Homeಮುಖಪುಟಬಿಹಾರ ಚುನಾವಣೆ ಹಿನ್ನಲೆ | ರಾಜೀನಾಮೆ ನೀಡುವುದಾಗಿ ಬೆದರಿಸಿದ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ!

ಬಿಹಾರ ಚುನಾವಣೆ ಹಿನ್ನಲೆ | ರಾಜೀನಾಮೆ ನೀಡುವುದಾಗಿ ಬೆದರಿಸಿದ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ!

- Advertisement -
- Advertisement -

ತಮ್ಮ ಪಕ್ಷದೊಂದಿಗೆ ನ್ಯಾಯಯುತ ಒಪ್ಪಂದ ನಡೆಯದ ಕಾರಣ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ತಮ್ಮ ಸಚಿವ ಸ್ಥಾನ ಬಿಟ್ಟುಕೊಡುವುದಾಗಿ ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಸಂಸ್ಥಾಪಕ ಜಿತನ್ ರಾಮ್ ಮಾಂಝಿ ಬೆದರಿಕೆ ಹಾಕಿದ್ದು, ಬಿಹಾರದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆ ಹೆಚ್ಚಾಗಿದೆ. ಬಿಹಾರ ಚುನಾವಣೆ ಹಿನ್ನಲೆ

ಮಂಗಳವಾರ ಮುಂಗೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಂಝಿ ಈ ಹೇಳಿಕೆ ನೀಡಿದ್ದಾರೆ. ಎನ್‌ಡಿಎಯಿಂದ ಎಚ್‌ಎಎಂ ನಿರ್ಲಕ್ಷ್ಯಕ್ಕೊಳಗಾಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿ ಮತ್ತು ಜಾರ್ಖಂಡ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಒಂದೇ ಒಂದು ಸ್ಥಾನ ನೀಡದ ಎನ್‌ಡಿಎ ಮೈತ್ರಿಯ ನಡೆಯನ್ನು ಅವರು ಉಲ್ಲೇಖಿಸಿದ್ದಾರೆ. ಬಿಹಾರ ಚುನಾವಣೆ ಹಿನ್ನಲೆ

‘ಭಯ ಗೌರವವನ್ನು ಹುಟ್ಟುಹಾಕುತ್ತದೆ’ ಎಂಬ ರಾಮಚರಿತಮಾನಸ ಪದ್ಯವನ್ನು ಉಲ್ಲೇಖಿಸಿದ ಅವರು, ಬಿಹಾರದಲ್ಲಿ ತಮ್ಮ ಮೌಲ್ಯವನ್ನು ಸಾಬೀತುಪಡಿಸಬೇಕಾಗುತ್ತದೆ ಎಂದು ಹೇಳಿದ್ದು. “ನಾನು ಸಂಪುಟಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಜಿತನ್ ರಾಮ್ ಮಾಂಝಿ ಅವರನ್ನು ಕೆಲವು ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ ಎಂದು ಎಚ್‌ಎಎಂ ವಕ್ತಾರ ಡ್ಯಾನಿಶ್ ರಿಜ್ವಾನ್ ಸ್ಪಷ್ಟಪಡಿಸಿದ್ದಾರೆ. “ಅವರು ಹಾಗೆ ಹೇಳಲು ಉದ್ದೇಶಿಸಿರಲಿಲ್ಲ. ನಿಗದಿತ ಕೇಂದ್ರ ಸಚಿವ ಸಂಪುಟ ಸಭೆಯಿಂದಾಗಿ ತಾನು ತಡವಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ” ಎಂದು ರಿಜ್ವಾನ್ ವಿವರಿಸಿದ್ದಾರೆ.

ಇದಕ್ಕೂ ಮೊದಲು, ಮಾಂಝಿ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ರಾಜ್ಯದ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. “ನಮ್ಮ ಕಾರ್ಯಕರ್ತರು ವಿಧಾನಸಭಾ ಚುನಾವಣೆಯಲ್ಲಿ 40 ಸ್ಥಾನಗಳಿಗೆ ಸ್ಪರ್ಧಿಸಲು ಕೇಳುತ್ತಿದ್ದಾರೆ ಆದರೆ ನಾವು ಕನಿಷ್ಠ 20 ಸ್ಥಾನಗಳಿಗೆ ಸ್ಪರ್ಧಿಸಬೇಕೆಂದು ನಾವು ಭಾವಿಸುತ್ತೇವೆ” ಎಂದು ಮಾಂಝಿ ಹೇಳಿದ್ದರು.

ಅಕ್ಟೋಬರ್-ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಮಾಂಝಿ ಅವರ ಹೇಳಿಕೆಯಿಂದ ಗರಿಷ್ಠ ರಾಜಕೀಯ ಲಾಭ ಪಡೆಯಲು ವಿಪಕ್ಷಗಳ ಮಹಾಮೈತ್ರಿಕೂಟವು ಎಲ್ಲಾ ರೀತಿಯಲ್ಲೂ ಆಡಳಿತರೂಢ ಮೈತ್ರಿಯ ವಿರುದ್ಧ ವಾಗ್ದಾಳಿ ನಡೆಸಲು ಪ್ರಾರಂಭಿಸಿತು.

