Homeಮುಖಪುಟಬಿಹಾರ ಚುನಾವಣೆ ಹಿನ್ನಲೆ | ರಾಜೀನಾಮೆ ನೀಡುವುದಾಗಿ ಬೆದರಿಸಿದ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ!

ಬಿಹಾರ ಚುನಾವಣೆ ಹಿನ್ನಲೆ | ರಾಜೀನಾಮೆ ನೀಡುವುದಾಗಿ ಬೆದರಿಸಿದ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ!

- Advertisement -
- Advertisement -

ತಮ್ಮ ಪಕ್ಷದೊಂದಿಗೆ ನ್ಯಾಯಯುತ ಒಪ್ಪಂದ ನಡೆಯದ ಕಾರಣ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ತಮ್ಮ ಸಚಿವ ಸ್ಥಾನ ಬಿಟ್ಟುಕೊಡುವುದಾಗಿ ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಸಂಸ್ಥಾಪಕ ಜಿತನ್ ರಾಮ್ ಮಾಂಝಿ ಬೆದರಿಕೆ ಹಾಕಿದ್ದು, ಬಿಹಾರದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆ ಹೆಚ್ಚಾಗಿದೆ. ಬಿಹಾರ ಚುನಾವಣೆ ಹಿನ್ನಲೆ

ಮಂಗಳವಾರ ಮುಂಗೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಂಝಿ ಈ ಹೇಳಿಕೆ ನೀಡಿದ್ದಾರೆ. ಎನ್‌ಡಿಎಯಿಂದ ಎಚ್‌ಎಎಂ ನಿರ್ಲಕ್ಷ್ಯಕ್ಕೊಳಗಾಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿ ಮತ್ತು ಜಾರ್ಖಂಡ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಒಂದೇ ಒಂದು ಸ್ಥಾನ ನೀಡದ ಎನ್‌ಡಿಎ ಮೈತ್ರಿಯ ನಡೆಯನ್ನು ಅವರು ಉಲ್ಲೇಖಿಸಿದ್ದಾರೆ. ಬಿಹಾರ ಚುನಾವಣೆ ಹಿನ್ನಲೆ

‘ಭಯ ಗೌರವವನ್ನು ಹುಟ್ಟುಹಾಕುತ್ತದೆ’ ಎಂಬ ರಾಮಚರಿತಮಾನಸ ಪದ್ಯವನ್ನು ಉಲ್ಲೇಖಿಸಿದ ಅವರು, ಬಿಹಾರದಲ್ಲಿ ತಮ್ಮ ಮೌಲ್ಯವನ್ನು ಸಾಬೀತುಪಡಿಸಬೇಕಾಗುತ್ತದೆ ಎಂದು ಹೇಳಿದ್ದು. “ನಾನು ಸಂಪುಟಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಜಿತನ್ ರಾಮ್ ಮಾಂಝಿ ಅವರನ್ನು ಕೆಲವು ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ ಎಂದು ಎಚ್‌ಎಎಂ ವಕ್ತಾರ ಡ್ಯಾನಿಶ್ ರಿಜ್ವಾನ್ ಸ್ಪಷ್ಟಪಡಿಸಿದ್ದಾರೆ. “ಅವರು ಹಾಗೆ ಹೇಳಲು ಉದ್ದೇಶಿಸಿರಲಿಲ್ಲ. ನಿಗದಿತ ಕೇಂದ್ರ ಸಚಿವ ಸಂಪುಟ ಸಭೆಯಿಂದಾಗಿ ತಾನು ತಡವಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ” ಎಂದು ರಿಜ್ವಾನ್ ವಿವರಿಸಿದ್ದಾರೆ.

ಇದಕ್ಕೂ ಮೊದಲು, ಮಾಂಝಿ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ರಾಜ್ಯದ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. “ನಮ್ಮ ಕಾರ್ಯಕರ್ತರು ವಿಧಾನಸಭಾ ಚುನಾವಣೆಯಲ್ಲಿ 40 ಸ್ಥಾನಗಳಿಗೆ ಸ್ಪರ್ಧಿಸಲು ಕೇಳುತ್ತಿದ್ದಾರೆ ಆದರೆ ನಾವು ಕನಿಷ್ಠ 20 ಸ್ಥಾನಗಳಿಗೆ ಸ್ಪರ್ಧಿಸಬೇಕೆಂದು ನಾವು ಭಾವಿಸುತ್ತೇವೆ” ಎಂದು ಮಾಂಝಿ ಹೇಳಿದ್ದರು.

ಅಕ್ಟೋಬರ್-ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಮಾಂಝಿ ಅವರ ಹೇಳಿಕೆಯಿಂದ ಗರಿಷ್ಠ ರಾಜಕೀಯ ಲಾಭ ಪಡೆಯಲು ವಿಪಕ್ಷಗಳ ಮಹಾಮೈತ್ರಿಕೂಟವು ಎಲ್ಲಾ ರೀತಿಯಲ್ಲೂ ಆಡಳಿತರೂಢ ಮೈತ್ರಿಯ ವಿರುದ್ಧ ವಾಗ್ದಾಳಿ ನಡೆಸಲು ಪ್ರಾರಂಭಿಸಿತು.

