Homeಮುಖಪುಟಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

- Advertisement -
- Advertisement -

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ ಮೂಲಕ ಅವರು ‘ಮತಗಳ್ಳತನ’ ನಡೆಸಿದ್ದಾರೆ ವಿಪಕ್ಷಗಳು ಆರೋಪಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಶಾಂಭವಿ ಅವರ ವಿಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ, ಬಂಕೀಪುರ ವಿಧಾನಸಭಾ ಕ್ಷೇತ್ರದ ಬುದ್ಧ ಕಾಲೊನಿಯ ಮತಗಟ್ಟೆಯಲ್ಲಿ ಮತದಾನ ಮಾಡಿ ಬಳಿಕ, ಶಾಂಭವಿ ತನ್ನ ಬಲಗೈ ಬೆರಳಿಗೆ ಶಾಯಿ ಹಾಕಿದ್ದನ್ನು ಮೊದಲು ತೋರಿಸುವುದು, ಬಳಿಕ ಎಡಗೈ ಬೆರಳಿಗೆ ಶಾಯಿ ಹಾಕಿದ್ದನ್ನು ತೋರಿಸುವುದನ್ನು ನೋಡಬಹುದು.

ಶಾಂಭವಿ ಅವರ ಎರಡೂ ಕೈ ಬೆರಳುಗಳಲ್ಲಿ ಶಾಯಿ ಗುರುತು ಕಂಡು ಬಂದಿರುವುದು ರಾಹುಲ್ ಗಾಂಧಿ ಮಾಡುತ್ತಿರುವ ಮತಗಳ್ಳತನ ಆರೋಪಕ್ಕೆ ಸ್ಪಷ್ಟ ಪುರಾವೆ. ಶಾಂಭವಿ ಎರಡೆರಡು ಬಾರಿ ಮತದಾನ ಮಾಡಿ ಅಕ್ರಮವೆಸಗಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಶಾಂಭವಿ ಅವರ ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಆರ್‌ಜೆಡಿಯ ರಾಷ್ಟ್ರೀಯ ವಕ್ತಾರೆ ಕಾಂಚನಾ ಯಾದವ್, “ಇದು ಸಂಪೂರ್ಣ ಹೊಸ ಮಟ್ಟದ ವಂಚನೆ. ಇದು ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ. ಅವರ ಎರಡೂ ಕೈಗಳಲ್ಲಿ ಶಾಯಿ ಇದೆ, ಅಂದರೆ ಅವರು ಎರಡು ಬಾರಿ ಮತ ಚಲಾಯಿಸಿದ್ದಾರೆ. ಇದು ಬೆಳಕಿಗೆ ಬಂದಾಗ, ಅವರ ತಂದೆ ಅಶೋಕ್ ಚೌಧರಿ ಅವರು ತಮ್ಮ ಕಣ್ಣುಗಳಿಂದ ಅವರಿಗೆ ಸಿಗ್ನಲ್ ನೀಡುತ್ತಿರುವುದು ಕಂಡುಬಂದಿದೆ. ಚುನಾವಣಾ ಆಯೋಗ, ಇದು ಹೇಗೆ ನಡೆಯುತ್ತಿದೆ? ಇದನ್ನು ಯಾರು ತನಿಖೆ ಮಾಡುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕೂಡ ತನ್ನ ಎಕ್ಸ್‌ ಖಾತೆಯಲ್ಲಿ ಶಾಂಭವಿ ಅವರು ಎರಡು ಬೆರಳುಗಳನ್ನು ತೋರಿಸಿದ ಫೋಟೋ ಹಂಚಿಕೊಂಡಿದ್ದು, “ಎರಡು ಕೈಗಳ್ಳಲ್ಲಿ ಮತಗಳ್ಳತನ’ ಎಂದು ಬರೆದುಕೊಂಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಟ್ನಾ ಜಿಲ್ಲಾಡಳಿತ, “ಮತಗಟ್ಟೆಯ ಸಿಬ್ಬಂದಿ ತಪ್ಪಾಗಿ ಶಾಂಭವಿ ಅವರ ಬಲಗೈಗೆ ಶಾಯಿ ಹಚ್ಚಿದ್ದರು. ಆನಂತರ ಅವರ ಎಡಗೈಗೆ ಶಾಯಿ ಹಚ್ಚಿ ತಪ್ಪನ್ನು ಸರಿಪಡಿಸಿದ್ದಾರೆ” ಎಂದು ಹೇಳಿದೆ.

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...