Homeಮುಖಪುಟಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

- Advertisement -
- Advertisement -

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ (ನ.8) ತನಿಖೆಗೆ ಆದೇಶಿಸಿದೆ.

ಗುರುವಾರ (6) ನಡೆದ ಮೊದಲ ಹಂತದ ಮತದಾನಕ್ಕೂ ಮುನ್ನ ನಡೆದ ಅಣಕು ಮತದಾನದ ವೇಳೆ ಬಳಸಲಾದ ಸ್ಲಿಪ್‌ಗಳು ಇವು ಎಂದು ತಿಳಿದು ಬಂದಿರುವುದಾಗಿ ವರದಿಗಳು ಹೇಳಿವೆ.

ಈ ಬಗ್ಗೆ ಮಾಹಿತಿ ಪಡೆದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್, ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

“ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಮಸ್ತಿಪುರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ಅವು ಅಣಕು ಮತದಾನದ ವಿವಿಪ್ಯಾಟ್ ಚೀಟಿಗಳಾಗಿರುವುದರಿಂದ ಮತದಾನ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗುವುದಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳಿಗೂ ಡಿಎಂ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ನಿರ್ಲಕ್ಷ್ಯಕ್ಕಾಗಿ ಸಂಬಂಧಪಟ್ಟ ಎಆರ್‌ಒ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಮತ್ತು ಎಫ್‌ಐಆರ್ ದಾಖಲಿಸಲಾಗುತ್ತಿದೆ” ಎಂದು ಇಸಿಐ ತಿಳಿಸಿದೆ.

ಕಾಲೇಜು ಬಳಿ ಹೆಚ್ಚಿನ ಸಂಖ್ಯೆಯ ಮುದ್ರಿತ ವಿವಿಪ್ಯಾಟ್ ಸ್ಲಿಪ್‌ಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ ನಂತರ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ. ಪ್ರಾಥಮಿಕ ತನಿಖೆಯ ನಂತರ ಅಧಿಕಾರಿಗಳು, ಇವು ಮೊದಲ ಹಂತದ ಮತದಾನಕ್ಕೂ ಮುನ್ನ ನಡೆಸಿದ ಅಣಕು ಮತದಾನದ ಪ್ರಕ್ರಿಯೆಗೆ ಸಂಬಂಧಿಸಿದ್ದು ಎಂದು ದೃಢಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸರೈರಂಜನ್ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ವಿವಿಪ್ಯಾಟ್ ಚೀಟಿಗಳು ಕಂಡುಬಂದಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ರೋಷನ್ ಕುಶ್ವಾಹ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಕಮಿಷನಿಂಗ್ ಅಂಡ್ ಡಿಸ್ಪ್ಯಾಚ್ ಸೆಂಟರ್‌ನಲ್ಲಿ (ಚುನಾವಣಾ ಸಾಮಗ್ರಿಗಳನ್ನು ತಯಾರು ಮಾಡಿ ಕಳುಹಿಸುವ ಕೇಂದ್ರ) ಬಹಳಷ್ಟು ಚೂರುಚೂರಾಗಿ ಹರಿದು ಹಾಕಿರುವ ಕಾಗದದ ತುಂಡುಗಳ (ಶ್ರೆಡೆಡ್ ಸ್ಲಿಪ್ಸ್) ನಡುವೆ, ಕೆಲವು ಸಂಪೂರ್ಣವಾಗಿ ಹರಿಯದೇ ಉಳಿದಿದ್ದ ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾಗಿವೆ. ಆಡಳಿತವು ಆ ಸ್ಲಿಪ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ವಶಪಡಿಸಿಕೊಂಡಿದೆ. ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ತನಿಖೆಯಿಂದ ಹರಿದು ಹಾಕಿದ್ದ ಸ್ಲಿಪ್‌ಗಳ ನಿಖರ ಸ್ವರೂಪವನ್ನು ಕಂಡು ಹಿಡಿಯಲಾಗುತ್ತದೆ. ಇದು ಸಂಪೂರ್ಣವಾಗಿ ತಾಂತ್ರಿಕ ವಿಷಯವಾಗಿದ್ದು, ವಿಚಾರಣೆಯ ನಂತರ ಎಲ್ಲಾ ವಿವರಗಳು ಸ್ಪಷ್ಟವಾಗುತ್ತವೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

