Homeಮುಖಪುಟಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

- Advertisement -
- Advertisement -

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ (ನ.8) ತನಿಖೆಗೆ ಆದೇಶಿಸಿದೆ.

ಗುರುವಾರ (6) ನಡೆದ ಮೊದಲ ಹಂತದ ಮತದಾನಕ್ಕೂ ಮುನ್ನ ನಡೆದ ಅಣಕು ಮತದಾನದ ವೇಳೆ ಬಳಸಲಾದ ಸ್ಲಿಪ್‌ಗಳು ಇವು ಎಂದು ತಿಳಿದು ಬಂದಿರುವುದಾಗಿ ವರದಿಗಳು ಹೇಳಿವೆ.

ಈ ಬಗ್ಗೆ ಮಾಹಿತಿ ಪಡೆದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್, ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

“ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಮಸ್ತಿಪುರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ಅವು ಅಣಕು ಮತದಾನದ ವಿವಿಪ್ಯಾಟ್ ಚೀಟಿಗಳಾಗಿರುವುದರಿಂದ ಮತದಾನ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗುವುದಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳಿಗೂ ಡಿಎಂ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ನಿರ್ಲಕ್ಷ್ಯಕ್ಕಾಗಿ ಸಂಬಂಧಪಟ್ಟ ಎಆರ್‌ಒ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಮತ್ತು ಎಫ್‌ಐಆರ್ ದಾಖಲಿಸಲಾಗುತ್ತಿದೆ” ಎಂದು ಇಸಿಐ ತಿಳಿಸಿದೆ.

ಕಾಲೇಜು ಬಳಿ ಹೆಚ್ಚಿನ ಸಂಖ್ಯೆಯ ಮುದ್ರಿತ ವಿವಿಪ್ಯಾಟ್ ಸ್ಲಿಪ್‌ಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ ನಂತರ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ. ಪ್ರಾಥಮಿಕ ತನಿಖೆಯ ನಂತರ ಅಧಿಕಾರಿಗಳು, ಇವು ಮೊದಲ ಹಂತದ ಮತದಾನಕ್ಕೂ ಮುನ್ನ ನಡೆಸಿದ ಅಣಕು ಮತದಾನದ ಪ್ರಕ್ರಿಯೆಗೆ ಸಂಬಂಧಿಸಿದ್ದು ಎಂದು ದೃಢಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸರೈರಂಜನ್ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ವಿವಿಪ್ಯಾಟ್ ಚೀಟಿಗಳು ಕಂಡುಬಂದಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ರೋಷನ್ ಕುಶ್ವಾಹ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಕಮಿಷನಿಂಗ್ ಅಂಡ್ ಡಿಸ್ಪ್ಯಾಚ್ ಸೆಂಟರ್‌ನಲ್ಲಿ (ಚುನಾವಣಾ ಸಾಮಗ್ರಿಗಳನ್ನು ತಯಾರು ಮಾಡಿ ಕಳುಹಿಸುವ ಕೇಂದ್ರ) ಬಹಳಷ್ಟು ಚೂರುಚೂರಾಗಿ ಹರಿದು ಹಾಕಿರುವ ಕಾಗದದ ತುಂಡುಗಳ (ಶ್ರೆಡೆಡ್ ಸ್ಲಿಪ್ಸ್) ನಡುವೆ, ಕೆಲವು ಸಂಪೂರ್ಣವಾಗಿ ಹರಿಯದೇ ಉಳಿದಿದ್ದ ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾಗಿವೆ. ಆಡಳಿತವು ಆ ಸ್ಲಿಪ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ವಶಪಡಿಸಿಕೊಂಡಿದೆ. ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ತನಿಖೆಯಿಂದ ಹರಿದು ಹಾಕಿದ್ದ ಸ್ಲಿಪ್‌ಗಳ ನಿಖರ ಸ್ವರೂಪವನ್ನು ಕಂಡು ಹಿಡಿಯಲಾಗುತ್ತದೆ. ಇದು ಸಂಪೂರ್ಣವಾಗಿ ತಾಂತ್ರಿಕ ವಿಷಯವಾಗಿದ್ದು, ವಿಚಾರಣೆಯ ನಂತರ ಎಲ್ಲಾ ವಿವರಗಳು ಸ್ಪಷ್ಟವಾಗುತ್ತವೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

