Homeಮುಖಪುಟಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

- Advertisement -
- Advertisement -

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ ಮೂಲಕ ಅವರು ‘ಮತಗಳ್ಳತನ’ ನಡೆಸಿದ್ದಾರೆ ವಿಪಕ್ಷಗಳು ಆರೋಪಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಶಾಂಭವಿ ಅವರ ವಿಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ, ಬಂಕೀಪುರ ವಿಧಾನಸಭಾ ಕ್ಷೇತ್ರದ ಬುದ್ಧ ಕಾಲೊನಿಯ ಮತಗಟ್ಟೆಯಲ್ಲಿ ಮತದಾನ ಮಾಡಿ ಬಳಿಕ, ಶಾಂಭವಿ ತನ್ನ ಬಲಗೈ ಬೆರಳಿಗೆ ಶಾಯಿ ಹಾಕಿದ್ದನ್ನು ಮೊದಲು ತೋರಿಸುವುದು, ಬಳಿಕ ಎಡಗೈ ಬೆರಳಿಗೆ ಶಾಯಿ ಹಾಕಿದ್ದನ್ನು ತೋರಿಸುವುದನ್ನು ನೋಡಬಹುದು.

ಶಾಂಭವಿ ಅವರ ಎರಡೂ ಕೈ ಬೆರಳುಗಳಲ್ಲಿ ಶಾಯಿ ಗುರುತು ಕಂಡು ಬಂದಿರುವುದು ರಾಹುಲ್ ಗಾಂಧಿ ಮಾಡುತ್ತಿರುವ ಮತಗಳ್ಳತನ ಆರೋಪಕ್ಕೆ ಸ್ಪಷ್ಟ ಪುರಾವೆ. ಶಾಂಭವಿ ಎರಡೆರಡು ಬಾರಿ ಮತದಾನ ಮಾಡಿ ಅಕ್ರಮವೆಸಗಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಶಾಂಭವಿ ಅವರ ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಆರ್‌ಜೆಡಿಯ ರಾಷ್ಟ್ರೀಯ ವಕ್ತಾರೆ ಕಾಂಚನಾ ಯಾದವ್, “ಇದು ಸಂಪೂರ್ಣ ಹೊಸ ಮಟ್ಟದ ವಂಚನೆ. ಇದು ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ. ಅವರ ಎರಡೂ ಕೈಗಳಲ್ಲಿ ಶಾಯಿ ಇದೆ, ಅಂದರೆ ಅವರು ಎರಡು ಬಾರಿ ಮತ ಚಲಾಯಿಸಿದ್ದಾರೆ. ಇದು ಬೆಳಕಿಗೆ ಬಂದಾಗ, ಅವರ ತಂದೆ ಅಶೋಕ್ ಚೌಧರಿ ಅವರು ತಮ್ಮ ಕಣ್ಣುಗಳಿಂದ ಅವರಿಗೆ ಸಿಗ್ನಲ್ ನೀಡುತ್ತಿರುವುದು ಕಂಡುಬಂದಿದೆ. ಚುನಾವಣಾ ಆಯೋಗ, ಇದು ಹೇಗೆ ನಡೆಯುತ್ತಿದೆ? ಇದನ್ನು ಯಾರು ತನಿಖೆ ಮಾಡುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕೂಡ ತನ್ನ ಎಕ್ಸ್‌ ಖಾತೆಯಲ್ಲಿ ಶಾಂಭವಿ ಅವರು ಎರಡು ಬೆರಳುಗಳನ್ನು ತೋರಿಸಿದ ಫೋಟೋ ಹಂಚಿಕೊಂಡಿದ್ದು, “ಎರಡು ಕೈಗಳ್ಳಲ್ಲಿ ಮತಗಳ್ಳತನ’ ಎಂದು ಬರೆದುಕೊಂಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಟ್ನಾ ಜಿಲ್ಲಾಡಳಿತ, “ಮತಗಟ್ಟೆಯ ಸಿಬ್ಬಂದಿ ತಪ್ಪಾಗಿ ಶಾಂಭವಿ ಅವರ ಬಲಗೈಗೆ ಶಾಯಿ ಹಚ್ಚಿದ್ದರು. ಆನಂತರ ಅವರ ಎಡಗೈಗೆ ಶಾಯಿ ಹಚ್ಚಿ ತಪ್ಪನ್ನು ಸರಿಪಡಿಸಿದ್ದಾರೆ” ಎಂದು ಹೇಳಿದೆ.

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...