Homeಮುಖಪುಟನಿತೀಶ್, ಮೋದಿ ನೇತೃತ್ವದಲ್ಲಿ ಬಿಹಾರ ಚುನಾವಣೆ ಎದುರಿಸುತ್ತೇವೆ - ಬಿಜೆಪಿ

ನಿತೀಶ್, ಮೋದಿ ನೇತೃತ್ವದಲ್ಲಿ ಬಿಹಾರ ಚುನಾವಣೆ ಎದುರಿಸುತ್ತೇವೆ – ಬಿಜೆಪಿ

- Advertisement -
- Advertisement -

ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಸ್ಪರ್ಧಿಸಲಿದೆ ಎಂದು ಬಿಜೆಪಿ ನಾಯಕ, ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಭಾನುವಾರ ಹೇಳಿದ್ದಾರೆ. ”ಇದರಲ್ಲಿ ಯಾವುದೇ ಗೊಂದಲ ಬೇಡ. ಸಿಎಂ ನಿತೀಶ್ ಕುಮಾರ್ ಮತ್ತು ಪಿಎಂ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎನ್‌ಡಿಎ ಮತ್ತೊಮ್ಮೆ ಜನಾದೇಶವನ್ನು ಪಡೆಯಲಿದೆ” ಎಂದು ಅವರು ಹೇಳಿದ್ದಾರೆ. ಬಿಹಾರ ಚುನಾವಣೆಯನ್ನು

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2025 ರ ರಾಜ್ಯ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮೈತ್ರಿಕೂಟದ ನಾಯಕನಾಗಿ ಪ್ರಕಟಿಸುವ ಬಗ್ಗೆಗಿನ ಊಹಾಪೋಹಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ. ಅದಕ್ಕೂ ಮುನ್ನ, ಮುಂಬರುವ ಚುನಾವಣೆಯಲ್ಲಿ ನಿತೀಶ್ ಅವರ ಪ್ರಮುಖ ಪಾತ್ರದ ಬಗ್ಗೆ ಜೆಡಿಯು ಭಾನುವಾರ ತನ್ನ ನಿಲುವನ್ನು ಪುನರುಚ್ಚರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಮಹಾರಾಷ್ಟ್ರದಲ್ಲಿ ಉತ್ತಮ ಯಶಸ್ಸನ್ನು ಸಾಧಿಸಿದಂತೆ ಬಿಹಾರಲ್ಲಿ ಕೂಡಾ ಚುನಾವಣೆಗೆ ಹೋಗುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತಿಚೆಗೆ ಮಾತನಾಡಿದ್ದರು. ಅವರ ಹೇಳಿಕೆಗೆ ಉಂಟಾದ ಗೊಂದಲದ ನಂತರ ಉಪ ಮುಖ್ಯಮಂತ್ರಿ  ಚೌಧರಿ ಅವರ ಹೇಳಿಕೆಗಳು ಹೊರಬಂದಿವೆ.

ಪಕ್ಷದ ಪ್ರಮುಖ ಚುನಾವಣಾ ತಂತ್ರಜ್ಞ ಎಂದು ಇನ್ನೂ ಪರಿಗಣಿಸಲ್ಪಟ್ಟಿರುವ ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ಅಮಿತ್ ಶಾ ಅವರು, “ನಾಯಕತ್ವದ ಬಗ್ಗೆ ನಾವು ಒಟ್ಟಿಗೆ ಕುಳಿತು ನಿರ್ಧರಿಸುತ್ತೇವೆ. ನಾವು ನಿರ್ಧಾರ ತೆಗೆದುಕೊಂಡ ನಂತರ ನಿಮಗೆ ತಿಳಿಸುತ್ತೇವೆ” ಎಂದು ಅಸ್ಪಷ್ಟ ರೀತಿಯಲ್ಲಿ ಇತ್ತಿಚೆಕಗೆ ಪ್ರತಿಕ್ರಿಯಿಸಿದ್ದರು. ಅವರ ಈ ಹೇಳಿಕೆ 2025 ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಬಿಹಾರದಲ್ಲಿ ತಮ್ಮ ಮೈತ್ರಿಯ ನಾಯಕನನ್ನಾಗಿ ಬಿಂಬಿಸಲು ಬಿಜೆಪಿ ಮುಂದಾಗುತ್ತಿಲ್ಲ ಎಂಬ ವದಂತಿಗಳು ಹರಡಿತ್ತು.

ಈ ಗೊಂದಲಗಳನ್ನು ಹೋಗಲಾಡಿಸಿದ ಉಪ ಮುಖ್ಯಮಂತ್ರಿ ಚೌಧರಿ, “ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎನ್‌ಡಿಎ ಕೆಲಸ ಮಾಡುತ್ತಿದೆ. ನಾವು ಇಬ್ಬರೂ ನಾಯಕರ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸುತ್ತೇವೆ” ಎಂದು ಹೇಳಿದ್ದಾರೆ. ಬಿಹಾರ ಚುನಾವಣೆಯನ್ನು

ಎನ್‌ಡಿಎ 2020 ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿತ್ತು ಮತ್ತು ಅವರನ್ನು ಬಿಹಾರದಲ್ಲಿ ಮೈತ್ರಿಕೂಟದ ನಾಯಕನಾಗಿ ನೋಡುತ್ತಿದೆ ಎಂದು ಅವರು ಹೇಳಿದ್ದಾರೆ. “ಭವಿಷ್ಯದಲ್ಲಿಯೂ ನಾವು ನಿತೀಶ್ ಕುಮಾರ್ ಮತ್ತು ಪ್ರಧಾನಿ ನೇತೃತ್ವದಲ್ಲಿ ಚುನಾವಣೆಗಳನ್ನು ಎದುರಿಸುತ್ತೇವೆ” ಎಂದು ಅವರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...