Homeಮುಖಪುಟಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

- Advertisement -
- Advertisement -

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ (ನ.8) ತನಿಖೆಗೆ ಆದೇಶಿಸಿದೆ.

ಗುರುವಾರ (6) ನಡೆದ ಮೊದಲ ಹಂತದ ಮತದಾನಕ್ಕೂ ಮುನ್ನ ನಡೆದ ಅಣಕು ಮತದಾನದ ವೇಳೆ ಬಳಸಲಾದ ಸ್ಲಿಪ್‌ಗಳು ಇವು ಎಂದು ತಿಳಿದು ಬಂದಿರುವುದಾಗಿ ವರದಿಗಳು ಹೇಳಿವೆ.

ಈ ಬಗ್ಗೆ ಮಾಹಿತಿ ಪಡೆದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್, ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

“ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಮಸ್ತಿಪುರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ಅವು ಅಣಕು ಮತದಾನದ ವಿವಿಪ್ಯಾಟ್ ಚೀಟಿಗಳಾಗಿರುವುದರಿಂದ ಮತದಾನ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗುವುದಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳಿಗೂ ಡಿಎಂ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ನಿರ್ಲಕ್ಷ್ಯಕ್ಕಾಗಿ ಸಂಬಂಧಪಟ್ಟ ಎಆರ್‌ಒ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಮತ್ತು ಎಫ್‌ಐಆರ್ ದಾಖಲಿಸಲಾಗುತ್ತಿದೆ” ಎಂದು ಇಸಿಐ ತಿಳಿಸಿದೆ.

ಕಾಲೇಜು ಬಳಿ ಹೆಚ್ಚಿನ ಸಂಖ್ಯೆಯ ಮುದ್ರಿತ ವಿವಿಪ್ಯಾಟ್ ಸ್ಲಿಪ್‌ಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ ನಂತರ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ. ಪ್ರಾಥಮಿಕ ತನಿಖೆಯ ನಂತರ ಅಧಿಕಾರಿಗಳು, ಇವು ಮೊದಲ ಹಂತದ ಮತದಾನಕ್ಕೂ ಮುನ್ನ ನಡೆಸಿದ ಅಣಕು ಮತದಾನದ ಪ್ರಕ್ರಿಯೆಗೆ ಸಂಬಂಧಿಸಿದ್ದು ಎಂದು ದೃಢಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸರೈರಂಜನ್ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ವಿವಿಪ್ಯಾಟ್ ಚೀಟಿಗಳು ಕಂಡುಬಂದಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ರೋಷನ್ ಕುಶ್ವಾಹ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಕಮಿಷನಿಂಗ್ ಅಂಡ್ ಡಿಸ್ಪ್ಯಾಚ್ ಸೆಂಟರ್‌ನಲ್ಲಿ (ಚುನಾವಣಾ ಸಾಮಗ್ರಿಗಳನ್ನು ತಯಾರು ಮಾಡಿ ಕಳುಹಿಸುವ ಕೇಂದ್ರ) ಬಹಳಷ್ಟು ಚೂರುಚೂರಾಗಿ ಹರಿದು ಹಾಕಿರುವ ಕಾಗದದ ತುಂಡುಗಳ (ಶ್ರೆಡೆಡ್ ಸ್ಲಿಪ್ಸ್) ನಡುವೆ, ಕೆಲವು ಸಂಪೂರ್ಣವಾಗಿ ಹರಿಯದೇ ಉಳಿದಿದ್ದ ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾಗಿವೆ. ಆಡಳಿತವು ಆ ಸ್ಲಿಪ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ವಶಪಡಿಸಿಕೊಂಡಿದೆ. ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ತನಿಖೆಯಿಂದ ಹರಿದು ಹಾಕಿದ್ದ ಸ್ಲಿಪ್‌ಗಳ ನಿಖರ ಸ್ವರೂಪವನ್ನು ಕಂಡು ಹಿಡಿಯಲಾಗುತ್ತದೆ. ಇದು ಸಂಪೂರ್ಣವಾಗಿ ತಾಂತ್ರಿಕ ವಿಷಯವಾಗಿದ್ದು, ವಿಚಾರಣೆಯ ನಂತರ ಎಲ್ಲಾ ವಿವರಗಳು ಸ್ಪಷ್ಟವಾಗುತ್ತವೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

