Homeಮುಖಪುಟಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

- Advertisement -
- Advertisement -

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ ಮೂಲಕ ಅವರು ‘ಮತಗಳ್ಳತನ’ ನಡೆಸಿದ್ದಾರೆ ವಿಪಕ್ಷಗಳು ಆರೋಪಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಶಾಂಭವಿ ಅವರ ವಿಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ, ಬಂಕೀಪುರ ವಿಧಾನಸಭಾ ಕ್ಷೇತ್ರದ ಬುದ್ಧ ಕಾಲೊನಿಯ ಮತಗಟ್ಟೆಯಲ್ಲಿ ಮತದಾನ ಮಾಡಿ ಬಳಿಕ, ಶಾಂಭವಿ ತನ್ನ ಬಲಗೈ ಬೆರಳಿಗೆ ಶಾಯಿ ಹಾಕಿದ್ದನ್ನು ಮೊದಲು ತೋರಿಸುವುದು, ಬಳಿಕ ಎಡಗೈ ಬೆರಳಿಗೆ ಶಾಯಿ ಹಾಕಿದ್ದನ್ನು ತೋರಿಸುವುದನ್ನು ನೋಡಬಹುದು.

ಶಾಂಭವಿ ಅವರ ಎರಡೂ ಕೈ ಬೆರಳುಗಳಲ್ಲಿ ಶಾಯಿ ಗುರುತು ಕಂಡು ಬಂದಿರುವುದು ರಾಹುಲ್ ಗಾಂಧಿ ಮಾಡುತ್ತಿರುವ ಮತಗಳ್ಳತನ ಆರೋಪಕ್ಕೆ ಸ್ಪಷ್ಟ ಪುರಾವೆ. ಶಾಂಭವಿ ಎರಡೆರಡು ಬಾರಿ ಮತದಾನ ಮಾಡಿ ಅಕ್ರಮವೆಸಗಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಶಾಂಭವಿ ಅವರ ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಆರ್‌ಜೆಡಿಯ ರಾಷ್ಟ್ರೀಯ ವಕ್ತಾರೆ ಕಾಂಚನಾ ಯಾದವ್, “ಇದು ಸಂಪೂರ್ಣ ಹೊಸ ಮಟ್ಟದ ವಂಚನೆ. ಇದು ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ. ಅವರ ಎರಡೂ ಕೈಗಳಲ್ಲಿ ಶಾಯಿ ಇದೆ, ಅಂದರೆ ಅವರು ಎರಡು ಬಾರಿ ಮತ ಚಲಾಯಿಸಿದ್ದಾರೆ. ಇದು ಬೆಳಕಿಗೆ ಬಂದಾಗ, ಅವರ ತಂದೆ ಅಶೋಕ್ ಚೌಧರಿ ಅವರು ತಮ್ಮ ಕಣ್ಣುಗಳಿಂದ ಅವರಿಗೆ ಸಿಗ್ನಲ್ ನೀಡುತ್ತಿರುವುದು ಕಂಡುಬಂದಿದೆ. ಚುನಾವಣಾ ಆಯೋಗ, ಇದು ಹೇಗೆ ನಡೆಯುತ್ತಿದೆ? ಇದನ್ನು ಯಾರು ತನಿಖೆ ಮಾಡುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕೂಡ ತನ್ನ ಎಕ್ಸ್‌ ಖಾತೆಯಲ್ಲಿ ಶಾಂಭವಿ ಅವರು ಎರಡು ಬೆರಳುಗಳನ್ನು ತೋರಿಸಿದ ಫೋಟೋ ಹಂಚಿಕೊಂಡಿದ್ದು, “ಎರಡು ಕೈಗಳ್ಳಲ್ಲಿ ಮತಗಳ್ಳತನ’ ಎಂದು ಬರೆದುಕೊಂಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಟ್ನಾ ಜಿಲ್ಲಾಡಳಿತ, “ಮತಗಟ್ಟೆಯ ಸಿಬ್ಬಂದಿ ತಪ್ಪಾಗಿ ಶಾಂಭವಿ ಅವರ ಬಲಗೈಗೆ ಶಾಯಿ ಹಚ್ಚಿದ್ದರು. ಆನಂತರ ಅವರ ಎಡಗೈಗೆ ಶಾಯಿ ಹಚ್ಚಿ ತಪ್ಪನ್ನು ಸರಿಪಡಿಸಿದ್ದಾರೆ” ಎಂದು ಹೇಳಿದೆ.

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...