ಮಾಂಝಿ ಅವರ ಎಚ್‌ಎಎಂ ಕಠಿಣ ಚೌಕಾಸಿ ನಡೆಸುವವರು ಎಂದೆ ಬಣ್ಣಿಸಲಾಗುತ್ತದೆ. ಬಿಹಾರದಲ್ಲಿ ತಮ್ಮ ಪಕ್ಷದ ಬಲವನ್ನು ಪ್ರದರ್ಶಿಸುವ ಯೋಜನೆಯನ್ನು ಮಾಂಝಿ ಘೋಷಿಸಿದ್ದು, ಫೆಬ್ರವರಿ 28 ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ನಿಗದಿಪಡಿಸಲಾಗಿದೆ. “ನಮ್ಮನ್ನು ಕಡಿಮೆ ಅಂದಾಜು ಮಾಡಬೇಡಿ, ನಾವು ನಮ್ಮ ಬಲವನ್ನು ತೋರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಮಾಂಝಿ ಅವರ ಪಾತ್ರವನ್ನು ಉಲ್ಲೇಖಿಸಿ, ಎನ್‌ಡಿಎ ಮೈತ್ರಿಯ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದಾರೆ ಎಂದು ಜೆಡಿ (ಯು) ಎಂಎಲ್‌ಸಿ ನೀರಜ್ ಕುಮಾರ್ ಹೇಳಿದ್ದಾರೆ. ಬಿಹಾರದಲ್ಲಿ ಎನ್‌ಡಿಎ ನಾಯಕರು ಜಂಟಿ ಸಮ್ಮೇಳನಗಳನ್ನು ನಡೆಸುತ್ತಿದ್ದಾರೆ, ಎನ್‌ಡಿಎ ಎಲ್ಲಾ ವಿಷಯಗಳ ಬಗ್ಗೆ ಪ್ರಬಲವಾಗಿದೆ ಎಂದು ಒತ್ತಿ ಹೇಳಿದ್ದಾರೆ. ಆದರೆ ವಿಪಕ್ಷಗಳ ಮಹಾಮೈತ್ರಿಕೂಟದ ನಾಯಕರು ಎನ್‌ಡಿಎ ಮೈತ್ರಿಯೊಳಗಿನ ಸಮಸ್ಯೆಗಳ ಬಗ್ಗೆ “ಹಗಲುಗನಸು” ಕಾಣುತ್ತಲೆ ಇರಲಿ ಎಂದು ಅವರು ಹೇಳಿದ್ದಾರೆ

ಹಿರಿಯ ಬಿಜೆಪಿ ನಾಯಕ ಮತ್ತು ರಾಜ್ಯ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಬಿಹಾರದಲ್ಲಿ ಎನ್‌ಡಿಎ ಒಗ್ಗಟ್ಟಾಗಿದ್ದು, ಎಲ್ಲಾ ಪಕ್ಷಗಳನ್ನು ಗೌರವಿಸಲಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ. “NDA ನಾಯಕರು ಒಟ್ಟಿಗೆ ಕುಳಿತು ಒಮ್ಮತದ ಮೂಲಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

ಮಹಾಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಸುಗಮವಾಗಿ ನಡೆಯುವುದಿಲ್ಲ ಎಂದು ಗ್ರಹಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ವಿರೋಧ ಪಕ್ಷದ ಇಂಡಿಯಾ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಉದ್ದೇಶಿಸಲಾಗಿದೆ ಎಂದು ಹೇಳುವ ಹಂತಕ್ಕೂ ಹೋಗಿದ್ದರು. ಅದಕ್ಕೂ ಮೊದಲು, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಕೂಡ ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇಂಡಿಯಾ ಮೈತ್ರಿಯನ್ನು ಮುನ್ನಡೆಸಲು ಅವಕಾಶ ನೀಡಬೇಕು ಎಂದು ಹೇಳಿದ್ದರು.

ಅವರ ಹೇಳಿಕೆಯನ್ನು ಕಾಂಗ್ರೆಸ್‌ಗೆ ಬಲವಾದ ಸಂದೇಶ ನೀಡುವ ಪ್ರಯತ್ನ ಎಂದು ಬಣ್ಣಿಸಲಾಯಿತು ಎಂದು ಹೇಳಲಾಗಿದೆ. ಅದಾಗ್ಯೂ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕರಾದ ಲಾಲು-ತೇಜಸ್ವಿ ನಡುವೆ ರಾಜ್ಯ ರಾಜಧಾನಿಯಲ್ಲಿ ನಡೆದ ಈ ಹಿಂದಿನ ಭೇಟಿಯ ಸಮಯದಲ್ಲಿ ಒಳ್ಳೆಯ ಬಾಂಧವ್ಯ ಕಂಡುಬಂದರೂ, ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆಯ ಕುರಿತು ಚರ್ಚಿಸಲು ಅವರ ಮೈತ್ರಿ ಇರಲಿದೆಯೆ ಎಂಬುದು ಸಂದೇಹ ಏರ್ಪಟ್ಟಿದೆ.

2020 ರ ಚುನಾವಣೆಯಲ್ಲಿ, ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿತು ಆದರೆ ಕೇವಲ 19 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಮತ್ತೊಂದೆಡೆ, ಸಿಪಿಐ (ಎಂಎಲ್) ಸ್ಪರ್ಧಿಸಿದ 19 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂಓದಿ:  ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...