Homeಮುಖಪುಟಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

- Advertisement -
- Advertisement -

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ (ನ.8) ತನಿಖೆಗೆ ಆದೇಶಿಸಿದೆ.

ಗುರುವಾರ (6) ನಡೆದ ಮೊದಲ ಹಂತದ ಮತದಾನಕ್ಕೂ ಮುನ್ನ ನಡೆದ ಅಣಕು ಮತದಾನದ ವೇಳೆ ಬಳಸಲಾದ ಸ್ಲಿಪ್‌ಗಳು ಇವು ಎಂದು ತಿಳಿದು ಬಂದಿರುವುದಾಗಿ ವರದಿಗಳು ಹೇಳಿವೆ.

ಈ ಬಗ್ಗೆ ಮಾಹಿತಿ ಪಡೆದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್, ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

“ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಮಸ್ತಿಪುರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ಅವು ಅಣಕು ಮತದಾನದ ವಿವಿಪ್ಯಾಟ್ ಚೀಟಿಗಳಾಗಿರುವುದರಿಂದ ಮತದಾನ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗುವುದಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳಿಗೂ ಡಿಎಂ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ನಿರ್ಲಕ್ಷ್ಯಕ್ಕಾಗಿ ಸಂಬಂಧಪಟ್ಟ ಎಆರ್‌ಒ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಮತ್ತು ಎಫ್‌ಐಆರ್ ದಾಖಲಿಸಲಾಗುತ್ತಿದೆ” ಎಂದು ಇಸಿಐ ತಿಳಿಸಿದೆ.

ಕಾಲೇಜು ಬಳಿ ಹೆಚ್ಚಿನ ಸಂಖ್ಯೆಯ ಮುದ್ರಿತ ವಿವಿಪ್ಯಾಟ್ ಸ್ಲಿಪ್‌ಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ ನಂತರ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ. ಪ್ರಾಥಮಿಕ ತನಿಖೆಯ ನಂತರ ಅಧಿಕಾರಿಗಳು, ಇವು ಮೊದಲ ಹಂತದ ಮತದಾನಕ್ಕೂ ಮುನ್ನ ನಡೆಸಿದ ಅಣಕು ಮತದಾನದ ಪ್ರಕ್ರಿಯೆಗೆ ಸಂಬಂಧಿಸಿದ್ದು ಎಂದು ದೃಢಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸರೈರಂಜನ್ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ವಿವಿಪ್ಯಾಟ್ ಚೀಟಿಗಳು ಕಂಡುಬಂದಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ರೋಷನ್ ಕುಶ್ವಾಹ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಕಮಿಷನಿಂಗ್ ಅಂಡ್ ಡಿಸ್ಪ್ಯಾಚ್ ಸೆಂಟರ್‌ನಲ್ಲಿ (ಚುನಾವಣಾ ಸಾಮಗ್ರಿಗಳನ್ನು ತಯಾರು ಮಾಡಿ ಕಳುಹಿಸುವ ಕೇಂದ್ರ) ಬಹಳಷ್ಟು ಚೂರುಚೂರಾಗಿ ಹರಿದು ಹಾಕಿರುವ ಕಾಗದದ ತುಂಡುಗಳ (ಶ್ರೆಡೆಡ್ ಸ್ಲಿಪ್ಸ್) ನಡುವೆ, ಕೆಲವು ಸಂಪೂರ್ಣವಾಗಿ ಹರಿಯದೇ ಉಳಿದಿದ್ದ ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾಗಿವೆ. ಆಡಳಿತವು ಆ ಸ್ಲಿಪ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ವಶಪಡಿಸಿಕೊಂಡಿದೆ. ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ತನಿಖೆಯಿಂದ ಹರಿದು ಹಾಕಿದ್ದ ಸ್ಲಿಪ್‌ಗಳ ನಿಖರ ಸ್ವರೂಪವನ್ನು ಕಂಡು ಹಿಡಿಯಲಾಗುತ್ತದೆ. ಇದು ಸಂಪೂರ್ಣವಾಗಿ ತಾಂತ್ರಿಕ ವಿಷಯವಾಗಿದ್ದು, ವಿಚಾರಣೆಯ ನಂತರ ಎಲ್ಲಾ ವಿವರಗಳು ಸ್ಪಷ್ಟವಾಗುತ್ತವೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

