Homeಮುಖಪುಟಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

- Advertisement -
- Advertisement -

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ ಮೂಲಕ ಅವರು ‘ಮತಗಳ್ಳತನ’ ನಡೆಸಿದ್ದಾರೆ ವಿಪಕ್ಷಗಳು ಆರೋಪಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಶಾಂಭವಿ ಅವರ ವಿಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ, ಬಂಕೀಪುರ ವಿಧಾನಸಭಾ ಕ್ಷೇತ್ರದ ಬುದ್ಧ ಕಾಲೊನಿಯ ಮತಗಟ್ಟೆಯಲ್ಲಿ ಮತದಾನ ಮಾಡಿ ಬಳಿಕ, ಶಾಂಭವಿ ತನ್ನ ಬಲಗೈ ಬೆರಳಿಗೆ ಶಾಯಿ ಹಾಕಿದ್ದನ್ನು ಮೊದಲು ತೋರಿಸುವುದು, ಬಳಿಕ ಎಡಗೈ ಬೆರಳಿಗೆ ಶಾಯಿ ಹಾಕಿದ್ದನ್ನು ತೋರಿಸುವುದನ್ನು ನೋಡಬಹುದು.

ಶಾಂಭವಿ ಅವರ ಎರಡೂ ಕೈ ಬೆರಳುಗಳಲ್ಲಿ ಶಾಯಿ ಗುರುತು ಕಂಡು ಬಂದಿರುವುದು ರಾಹುಲ್ ಗಾಂಧಿ ಮಾಡುತ್ತಿರುವ ಮತಗಳ್ಳತನ ಆರೋಪಕ್ಕೆ ಸ್ಪಷ್ಟ ಪುರಾವೆ. ಶಾಂಭವಿ ಎರಡೆರಡು ಬಾರಿ ಮತದಾನ ಮಾಡಿ ಅಕ್ರಮವೆಸಗಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಶಾಂಭವಿ ಅವರ ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಆರ್‌ಜೆಡಿಯ ರಾಷ್ಟ್ರೀಯ ವಕ್ತಾರೆ ಕಾಂಚನಾ ಯಾದವ್, “ಇದು ಸಂಪೂರ್ಣ ಹೊಸ ಮಟ್ಟದ ವಂಚನೆ. ಇದು ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ. ಅವರ ಎರಡೂ ಕೈಗಳಲ್ಲಿ ಶಾಯಿ ಇದೆ, ಅಂದರೆ ಅವರು ಎರಡು ಬಾರಿ ಮತ ಚಲಾಯಿಸಿದ್ದಾರೆ. ಇದು ಬೆಳಕಿಗೆ ಬಂದಾಗ, ಅವರ ತಂದೆ ಅಶೋಕ್ ಚೌಧರಿ ಅವರು ತಮ್ಮ ಕಣ್ಣುಗಳಿಂದ ಅವರಿಗೆ ಸಿಗ್ನಲ್ ನೀಡುತ್ತಿರುವುದು ಕಂಡುಬಂದಿದೆ. ಚುನಾವಣಾ ಆಯೋಗ, ಇದು ಹೇಗೆ ನಡೆಯುತ್ತಿದೆ? ಇದನ್ನು ಯಾರು ತನಿಖೆ ಮಾಡುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕೂಡ ತನ್ನ ಎಕ್ಸ್‌ ಖಾತೆಯಲ್ಲಿ ಶಾಂಭವಿ ಅವರು ಎರಡು ಬೆರಳುಗಳನ್ನು ತೋರಿಸಿದ ಫೋಟೋ ಹಂಚಿಕೊಂಡಿದ್ದು, “ಎರಡು ಕೈಗಳ್ಳಲ್ಲಿ ಮತಗಳ್ಳತನ’ ಎಂದು ಬರೆದುಕೊಂಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಟ್ನಾ ಜಿಲ್ಲಾಡಳಿತ, “ಮತಗಟ್ಟೆಯ ಸಿಬ್ಬಂದಿ ತಪ್ಪಾಗಿ ಶಾಂಭವಿ ಅವರ ಬಲಗೈಗೆ ಶಾಯಿ ಹಚ್ಚಿದ್ದರು. ಆನಂತರ ಅವರ ಎಡಗೈಗೆ ಶಾಯಿ ಹಚ್ಚಿ ತಪ್ಪನ್ನು ಸರಿಪಡಿಸಿದ್ದಾರೆ” ಎಂದು ಹೇಳಿದೆ.

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...