Homeಮುಖಪುಟನಿತೀಶ್, ಮೋದಿ ನೇತೃತ್ವದಲ್ಲಿ ಬಿಹಾರ ಚುನಾವಣೆ ಎದುರಿಸುತ್ತೇವೆ - ಬಿಜೆಪಿ

ನಿತೀಶ್, ಮೋದಿ ನೇತೃತ್ವದಲ್ಲಿ ಬಿಹಾರ ಚುನಾವಣೆ ಎದುರಿಸುತ್ತೇವೆ – ಬಿಜೆಪಿ

- Advertisement -
- Advertisement -

ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಸ್ಪರ್ಧಿಸಲಿದೆ ಎಂದು ಬಿಜೆಪಿ ನಾಯಕ, ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಭಾನುವಾರ ಹೇಳಿದ್ದಾರೆ. ”ಇದರಲ್ಲಿ ಯಾವುದೇ ಗೊಂದಲ ಬೇಡ. ಸಿಎಂ ನಿತೀಶ್ ಕುಮಾರ್ ಮತ್ತು ಪಿಎಂ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎನ್‌ಡಿಎ ಮತ್ತೊಮ್ಮೆ ಜನಾದೇಶವನ್ನು ಪಡೆಯಲಿದೆ” ಎಂದು ಅವರು ಹೇಳಿದ್ದಾರೆ. ಬಿಹಾರ ಚುನಾವಣೆಯನ್ನು

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2025 ರ ರಾಜ್ಯ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮೈತ್ರಿಕೂಟದ ನಾಯಕನಾಗಿ ಪ್ರಕಟಿಸುವ ಬಗ್ಗೆಗಿನ ಊಹಾಪೋಹಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ. ಅದಕ್ಕೂ ಮುನ್ನ, ಮುಂಬರುವ ಚುನಾವಣೆಯಲ್ಲಿ ನಿತೀಶ್ ಅವರ ಪ್ರಮುಖ ಪಾತ್ರದ ಬಗ್ಗೆ ಜೆಡಿಯು ಭಾನುವಾರ ತನ್ನ ನಿಲುವನ್ನು ಪುನರುಚ್ಚರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಮಹಾರಾಷ್ಟ್ರದಲ್ಲಿ ಉತ್ತಮ ಯಶಸ್ಸನ್ನು ಸಾಧಿಸಿದಂತೆ ಬಿಹಾರಲ್ಲಿ ಕೂಡಾ ಚುನಾವಣೆಗೆ ಹೋಗುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತಿಚೆಗೆ ಮಾತನಾಡಿದ್ದರು. ಅವರ ಹೇಳಿಕೆಗೆ ಉಂಟಾದ ಗೊಂದಲದ ನಂತರ ಉಪ ಮುಖ್ಯಮಂತ್ರಿ  ಚೌಧರಿ ಅವರ ಹೇಳಿಕೆಗಳು ಹೊರಬಂದಿವೆ.

ಪಕ್ಷದ ಪ್ರಮುಖ ಚುನಾವಣಾ ತಂತ್ರಜ್ಞ ಎಂದು ಇನ್ನೂ ಪರಿಗಣಿಸಲ್ಪಟ್ಟಿರುವ ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ಅಮಿತ್ ಶಾ ಅವರು, “ನಾಯಕತ್ವದ ಬಗ್ಗೆ ನಾವು ಒಟ್ಟಿಗೆ ಕುಳಿತು ನಿರ್ಧರಿಸುತ್ತೇವೆ. ನಾವು ನಿರ್ಧಾರ ತೆಗೆದುಕೊಂಡ ನಂತರ ನಿಮಗೆ ತಿಳಿಸುತ್ತೇವೆ” ಎಂದು ಅಸ್ಪಷ್ಟ ರೀತಿಯಲ್ಲಿ ಇತ್ತಿಚೆಕಗೆ ಪ್ರತಿಕ್ರಿಯಿಸಿದ್ದರು. ಅವರ ಈ ಹೇಳಿಕೆ 2025 ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಬಿಹಾರದಲ್ಲಿ ತಮ್ಮ ಮೈತ್ರಿಯ ನಾಯಕನನ್ನಾಗಿ ಬಿಂಬಿಸಲು ಬಿಜೆಪಿ ಮುಂದಾಗುತ್ತಿಲ್ಲ ಎಂಬ ವದಂತಿಗಳು ಹರಡಿತ್ತು.

ಈ ಗೊಂದಲಗಳನ್ನು ಹೋಗಲಾಡಿಸಿದ ಉಪ ಮುಖ್ಯಮಂತ್ರಿ ಚೌಧರಿ, “ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎನ್‌ಡಿಎ ಕೆಲಸ ಮಾಡುತ್ತಿದೆ. ನಾವು ಇಬ್ಬರೂ ನಾಯಕರ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸುತ್ತೇವೆ” ಎಂದು ಹೇಳಿದ್ದಾರೆ. ಬಿಹಾರ ಚುನಾವಣೆಯನ್ನು

ಎನ್‌ಡಿಎ 2020 ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿತ್ತು ಮತ್ತು ಅವರನ್ನು ಬಿಹಾರದಲ್ಲಿ ಮೈತ್ರಿಕೂಟದ ನಾಯಕನಾಗಿ ನೋಡುತ್ತಿದೆ ಎಂದು ಅವರು ಹೇಳಿದ್ದಾರೆ. “ಭವಿಷ್ಯದಲ್ಲಿಯೂ ನಾವು ನಿತೀಶ್ ಕುಮಾರ್ ಮತ್ತು ಪ್ರಧಾನಿ ನೇತೃತ್ವದಲ್ಲಿ ಚುನಾವಣೆಗಳನ್ನು ಎದುರಿಸುತ್ತೇವೆ” ಎಂದು ಅವರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...