡಿ, “ರೈತರ ಆತ್ಮಹತ್ಯೆ, ನಿರುದ್ಯೋಗ, ಜಂಗಲ್ ರಾಜ್, ಸಾರ್ವಜನಿಕರ ಲೂಟಿ, ಕೋಮುದ್ವೇಷ, ಜುಮ್ಲಾ, ಭಾಷಾ ರಾಜಕೀಯ, ಹುಸಿ ರಾಷ್ಟ್ರೀಯತೆ, ಲಸಿಕೆ ರಾಜಕೀಯಗಳಿಗೆ ಸ್ಥಳವಿಲ್ಲ. ಬಿಹಾರ ಸಮೃದ್ಧಿಯಾಗಲಿದೆ. ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಗೆ ಮತದಾನ ನೀಡಿ” ಎಂದು ಬರೆದಿದ್ದು, ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಜಕೀಯ ತಂತ್ರಗಳನ್ನು ಚಿತ್ರಿಸಲಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ಎಂ.ಡಿ.ಒಬೇದುಲ್ಲಾ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಕೊರೊನಾ ರೋಗಿಗಳ ನಿರ್ವಹಣೆಯಲ್ಲಿ ಸರ್ಕಾರ ವ್ಯವಹರಿಸುವಿಕೆಯ ರೀತಿ ಇದಾಗಿದೆ. ಕೇಂದ್ರ ಸರ್ಕಾರ ಮತ್ತು ಬಿಹಾರ ರಾಜ್ಯ ಸರ್ಕಾರದ ವಿಫಲತೆಯಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. #BiharrejectsModi” ಎಂದು ಬರೆದುಕೊಂಡಿದ್ದಾರೆ.

ಕಳೆದ 15 ವರ್ಷಗಳಿಂದಲೂ ಬಿಹಾರ ರಾಜ್ಯವು ನಿತೀಶ್ ಕುಮಾರ್ ಆಡಳಿತದಲ್ಲಿಯೇ ಇದೆ. ಆದರೂ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂಬುದಾಗಿ ವಿರೋಧ ಪಕ್ಷಗಳೂ ಸೇರಿದಂತೆ ಹಲವರು ಆರೋಪಿಸಿದ್ದಾರೆ. ಅದೂ ಅಲ್ಲದೇ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದರ ವಿರುದ್ಧವೂ ಈಗ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ರಾಜಕೀಯ ವಲಯದಲ್ಲಿ ತೇಜಸ್ವಿ ಯಾದವ್, ಚಿರಾಗ್ ಪಾಸ್ವಾನ್ ಮತ್ತು ನಿತೀಶ್ ಕುಮಾರ್‌ ನಡುವೆ ಮಹಾ ಪೈಪೋಟಿ ನಡೆಯುತ್ತಿದೆ. ಎನ್‌ಡಿಎ ಮೈತ್ರಿಯಲ್ಲಿ ಬಿಜೆಪಿ, ‌ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳಿದ್ದವು. ಆದರೆ ನಿತೀಶ್ ಕುಮಾರ್‌ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಚಿರಾಗ್‌ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಇದು ಬಿಜೆಪಿ ಮತ್ತು ನಿತೀಶ್ ಕುಮಾರ್‌ಗೆ ಹಿನ್ನಡೆಯನ್ನುಂಟುಮಾಡಿದೆ. ಇನ್ನು ತೇಜಸ್ವಿಯವರ ಆರ್‌ಜೆಡಿ ಮತ್ತು ಎಲ್ಲಾ ಎಡ ಪಕ್ಷಗಳೂ ಸೇರಿ ಮಹಾಘಟಬಂಂಧನ್ ರಚಿಸಿಕೊಂಡಿವೆ. ರಾಜ್ಯದಲ್ಲಿ ಇದಕ್ಕೆ ಉತ್ತಮ ಬೆಂಬಲವಿದೆ ಎನ್ನಲಾಗಿದೆ.

ಇದರ ನಡುವೆ ಎನ್‌ಡಿಎ ಮೈತ್ರಿಕೂಟದ ಪ್ರನಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆಯ ವಿಷಯವನ್ನು ಪ್ರಸ್ತಾಪಿಸಿ ನಗೆಪಾಟಲಿಗೀಡಾಗಿದ್ದರು. ಜೊತೆಗೆ ಕೇಂದ್ರದಲ್ಲಿ ಬಿಜೆಪಿಯ ವೈಫಲ್ಯತೆ, ಆರ್ಥಿಕ ಕುಸಿತ, ಕೊರೊನಾ ನಿರ್ವಹಣೆ, ಸಿಎಎ, ಎನ್‌ಆರ್‌ಸಿ ಮುಂತಾದ ಎಲ್ಲಾ ಅಂಶಗಳೂ ಬಿಜೆಪಿಯ ವಿರುದ್ಧವಾಗಿದೆ. ಜೊತೆಗೆ ತೇಜಸ್ವಿ ಯಾದವ್ ತಮ್ಮ ರ್ಯಾಲಿಗಳಲ್ಲಿ ನಿತೀಶ್ ಮತ್ತು ಮೋದಿಯ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸುತ್ತಿದ್ದು ಉತ್ತಮ ಬೆಂಬಲ ಪಡೆಯುತ್ತಿದ್ದಾರೆ.

ಒಟ್ಟಾರೆಯಾಗಿ ಬಿಹಾರದ ಜನತೆ ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ನವೆಂಬರ್ 10 ರವರೆಗೆ ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...