Homeಮುಖಪುಟಬಿಹಾರ ಚುನಾವಣೆ: ಬಿಜೆಪಿ - ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ಎನ್‌ಡಿಎ ಮೈತ್ರಿಯಲ್ಲಿದ್ದ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಜೆಪಿ) ದೊಂದಿಗೆ ಈ ಬಾರಿ ಮೈತ್ರಿ ಇಲ್ಲ ಎನ್ನಲಾಗಿದ್ದು, ಈ ಕಾರಣಕ್ಕಾಗಿ ಬಿಜೆಪಿ ಮತ್ತು ಜೆಡಿಯು ನಡುವಿನ ಸಭೆ ಮಹತ್ವ ಪಡೆದುಕೊಂಡಿದೆ.

- Advertisement -
- Advertisement -

ಬಿಹಾರ ಚುನಾವಣೆಗೆ ಅಖಾಡ ಸಿದ್ದವಾಗುತ್ತಿದ್ದು, ಎಲ್ಲಾ ಪಕ್ಷಗಳು ಅಧಿಕ ಸ್ಥಾನಗಳನ್ನು ಗಳಿಸುವ ಸಲುವಾಗಿ ಭರದ ಸಿದ್ಧತೆಯಲ್ಲಿ ತೊಡಗಿವೆ. ಈ ನಡುವೆ ಮೈತ್ರಿ ಪಕ್ಷಗಳಾದ ಜೆಡಿಯು ಮತ್ತು ಬಿಜೆಪಿ ನಡುವೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸುವ ಸಲುವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಇಂದು ಬಿಹಾರದ ಸಿಎಂ ನಿತೀಶ್ ಕುಮಾರ್ ಅವರನ್ನು ಅವರ ಪಾಟ್ನಾ ನಿವಾಸದಲ್ಲೇ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಸ್ಥಾನ ಹಂಚಿಕೆ ಕುರಿತು ಅನೌಪಚಾರಿಕ ಮಾತುಕತೆ ನಡೆಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿದ್ದು, ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭಿಯಾನ ನಡೆಸುವ ಜವಾಬ್ದಾರಿಯನ್ನು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರಿಗೆ ನೀಡಲಾಗಿದ್ದು, ಅವರೂ ಸಹ ಇಂದಿನ ಚರ್ಚೆಯಲ್ಲಿ ಭಾಗವಹಿಸಿದ್ದರು ಎನ್ನಲಾಗುತ್ತಿದೆ.

ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ಎನ್‌ಡಿಎ ಮೈತ್ರಿಯಲ್ಲಿದ್ದ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಜೆಪಿ) ದೊಂದಿಗೆ ಈ ಬಾರಿ ಮೈತ್ರಿ ಇಲ್ಲ ಎನ್ನಲಾಗಿದ್ದು, ಈ ಕಾರಣಕ್ಕಾಗಿ ಬಿಜೆಪಿ ಮತ್ತು ಜೆಡಿಯು ನಡುವಿನ ಸಭೆ ಮಹತ್ವ ಪಡೆದುಕೊಂಡಿದೆ. ಈ ಬಾರಿ ಬಿಜೆಪಿ ಮತ್ತು ಜೆಡಿಯು ಮಾತ್ರ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲಿರುವುದು ಬಹುತೇಕ ಖಚಿತವಾಗಿದೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗುವ ಕುರಿತು ಈ ಹಿಂದೆಯೇ ತನ್ನ ಅಭಿಪ್ರಾಯವನ್ನು ಚಿರಾಗ್ ಪಾಸ್ವಾನ್ ಸ್ಪಷ್ಟಪಡಿಸಿದ್ದರು. ಅವರು “ಎನ್‌ಡಿಎ ಜೊತೆಗಿನ ಮೈತ್ರಿಯ ಕುರಿತು ನನಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ, ನಿತೀಶ್ ಕುಮಾರ್ ಎನ್‌ಡಿಎ ನಾಯಕನಾಗಿ ಬಿಹಾರದಲ್ಲಿ ಗುರುತಿಸುವುದರಲ್ಲಿ ನಮಗೆ ಒಪ್ಪಿಗೆ ಇಲ್ಲ. ಬಿಜೆಪಿ ಪಕ್ಷದ ಬೇರೆ ಯಾವುದೇ ನಾಯಕ ಬೇಕಿದ್ದರೂ ಎನ್‌ಡಿಎ ಮುಖವಾಗಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಅಲ್ಲದೆ, ಬಿಹಾರದಲ್ಲಿ ಬಿಹಾರಿಗಳಿಗೆ ಮೊದಲ ಆದ್ಯತೆ ಎಂಬ ನಿಮ್ಮ ಸಿದ್ಧಾಂತ, ಅಭಿಯಾನದ ಕುರಿತು ತಮ್ಮ ನಿಲುವನ್ನು ಬಿಜೆಪಿ ಮೊದಲು ಸ್ಪಷ್ಟಪಡಿಸಲಿ” ಎಂದಿದ್ದರು.

ಕೊರೊನಾ ವೈರಸ್ ಅನ್ನು ನಿಯಂತ್ರಿಸುವಲ್ಲಿ ಮತ್ತು ಪ್ರವಾಹದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರ ಎಡವಿದೆ ಎಂದು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ ನಿರಂತರವಾಗಿ ಟೀಕಾಪ್ರಹಾರವನ್ನು ನಡೆಸುತ್ತಲೇ ಇದೆ.

ಈ ಎಲ್ಲಾ ಕಾರಣಗಿಂದ ಎಲ್‌ಜೆಪಿಯನ್ನು ಹೊರಗಿಟ್ಟು ಮೈತ್ರಿಗೆ ಎರಡೂ ಪಕ್ಷಗಳು ಮುಂದಾಗಿವೆ ಎನ್ನಲಾಗಿದೆ.


ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...