Homeಮುಖಪುಟಬಿಹಾರ ಚುನಾವಣೆ: ಬಿಜೆಪಿ - ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ಎನ್‌ಡಿಎ ಮೈತ್ರಿಯಲ್ಲಿದ್ದ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಜೆಪಿ) ದೊಂದಿಗೆ ಈ ಬಾರಿ ಮೈತ್ರಿ ಇಲ್ಲ ಎನ್ನಲಾಗಿದ್ದು, ಈ ಕಾರಣಕ್ಕಾಗಿ ಬಿಜೆಪಿ ಮತ್ತು ಜೆಡಿಯು ನಡುವಿನ ಸಭೆ ಮಹತ್ವ ಪಡೆದುಕೊಂಡಿದೆ.

- Advertisement -
- Advertisement -

ಬಿಹಾರ ಚುನಾವಣೆಗೆ ಅಖಾಡ ಸಿದ್ದವಾಗುತ್ತಿದ್ದು, ಎಲ್ಲಾ ಪಕ್ಷಗಳು ಅಧಿಕ ಸ್ಥಾನಗಳನ್ನು ಗಳಿಸುವ ಸಲುವಾಗಿ ಭರದ ಸಿದ್ಧತೆಯಲ್ಲಿ ತೊಡಗಿವೆ. ಈ ನಡುವೆ ಮೈತ್ರಿ ಪಕ್ಷಗಳಾದ ಜೆಡಿಯು ಮತ್ತು ಬಿಜೆಪಿ ನಡುವೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸುವ ಸಲುವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಇಂದು ಬಿಹಾರದ ಸಿಎಂ ನಿತೀಶ್ ಕುಮಾರ್ ಅವರನ್ನು ಅವರ ಪಾಟ್ನಾ ನಿವಾಸದಲ್ಲೇ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಸ್ಥಾನ ಹಂಚಿಕೆ ಕುರಿತು ಅನೌಪಚಾರಿಕ ಮಾತುಕತೆ ನಡೆಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿದ್ದು, ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭಿಯಾನ ನಡೆಸುವ ಜವಾಬ್ದಾರಿಯನ್ನು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರಿಗೆ ನೀಡಲಾಗಿದ್ದು, ಅವರೂ ಸಹ ಇಂದಿನ ಚರ್ಚೆಯಲ್ಲಿ ಭಾಗವಹಿಸಿದ್ದರು ಎನ್ನಲಾಗುತ್ತಿದೆ.

ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ಎನ್‌ಡಿಎ ಮೈತ್ರಿಯಲ್ಲಿದ್ದ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಜೆಪಿ) ದೊಂದಿಗೆ ಈ ಬಾರಿ ಮೈತ್ರಿ ಇಲ್ಲ ಎನ್ನಲಾಗಿದ್ದು, ಈ ಕಾರಣಕ್ಕಾಗಿ ಬಿಜೆಪಿ ಮತ್ತು ಜೆಡಿಯು ನಡುವಿನ ಸಭೆ ಮಹತ್ವ ಪಡೆದುಕೊಂಡಿದೆ. ಈ ಬಾರಿ ಬಿಜೆಪಿ ಮತ್ತು ಜೆಡಿಯು ಮಾತ್ರ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲಿರುವುದು ಬಹುತೇಕ ಖಚಿತವಾಗಿದೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗುವ ಕುರಿತು ಈ ಹಿಂದೆಯೇ ತನ್ನ ಅಭಿಪ್ರಾಯವನ್ನು ಚಿರಾಗ್ ಪಾಸ್ವಾನ್ ಸ್ಪಷ್ಟಪಡಿಸಿದ್ದರು. ಅವರು “ಎನ್‌ಡಿಎ ಜೊತೆಗಿನ ಮೈತ್ರಿಯ ಕುರಿತು ನನಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ, ನಿತೀಶ್ ಕುಮಾರ್ ಎನ್‌ಡಿಎ ನಾಯಕನಾಗಿ ಬಿಹಾರದಲ್ಲಿ ಗುರುತಿಸುವುದರಲ್ಲಿ ನಮಗೆ ಒಪ್ಪಿಗೆ ಇಲ್ಲ. ಬಿಜೆಪಿ ಪಕ್ಷದ ಬೇರೆ ಯಾವುದೇ ನಾಯಕ ಬೇಕಿದ್ದರೂ ಎನ್‌ಡಿಎ ಮುಖವಾಗಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಅಲ್ಲದೆ, ಬಿಹಾರದಲ್ಲಿ ಬಿಹಾರಿಗಳಿಗೆ ಮೊದಲ ಆದ್ಯತೆ ಎಂಬ ನಿಮ್ಮ ಸಿದ್ಧಾಂತ, ಅಭಿಯಾನದ ಕುರಿತು ತಮ್ಮ ನಿಲುವನ್ನು ಬಿಜೆಪಿ ಮೊದಲು ಸ್ಪಷ್ಟಪಡಿಸಲಿ” ಎಂದಿದ್ದರು.

ಕೊರೊನಾ ವೈರಸ್ ಅನ್ನು ನಿಯಂತ್ರಿಸುವಲ್ಲಿ ಮತ್ತು ಪ್ರವಾಹದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರ ಎಡವಿದೆ ಎಂದು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ ನಿರಂತರವಾಗಿ ಟೀಕಾಪ್ರಹಾರವನ್ನು ನಡೆಸುತ್ತಲೇ ಇದೆ.

ಈ ಎಲ್ಲಾ ಕಾರಣಗಿಂದ ಎಲ್‌ಜೆಪಿಯನ್ನು ಹೊರಗಿಟ್ಟು ಮೈತ್ರಿಗೆ ಎರಡೂ ಪಕ್ಷಗಳು ಮುಂದಾಗಿವೆ ಎನ್ನಲಾಗಿದೆ.


ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...