Homeಮುಖಪುಟಬಿಹಾರ ಚುನಾವಣೆ ಹಿನ್ನಲೆ | ರಾಜೀನಾಮೆ ನೀಡುವುದಾಗಿ ಬೆದರಿಸಿದ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ!

ಬಿಹಾರ ಚುನಾವಣೆ ಹಿನ್ನಲೆ | ರಾಜೀನಾಮೆ ನೀಡುವುದಾಗಿ ಬೆದರಿಸಿದ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ!

- Advertisement -
- Advertisement -

ತಮ್ಮ ಪಕ್ಷದೊಂದಿಗೆ ನ್ಯಾಯಯುತ ಒಪ್ಪಂದ ನಡೆಯದ ಕಾರಣ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ತಮ್ಮ ಸಚಿವ ಸ್ಥಾನ ಬಿಟ್ಟುಕೊಡುವುದಾಗಿ ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಸಂಸ್ಥಾಪಕ ಜಿತನ್ ರಾಮ್ ಮಾಂಝಿ ಬೆದರಿಕೆ ಹಾಕಿದ್ದು, ಬಿಹಾರದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆ ಹೆಚ್ಚಾಗಿದೆ. ಬಿಹಾರ ಚುನಾವಣೆ ಹಿನ್ನಲೆ

ಮಂಗಳವಾರ ಮುಂಗೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಂಝಿ ಈ ಹೇಳಿಕೆ ನೀಡಿದ್ದಾರೆ. ಎನ್‌ಡಿಎಯಿಂದ ಎಚ್‌ಎಎಂ ನಿರ್ಲಕ್ಷ್ಯಕ್ಕೊಳಗಾಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿ ಮತ್ತು ಜಾರ್ಖಂಡ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಒಂದೇ ಒಂದು ಸ್ಥಾನ ನೀಡದ ಎನ್‌ಡಿಎ ಮೈತ್ರಿಯ ನಡೆಯನ್ನು ಅವರು ಉಲ್ಲೇಖಿಸಿದ್ದಾರೆ. ಬಿಹಾರ ಚುನಾವಣೆ ಹಿನ್ನಲೆ

‘ಭಯ ಗೌರವವನ್ನು ಹುಟ್ಟುಹಾಕುತ್ತದೆ’ ಎಂಬ ರಾಮಚರಿತಮಾನಸ ಪದ್ಯವನ್ನು ಉಲ್ಲೇಖಿಸಿದ ಅವರು, ಬಿಹಾರದಲ್ಲಿ ತಮ್ಮ ಮೌಲ್ಯವನ್ನು ಸಾಬೀತುಪಡಿಸಬೇಕಾಗುತ್ತದೆ ಎಂದು ಹೇಳಿದ್ದು. “ನಾನು ಸಂಪುಟಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಜಿತನ್ ರಾಮ್ ಮಾಂಝಿ ಅವರನ್ನು ಕೆಲವು ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ ಎಂದು ಎಚ್‌ಎಎಂ ವಕ್ತಾರ ಡ್ಯಾನಿಶ್ ರಿಜ್ವಾನ್ ಸ್ಪಷ್ಟಪಡಿಸಿದ್ದಾರೆ. “ಅವರು ಹಾಗೆ ಹೇಳಲು ಉದ್ದೇಶಿಸಿರಲಿಲ್ಲ. ನಿಗದಿತ ಕೇಂದ್ರ ಸಚಿವ ಸಂಪುಟ ಸಭೆಯಿಂದಾಗಿ ತಾನು ತಡವಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ” ಎಂದು ರಿಜ್ವಾನ್ ವಿವರಿಸಿದ್ದಾರೆ.

ಇದಕ್ಕೂ ಮೊದಲು, ಮಾಂಝಿ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ರಾಜ್ಯದ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. “ನಮ್ಮ ಕಾರ್ಯಕರ್ತರು ವಿಧಾನಸಭಾ ಚುನಾವಣೆಯಲ್ಲಿ 40 ಸ್ಥಾನಗಳಿಗೆ ಸ್ಪರ್ಧಿಸಲು ಕೇಳುತ್ತಿದ್ದಾರೆ ಆದರೆ ನಾವು ಕನಿಷ್ಠ 20 ಸ್ಥಾನಗಳಿಗೆ ಸ್ಪರ್ಧಿಸಬೇಕೆಂದು ನಾವು ಭಾವಿಸುತ್ತೇವೆ” ಎಂದು ಮಾಂಝಿ ಹೇಳಿದ್ದರು.

ಅಕ್ಟೋಬರ್-ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಮಾಂಝಿ ಅವರ ಹೇಳಿಕೆಯಿಂದ ಗರಿಷ್ಠ ರಾಜಕೀಯ ಲಾಭ ಪಡೆಯಲು ವಿಪಕ್ಷಗಳ ಮಹಾಮೈತ್ರಿಕೂಟವು ಎಲ್ಲಾ ರೀತಿಯಲ್ಲೂ ಆಡಳಿತರೂಢ ಮೈತ್ರಿಯ ವಿರುದ್ಧ ವಾಗ್ದಾಳಿ ನಡೆಸಲು ಪ್ರಾರಂಭಿಸಿತು.