“ಶೇಕಡ 5ರಷ್ಟು ಮತ ಯಂತ್ರಗಳಲ್ಲಿ ಅಣಕು ಮತದಾನವನ್ನು ನಡೆಸಲಾಗುತ್ತದೆ. ಪರೀಕ್ಷೆಯ ಭಾಗವಾಗಿ ಪ್ರತಿಯೊಂದರಲ್ಲೂ ಸುಮಾರು 1,000 ಮತಗಳು ಚಲಾವಣೆಯಾಗುತ್ತವೆ. ಹೆಚ್ಚುವರಿಯಾಗಿ, ಕಾರ್ಯಾರಂಭದ ಸಮಯದಲ್ಲಿ, ಸರಿಯಾದ ಚಿಹ್ನೆಯನ್ನು ಲೋಡ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಪ್ರತಿಯೊಬ್ಬ ಅಭ್ಯರ್ಥಿಯ ಗುಂಡಿಯನ್ನು ಒತ್ತಲಾಗುತ್ತದೆ. ಈ ಅಣಕು ಮತದಾನಗಳು ಗಮನಾರ್ಹ ಸಂಖ್ಯೆಯ ವಿವಿಪ್ಯಾಟ್ ಚೀಟಿಗಳನ್ನು ಉತ್ಪಾದಿಸುತ್ತವೆ. ಇವುಗಳಲ್ಲಿ, ಕೆಲವು ಚೂರುಚೂರು ಮತ್ತು ಕೆಲವು ಚೂರುಚೂರು ಮಾಡದ ಚೀಟಿಗಳು ಕಂಡುಬಂದಿವೆ. ಈ ವಿಷಯ ತನಿಖೆಯಲ್ಲಿದೆ ಮತ್ತು ಹೊಣೆಗಾರರ ​​ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಸಿಇಸಿ ನಿರ್ದೇಶನದ ನಂತರ, ಚುನಾವಣಾ ಸಾಮಗ್ರಿಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾ ಅಧಿಕಾರಿ (ಎಆರ್‌ಒ) ಅವರನ್ನು ಅಮಾನತುಗೊಳಿಸಲಾಗಿದೆ.

ಅಣಕು ಮತದಾನ ಚೀಟಿಗಳನ್ನು ಹೇಗೆ ಸರಿಯಾಗಿ ವಿಲೇವಾರಿ ಮಾಡಲಾಗಿಲ್ಲ ಮತ್ತು ಅವುಗಳ ವಿಲೇವಾರಿಯಲ್ಲಿ ಯಾವುದೇ ಕಾರ್ಯವಿಧಾನದ ಲೋಪವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಜಿಲ್ಲಾ ಅಧಿಕಾರಿಗಳು ವಿವರವಾದ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ.

ವಿವಿಪ್ಯಾಟ್‌ ಸ್ಲಿಪ್‌ಗಳು ರಸ್ತೆ ಬದಿ ಪತ್ತೆಯಾದ ಬಗ್ಗೆ ಆರ್‌ಜೆಡಿ ಪಕ್ಷ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಸಮಸ್ತಿಪುರದ ಸರೈರಂಜನ್ ವಿಧಾನಸಭಾ ಕ್ಷೇತ್ರದ ಕೆಎಸ್‌ಆರ್ ಕಾಲೇಜು ಬಳಿಯ ರಸ್ತೆಯಲ್ಲಿ ಇವಿಎಂಗಳಿಂದ ಹೊರಬರುವ ವಿವಿಪ್ಯಾಟ್ ಸ್ಲಿಪ್‌ಗಳು ಬಾರಿ ಸಂಖ್ಯೆಯಲ್ಲಿ ಕಂಡುಬಂದಿವೆ. ಯಾವಾಗ, ಹೇಗೆ, ಏಕೆ ಮತ್ತು ಯಾರ ಸೂಚನೆಯ ಮೇರೆಗೆ ಈ ಸ್ಲಿಪ್‌ಗಳನ್ನು ಎಸೆಯಲಾಯಿತು? ‘ಕಳ್ಳ ಆಯೋಗ’ ಇದಕ್ಕೆ ಉತ್ತರಿಸುತ್ತದೆಯೇ? ಬಿಹಾರದಲ್ಲಿ ಹೊರಗಿನಿಂದ ಬೀಡುಬಿಟ್ಟಿರುವ ‘ಪ್ರಜಾಪ್ರಭುತ್ವದ ಡಕಾಯಿತ’ನ ನಿರ್ದೇಶನದ ಮೇರೆಗೆ ಇದೆಲ್ಲವೂ ನಡೆಯುತ್ತಿದೆಯೇ?” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...