“ಶೇಕಡ 5ರಷ್ಟು ಮತ ಯಂತ್ರಗಳಲ್ಲಿ ಅಣಕು ಮತದಾನವನ್ನು ನಡೆಸಲಾಗುತ್ತದೆ. ಪರೀಕ್ಷೆಯ ಭಾಗವಾಗಿ ಪ್ರತಿಯೊಂದರಲ್ಲೂ ಸುಮಾರು 1,000 ಮತಗಳು ಚಲಾವಣೆಯಾಗುತ್ತವೆ. ಹೆಚ್ಚುವರಿಯಾಗಿ, ಕಾರ್ಯಾರಂಭದ ಸಮಯದಲ್ಲಿ, ಸರಿಯಾದ ಚಿಹ್ನೆಯನ್ನು ಲೋಡ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಪ್ರತಿಯೊಬ್ಬ ಅಭ್ಯರ್ಥಿಯ ಗುಂಡಿಯನ್ನು ಒತ್ತಲಾಗುತ್ತದೆ. ಈ ಅಣಕು ಮತದಾನಗಳು ಗಮನಾರ್ಹ ಸಂಖ್ಯೆಯ ವಿವಿಪ್ಯಾಟ್ ಚೀಟಿಗಳನ್ನು ಉತ್ಪಾದಿಸುತ್ತವೆ. ಇವುಗಳಲ್ಲಿ, ಕೆಲವು ಚೂರುಚೂರು ಮತ್ತು ಕೆಲವು ಚೂರುಚೂರು ಮಾಡದ ಚೀಟಿಗಳು ಕಂಡುಬಂದಿವೆ. ಈ ವಿಷಯ ತನಿಖೆಯಲ್ಲಿದೆ ಮತ್ತು ಹೊಣೆಗಾರರ ​​ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಸಿಇಸಿ ನಿರ್ದೇಶನದ ನಂತರ, ಚುನಾವಣಾ ಸಾಮಗ್ರಿಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾ ಅಧಿಕಾರಿ (ಎಆರ್‌ಒ) ಅವರನ್ನು ಅಮಾನತುಗೊಳಿಸಲಾಗಿದೆ.

ಅಣಕು ಮತದಾನ ಚೀಟಿಗಳನ್ನು ಹೇಗೆ ಸರಿಯಾಗಿ ವಿಲೇವಾರಿ ಮಾಡಲಾಗಿಲ್ಲ ಮತ್ತು ಅವುಗಳ ವಿಲೇವಾರಿಯಲ್ಲಿ ಯಾವುದೇ ಕಾರ್ಯವಿಧಾನದ ಲೋಪವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಜಿಲ್ಲಾ ಅಧಿಕಾರಿಗಳು ವಿವರವಾದ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ.

ವಿವಿಪ್ಯಾಟ್‌ ಸ್ಲಿಪ್‌ಗಳು ರಸ್ತೆ ಬದಿ ಪತ್ತೆಯಾದ ಬಗ್ಗೆ ಆರ್‌ಜೆಡಿ ಪಕ್ಷ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಸಮಸ್ತಿಪುರದ ಸರೈರಂಜನ್ ವಿಧಾನಸಭಾ ಕ್ಷೇತ್ರದ ಕೆಎಸ್‌ಆರ್ ಕಾಲೇಜು ಬಳಿಯ ರಸ್ತೆಯಲ್ಲಿ ಇವಿಎಂಗಳಿಂದ ಹೊರಬರುವ ವಿವಿಪ್ಯಾಟ್ ಸ್ಲಿಪ್‌ಗಳು ಬಾರಿ ಸಂಖ್ಯೆಯಲ್ಲಿ ಕಂಡುಬಂದಿವೆ. ಯಾವಾಗ, ಹೇಗೆ, ಏಕೆ ಮತ್ತು ಯಾರ ಸೂಚನೆಯ ಮೇರೆಗೆ ಈ ಸ್ಲಿಪ್‌ಗಳನ್ನು ಎಸೆಯಲಾಯಿತು? ‘ಕಳ್ಳ ಆಯೋಗ’ ಇದಕ್ಕೆ ಉತ್ತರಿಸುತ್ತದೆಯೇ? ಬಿಹಾರದಲ್ಲಿ ಹೊರಗಿನಿಂದ ಬೀಡುಬಿಟ್ಟಿರುವ ‘ಪ್ರಜಾಪ್ರಭುತ್ವದ ಡಕಾಯಿತ’ನ ನಿರ್ದೇಶನದ ಮೇರೆಗೆ ಇದೆಲ್ಲವೂ ನಡೆಯುತ್ತಿದೆಯೇ?” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...