“ಶೇಕಡ 5ರಷ್ಟು ಮತ ಯಂತ್ರಗಳಲ್ಲಿ ಅಣಕು ಮತದಾನವನ್ನು ನಡೆಸಲಾಗುತ್ತದೆ. ಪರೀಕ್ಷೆಯ ಭಾಗವಾಗಿ ಪ್ರತಿಯೊಂದರಲ್ಲೂ ಸುಮಾರು 1,000 ಮತಗಳು ಚಲಾವಣೆಯಾಗುತ್ತವೆ. ಹೆಚ್ಚುವರಿಯಾಗಿ, ಕಾರ್ಯಾರಂಭದ ಸಮಯದಲ್ಲಿ, ಸರಿಯಾದ ಚಿಹ್ನೆಯನ್ನು ಲೋಡ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಪ್ರತಿಯೊಬ್ಬ ಅಭ್ಯರ್ಥಿಯ ಗುಂಡಿಯನ್ನು ಒತ್ತಲಾಗುತ್ತದೆ. ಈ ಅಣಕು ಮತದಾನಗಳು ಗಮನಾರ್ಹ ಸಂಖ್ಯೆಯ ವಿವಿಪ್ಯಾಟ್ ಚೀಟಿಗಳನ್ನು ಉತ್ಪಾದಿಸುತ್ತವೆ. ಇವುಗಳಲ್ಲಿ, ಕೆಲವು ಚೂರುಚೂರು ಮತ್ತು ಕೆಲವು ಚೂರುಚೂರು ಮಾಡದ ಚೀಟಿಗಳು ಕಂಡುಬಂದಿವೆ. ಈ ವಿಷಯ ತನಿಖೆಯಲ್ಲಿದೆ ಮತ್ತು ಹೊಣೆಗಾರರ ​​ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಸಿಇಸಿ ನಿರ್ದೇಶನದ ನಂತರ, ಚುನಾವಣಾ ಸಾಮಗ್ರಿಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾ ಅಧಿಕಾರಿ (ಎಆರ್‌ಒ) ಅವರನ್ನು ಅಮಾನತುಗೊಳಿಸಲಾಗಿದೆ.

ಅಣಕು ಮತದಾನ ಚೀಟಿಗಳನ್ನು ಹೇಗೆ ಸರಿಯಾಗಿ ವಿಲೇವಾರಿ ಮಾಡಲಾಗಿಲ್ಲ ಮತ್ತು ಅವುಗಳ ವಿಲೇವಾರಿಯಲ್ಲಿ ಯಾವುದೇ ಕಾರ್ಯವಿಧಾನದ ಲೋಪವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಜಿಲ್ಲಾ ಅಧಿಕಾರಿಗಳು ವಿವರವಾದ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ.

ವಿವಿಪ್ಯಾಟ್‌ ಸ್ಲಿಪ್‌ಗಳು ರಸ್ತೆ ಬದಿ ಪತ್ತೆಯಾದ ಬಗ್ಗೆ ಆರ್‌ಜೆಡಿ ಪಕ್ಷ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಸಮಸ್ತಿಪುರದ ಸರೈರಂಜನ್ ವಿಧಾನಸಭಾ ಕ್ಷೇತ್ರದ ಕೆಎಸ್‌ಆರ್ ಕಾಲೇಜು ಬಳಿಯ ರಸ್ತೆಯಲ್ಲಿ ಇವಿಎಂಗಳಿಂದ ಹೊರಬರುವ ವಿವಿಪ್ಯಾಟ್ ಸ್ಲಿಪ್‌ಗಳು ಬಾರಿ ಸಂಖ್ಯೆಯಲ್ಲಿ ಕಂಡುಬಂದಿವೆ. ಯಾವಾಗ, ಹೇಗೆ, ಏಕೆ ಮತ್ತು ಯಾರ ಸೂಚನೆಯ ಮೇರೆಗೆ ಈ ಸ್ಲಿಪ್‌ಗಳನ್ನು ಎಸೆಯಲಾಯಿತು? ‘ಕಳ್ಳ ಆಯೋಗ’ ಇದಕ್ಕೆ ಉತ್ತರಿಸುತ್ತದೆಯೇ? ಬಿಹಾರದಲ್ಲಿ ಹೊರಗಿನಿಂದ ಬೀಡುಬಿಟ್ಟಿರುವ ‘ಪ್ರಜಾಪ್ರಭುತ್ವದ ಡಕಾಯಿತ’ನ ನಿರ್ದೇಶನದ ಮೇರೆಗೆ ಇದೆಲ್ಲವೂ ನಡೆಯುತ್ತಿದೆಯೇ?” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...