ಮಾಂಝಿ ಅವರ ಎಚ್‌ಎಎಂ ಕಠಿಣ ಚೌಕಾಸಿ ನಡೆಸುವವರು ಎಂದೆ ಬಣ್ಣಿಸಲಾಗುತ್ತದೆ. ಬಿಹಾರದಲ್ಲಿ ತಮ್ಮ ಪಕ್ಷದ ಬಲವನ್ನು ಪ್ರದರ್ಶಿಸುವ ಯೋಜನೆಯನ್ನು ಮಾಂಝಿ ಘೋಷಿಸಿದ್ದು, ಫೆಬ್ರವರಿ 28 ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ನಿಗದಿಪಡಿಸಲಾಗಿದೆ. “ನಮ್ಮನ್ನು ಕಡಿಮೆ ಅಂದಾಜು ಮಾಡಬೇಡಿ, ನಾವು ನಮ್ಮ ಬಲವನ್ನು ತೋರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಮಾಂಝಿ ಅವರ ಪಾತ್ರವನ್ನು ಉಲ್ಲೇಖಿಸಿ, ಎನ್‌ಡಿಎ ಮೈತ್ರಿಯ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದಾರೆ ಎಂದು ಜೆಡಿ (ಯು) ಎಂಎಲ್‌ಸಿ ನೀರಜ್ ಕುಮಾರ್ ಹೇಳಿದ್ದಾರೆ. ಬಿಹಾರದಲ್ಲಿ ಎನ್‌ಡಿಎ ನಾಯಕರು ಜಂಟಿ ಸಮ್ಮೇಳನಗಳನ್ನು ನಡೆಸುತ್ತಿದ್ದಾರೆ, ಎನ್‌ಡಿಎ ಎಲ್ಲಾ ವಿಷಯಗಳ ಬಗ್ಗೆ ಪ್ರಬಲವಾಗಿದೆ ಎಂದು ಒತ್ತಿ ಹೇಳಿದ್ದಾರೆ. ಆದರೆ ವಿಪಕ್ಷಗಳ ಮಹಾಮೈತ್ರಿಕೂಟದ ನಾಯಕರು ಎನ್‌ಡಿಎ ಮೈತ್ರಿಯೊಳಗಿನ ಸಮಸ್ಯೆಗಳ ಬಗ್ಗೆ “ಹಗಲುಗನಸು” ಕಾಣುತ್ತಲೆ ಇರಲಿ ಎಂದು ಅವರು ಹೇಳಿದ್ದಾರೆ

ಹಿರಿಯ ಬಿಜೆಪಿ ನಾಯಕ ಮತ್ತು ರಾಜ್ಯ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಬಿಹಾರದಲ್ಲಿ ಎನ್‌ಡಿಎ ಒಗ್ಗಟ್ಟಾಗಿದ್ದು, ಎಲ್ಲಾ ಪಕ್ಷಗಳನ್ನು ಗೌರವಿಸಲಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ. “NDA ನಾಯಕರು ಒಟ್ಟಿಗೆ ಕುಳಿತು ಒಮ್ಮತದ ಮೂಲಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

ಮಹಾಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಸುಗಮವಾಗಿ ನಡೆಯುವುದಿಲ್ಲ ಎಂದು ಗ್ರಹಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ವಿರೋಧ ಪಕ್ಷದ ಇಂಡಿಯಾ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಉದ್ದೇಶಿಸಲಾಗಿದೆ ಎಂದು ಹೇಳುವ ಹಂತಕ್ಕೂ ಹೋಗಿದ್ದರು. ಅದಕ್ಕೂ ಮೊದಲು, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಕೂಡ ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇಂಡಿಯಾ ಮೈತ್ರಿಯನ್ನು ಮುನ್ನಡೆಸಲು ಅವಕಾಶ ನೀಡಬೇಕು ಎಂದು ಹೇಳಿದ್ದರು.

ಅವರ ಹೇಳಿಕೆಯನ್ನು ಕಾಂಗ್ರೆಸ್‌ಗೆ ಬಲವಾದ ಸಂದೇಶ ನೀಡುವ ಪ್ರಯತ್ನ ಎಂದು ಬಣ್ಣಿಸಲಾಯಿತು ಎಂದು ಹೇಳಲಾಗಿದೆ. ಅದಾಗ್ಯೂ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕರಾದ ಲಾಲು-ತೇಜಸ್ವಿ ನಡುವೆ ರಾಜ್ಯ ರಾಜಧಾನಿಯಲ್ಲಿ ನಡೆದ ಈ ಹಿಂದಿನ ಭೇಟಿಯ ಸಮಯದಲ್ಲಿ ಒಳ್ಳೆಯ ಬಾಂಧವ್ಯ ಕಂಡುಬಂದರೂ, ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆಯ ಕುರಿತು ಚರ್ಚಿಸಲು ಅವರ ಮೈತ್ರಿ ಇರಲಿದೆಯೆ ಎಂಬುದು ಸಂದೇಹ ಏರ್ಪಟ್ಟಿದೆ.

2020 ರ ಚುನಾವಣೆಯಲ್ಲಿ, ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿತು ಆದರೆ ಕೇವಲ 19 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಮತ್ತೊಂದೆಡೆ, ಸಿಪಿಐ (ಎಂಎಲ್) ಸ್ಪರ್ಧಿಸಿದ 19 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂಓದಿ:  ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...