HomeUncategorizedಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, 2ನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಿನ್ನೆ ಮುಕ್ತಾಯವಾಗಿದೆ. ಇದರ ನಡುವೆಯೇ ಟ್ವಿಟ್ಟರ್‌ನಲ್ಲಿ #BiharRejectsModi ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.

ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಆಡಳಿತ ಮತ್ತು ಬಿಹಾರದ ನಿತಿಶ್‌ ಕುಮಾರ್ ಅವರ ಆಡಳಿತದ ವಿರುದ್ಧ ಅಲ್ಲಿನ ಜನ ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಗೀತ್‌ ವಿ ಎಂಬುವವರು ಟ್ವೀಟ್ ಮಾಡಿ, “ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ. #BiharrejectsModi” ಎಂದು ಬರೆದುಕೊಂಡು, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಪ್ರತಿನಿಧಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ವಸ್ಲಾಲಾ ಕುಮಾರಿ ಎಂಬುವವರು ಟ್ವೀಟ್ ಮಾಡಿ, “ರೈತರ ಆತ್ಮಹತ್ಯೆ, ನಿರುದ್ಯೋಗ, ಜಂಗಲ್ ರಾಜ್, ಸಾರ್ವಜನಿಕರ ಲೂಟಿ, ಕೋಮುದ್ವೇಷ, ಜುಮ್ಲಾ, ಭಾಷಾ ರಾಜಕೀಯ, ಹುಸಿ ರಾಷ್ಟ್ರೀಯತೆ, ಲಸಿಕೆ ರಾಜಕೀಯಗಳಿಗೆ ಸ್ಥಳವಿಲ್ಲ. ಬಿಹಾರ ಸಮೃದ್ಧಿಯಾಗಲಿದೆ. ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಗೆ ಮತದಾನ ನೀಡಿ” ಎಂದು ಬರೆದಿದ್ದು, ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಜಕೀಯ ತಂತ್ರಗಳನ್ನು ಚಿತ್ರಿಸಲಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ಎಂ.ಡಿ.ಒಬೇದುಲ್ಲಾ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಕೊರೊನಾ ರೋಗಿಗಳ ನಿರ್ವಹಣೆಯಲ್ಲಿ ಸರ್ಕಾರ ವ್ಯವಹರಿಸುವಿಕೆಯ ರೀತಿ ಇದಾಗಿದೆ. ಕೇಂದ್ರ ಸರ್ಕಾರ ಮತ್ತು ಬಿಹಾರ ರಾಜ್ಯ ಸರ್ಕಾರದ ವಿಫಲತೆಯಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. #BiharrejectsModi” ಎಂದು ಬರೆದುಕೊಂಡಿದ್ದಾರೆ.

ಕಳೆದ 15 ವರ್ಷಗಳಿಂದಲೂ ಬಿಹಾರ ರಾಜ್ಯವು ನಿತೀಶ್ ಕುಮಾರ್ ಆಡಳಿತದಲ್ಲಿಯೇ ಇದೆ. ಆದರೂ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂಬುದಾಗಿ ವಿರೋಧ ಪಕ್ಷಗಳೂ ಸೇರಿದಂತೆ ಹಲವರು ಆರೋಪಿಸಿದ್ದಾರೆ. ಅದೂ ಅಲ್ಲದೇ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದರ ವಿರುದ್ಧವೂ ಈಗ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ರಾಜಕೀಯ ವಲಯದಲ್ಲಿ ತೇಜಸ್ವಿ ಯಾದವ್, ಚಿರಾಗ್ ಪಾಸ್ವಾನ್ ಮತ್ತು ನಿತೀಶ್ ಕುಮಾರ್‌ ನಡುವೆ ಮಹಾ ಪೈಪೋಟಿ ನಡೆಯುತ್ತಿದೆ. ಎನ್‌ಡಿಎ ಮೈತ್ರಿಯಲ್ಲಿ ಬಿಜೆಪಿ, ‌ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳಿದ್ದವು. ಆದರೆ ನಿತೀಶ್ ಕುಮಾರ್‌ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಚಿರಾಗ್‌ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಇದು ಬಿಜೆಪಿ ಮತ್ತು ನಿತೀಶ್ ಕುಮಾರ್‌ಗೆ ಹಿನ್ನಡೆಯನ್ನುಂಟುಮಾಡಿದೆ. ಇನ್ನು ತೇಜಸ್ವಿಯವರ ಆರ್‌ಜೆಡಿ ಮತ್ತು ಎಲ್ಲಾ ಎಡ ಪಕ್ಷಗಳೂ ಸೇರಿ ಮಹಾಘಟಬಂಂಧನ್ ರಚಿಸಿಕೊಂಡಿವೆ. ರಾಜ್ಯದಲ್ಲಿ ಇದಕ್ಕೆ ಉತ್ತಮ ಬೆಂಬಲವಿದೆ ಎನ್ನಲಾಗಿದೆ.

ಇದರ ನಡುವೆ ಎನ್‌ಡಿಎ ಮೈತ್ರಿಕೂಟದ ಪ್ರನಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆಯ ವಿಷಯವನ್ನು ಪ್ರಸ್ತಾಪಿಸಿ ನಗೆಪಾಟಲಿಗೀಡಾಗಿದ್ದರು. ಜೊತೆಗೆ ಕೇಂದ್ರದಲ್ಲಿ ಬಿಜೆಪಿಯ ವೈಫಲ್ಯತೆ, ಆರ್ಥಿಕ ಕುಸಿತ, ಕೊರೊನಾ ನಿರ್ವಹಣೆ, ಸಿಎಎ, ಎನ್‌ಆರ್‌ಸಿ ಮುಂತಾದ ಎಲ್ಲಾ ಅಂಶಗಳೂ ಬಿಜೆಪಿಯ ವಿರುದ್ಧವಾಗಿದೆ. ಜೊತೆಗೆ ತೇಜಸ್ವಿ ಯಾದವ್ ತಮ್ಮ ರ್ಯಾಲಿಗಳಲ್ಲಿ ನಿತೀಶ್ ಮತ್ತು ಮೋದಿಯ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸುತ್ತಿದ್ದು ಉತ್ತಮ ಬೆಂಬಲ ಪಡೆಯುತ್ತಿದ್ದಾರೆ.

ಒಟ್ಟಾರೆಯಾಗಿ ಬಿಹಾರದ ಜನತೆ ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ನವೆಂಬರ್ 10 ರವರೆಗೆ ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...