“ಶೇಕಡ 5ರಷ್ಟು ಮತ ಯಂತ್ರಗಳಲ್ಲಿ ಅಣಕು ಮತದಾನವನ್ನು ನಡೆಸಲಾಗುತ್ತದೆ. ಪರೀಕ್ಷೆಯ ಭಾಗವಾಗಿ ಪ್ರತಿಯೊಂದರಲ್ಲೂ ಸುಮಾರು 1,000 ಮತಗಳು ಚಲಾವಣೆಯಾಗುತ್ತವೆ. ಹೆಚ್ಚುವರಿಯಾಗಿ, ಕಾರ್ಯಾರಂಭದ ಸಮಯದಲ್ಲಿ, ಸರಿಯಾದ ಚಿಹ್ನೆಯನ್ನು ಲೋಡ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಪ್ರತಿಯೊಬ್ಬ ಅಭ್ಯರ್ಥಿಯ ಗುಂಡಿಯನ್ನು ಒತ್ತಲಾಗುತ್ತದೆ. ಈ ಅಣಕು ಮತದಾನಗಳು ಗಮನಾರ್ಹ ಸಂಖ್ಯೆಯ ವಿವಿಪ್ಯಾಟ್ ಚೀಟಿಗಳನ್ನು ಉತ್ಪಾದಿಸುತ್ತವೆ. ಇವುಗಳಲ್ಲಿ, ಕೆಲವು ಚೂರುಚೂರು ಮತ್ತು ಕೆಲವು ಚೂರುಚೂರು ಮಾಡದ ಚೀಟಿಗಳು ಕಂಡುಬಂದಿವೆ. ಈ ವಿಷಯ ತನಿಖೆಯಲ್ಲಿದೆ ಮತ್ತು ಹೊಣೆಗಾರರ ​​ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಸಿಇಸಿ ನಿರ್ದೇಶನದ ನಂತರ, ಚುನಾವಣಾ ಸಾಮಗ್ರಿಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾ ಅಧಿಕಾರಿ (ಎಆರ್‌ಒ) ಅವರನ್ನು ಅಮಾನತುಗೊಳಿಸಲಾಗಿದೆ.

ಅಣಕು ಮತದಾನ ಚೀಟಿಗಳನ್ನು ಹೇಗೆ ಸರಿಯಾಗಿ ವಿಲೇವಾರಿ ಮಾಡಲಾಗಿಲ್ಲ ಮತ್ತು ಅವುಗಳ ವಿಲೇವಾರಿಯಲ್ಲಿ ಯಾವುದೇ ಕಾರ್ಯವಿಧಾನದ ಲೋಪವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಜಿಲ್ಲಾ ಅಧಿಕಾರಿಗಳು ವಿವರವಾದ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ.

ವಿವಿಪ್ಯಾಟ್‌ ಸ್ಲಿಪ್‌ಗಳು ರಸ್ತೆ ಬದಿ ಪತ್ತೆಯಾದ ಬಗ್ಗೆ ಆರ್‌ಜೆಡಿ ಪಕ್ಷ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಸಮಸ್ತಿಪುರದ ಸರೈರಂಜನ್ ವಿಧಾನಸಭಾ ಕ್ಷೇತ್ರದ ಕೆಎಸ್‌ಆರ್ ಕಾಲೇಜು ಬಳಿಯ ರಸ್ತೆಯಲ್ಲಿ ಇವಿಎಂಗಳಿಂದ ಹೊರಬರುವ ವಿವಿಪ್ಯಾಟ್ ಸ್ಲಿಪ್‌ಗಳು ಬಾರಿ ಸಂಖ್ಯೆಯಲ್ಲಿ ಕಂಡುಬಂದಿವೆ. ಯಾವಾಗ, ಹೇಗೆ, ಏಕೆ ಮತ್ತು ಯಾರ ಸೂಚನೆಯ ಮೇರೆಗೆ ಈ ಸ್ಲಿಪ್‌ಗಳನ್ನು ಎಸೆಯಲಾಯಿತು? ‘ಕಳ್ಳ ಆಯೋಗ’ ಇದಕ್ಕೆ ಉತ್ತರಿಸುತ್ತದೆಯೇ? ಬಿಹಾರದಲ್ಲಿ ಹೊರಗಿನಿಂದ ಬೀಡುಬಿಟ್ಟಿರುವ ‘ಪ್ರಜಾಪ್ರಭುತ್ವದ ಡಕಾಯಿತ’ನ ನಿರ್ದೇಶನದ ಮೇರೆಗೆ ಇದೆಲ್ಲವೂ ನಡೆಯುತ್ತಿದೆಯೇ?” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...