ಮಾಂಝಿ ಅವರ ಎಚ್‌ಎಎಂ ಕಠಿಣ ಚೌಕಾಸಿ ನಡೆಸುವವರು ಎಂದೆ ಬಣ್ಣಿಸಲಾಗುತ್ತದೆ. ಬಿಹಾರದಲ್ಲಿ ತಮ್ಮ ಪಕ್ಷದ ಬಲವನ್ನು ಪ್ರದರ್ಶಿಸುವ ಯೋಜನೆಯನ್ನು ಮಾಂಝಿ ಘೋಷಿಸಿದ್ದು, ಫೆಬ್ರವರಿ 28 ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ನಿಗದಿಪಡಿಸಲಾಗಿದೆ. “ನಮ್ಮನ್ನು ಕಡಿಮೆ ಅಂದಾಜು ಮಾಡಬೇಡಿ, ನಾವು ನಮ್ಮ ಬಲವನ್ನು ತೋರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಮಾಂಝಿ ಅವರ ಪಾತ್ರವನ್ನು ಉಲ್ಲೇಖಿಸಿ, ಎನ್‌ಡಿಎ ಮೈತ್ರಿಯ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದಾರೆ ಎಂದು ಜೆಡಿ (ಯು) ಎಂಎಲ್‌ಸಿ ನೀರಜ್ ಕುಮಾರ್ ಹೇಳಿದ್ದಾರೆ. ಬಿಹಾರದಲ್ಲಿ ಎನ್‌ಡಿಎ ನಾಯಕರು ಜಂಟಿ ಸಮ್ಮೇಳನಗಳನ್ನು ನಡೆಸುತ್ತಿದ್ದಾರೆ, ಎನ್‌ಡಿಎ ಎಲ್ಲಾ ವಿಷಯಗಳ ಬಗ್ಗೆ ಪ್ರಬಲವಾಗಿದೆ ಎಂದು ಒತ್ತಿ ಹೇಳಿದ್ದಾರೆ. ಆದರೆ ವಿಪಕ್ಷಗಳ ಮಹಾಮೈತ್ರಿಕೂಟದ ನಾಯಕರು ಎನ್‌ಡಿಎ ಮೈತ್ರಿಯೊಳಗಿನ ಸಮಸ್ಯೆಗಳ ಬಗ್ಗೆ “ಹಗಲುಗನಸು” ಕಾಣುತ್ತಲೆ ಇರಲಿ ಎಂದು ಅವರು ಹೇಳಿದ್ದಾರೆ

ಹಿರಿಯ ಬಿಜೆಪಿ ನಾಯಕ ಮತ್ತು ರಾಜ್ಯ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಬಿಹಾರದಲ್ಲಿ ಎನ್‌ಡಿಎ ಒಗ್ಗಟ್ಟಾಗಿದ್ದು, ಎಲ್ಲಾ ಪಕ್ಷಗಳನ್ನು ಗೌರವಿಸಲಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ. “NDA ನಾಯಕರು ಒಟ್ಟಿಗೆ ಕುಳಿತು ಒಮ್ಮತದ ಮೂಲಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

ಮಹಾಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಸುಗಮವಾಗಿ ನಡೆಯುವುದಿಲ್ಲ ಎಂದು ಗ್ರಹಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ವಿರೋಧ ಪಕ್ಷದ ಇಂಡಿಯಾ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಉದ್ದೇಶಿಸಲಾಗಿದೆ ಎಂದು ಹೇಳುವ ಹಂತಕ್ಕೂ ಹೋಗಿದ್ದರು. ಅದಕ್ಕೂ ಮೊದಲು, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಕೂಡ ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇಂಡಿಯಾ ಮೈತ್ರಿಯನ್ನು ಮುನ್ನಡೆಸಲು ಅವಕಾಶ ನೀಡಬೇಕು ಎಂದು ಹೇಳಿದ್ದರು.

ಅವರ ಹೇಳಿಕೆಯನ್ನು ಕಾಂಗ್ರೆಸ್‌ಗೆ ಬಲವಾದ ಸಂದೇಶ ನೀಡುವ ಪ್ರಯತ್ನ ಎಂದು ಬಣ್ಣಿಸಲಾಯಿತು ಎಂದು ಹೇಳಲಾಗಿದೆ. ಅದಾಗ್ಯೂ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕರಾದ ಲಾಲು-ತೇಜಸ್ವಿ ನಡುವೆ ರಾಜ್ಯ ರಾಜಧಾನಿಯಲ್ಲಿ ನಡೆದ ಈ ಹಿಂದಿನ ಭೇಟಿಯ ಸಮಯದಲ್ಲಿ ಒಳ್ಳೆಯ ಬಾಂಧವ್ಯ ಕಂಡುಬಂದರೂ, ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆಯ ಕುರಿತು ಚರ್ಚಿಸಲು ಅವರ ಮೈತ್ರಿ ಇರಲಿದೆಯೆ ಎಂಬುದು ಸಂದೇಹ ಏರ್ಪಟ್ಟಿದೆ.

2020 ರ ಚುನಾವಣೆಯಲ್ಲಿ, ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿತು ಆದರೆ ಕೇವಲ 19 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಮತ್ತೊಂದೆಡೆ, ಸಿಪಿಐ (ಎಂಎಲ್) ಸ್ಪರ್ಧಿಸಿದ 19 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂಓದಿ:  ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...