Homeಮುಖಪುಟಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಆರ್‌ಜೆಡಿ ಮತ್ತು ಇತರ ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

- Advertisement -
- Advertisement -

ಇಂದು ಬಿಹಾರದಲ್ಲಿ ಮೂರನೇ ಮತ್ತು ಕೊನೆಯ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪಕ್ಷಗಳಿಗೆ ಸ್ಪಷ್ಟ ಬಹುಮತ ಲಭಿಸಲಿವೆ ಎಂದು ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ತಿಳಿಸಿವೆ. ಆರ್‌ಜೆಡಿ ಮತ್ತು ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ ಅವರ ಪಕ್ಷ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಬಹತೇಕ ಎಲ್ಲಾ ಸಮೀಕ್ಷೆಗಳೂ ಹೇಳಿವೆ.

ಟೈಮ್ ನೌ-ಸಿ ಸಮೀಕ್ಷೆ ಪ್ರಕಾರ, ಎನ್‌ಡಿಎಗೆ 116 ಮತ್ತು ಪ್ರತಿಪಕ್ಷದ ಮಹಾಘಟಬಂಧನ್‌ಗೆ 120 ಸ್ಥಾನಗಳಲ್ಲಿ ಗೆಲುವಿನ ಭರವಸೆ ನೀಡಿದ್ದು, ತೇಜಸ್ವಿ ಯಾದವ್ ಮೈತ್ರಿಪಕ್ಷಕ್ಕೆ ಸ್ವಲ್ಪ ಮುನ್ನಡೆ ನೀಡಿದೆ. ಚಿರಾಗ್ ಪಾಸ್ವಾನ್‌ರ ಲೋಕ ತಾಂತ್ರಿಕ್ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಒಂದು ಸ್ಥಾನದಲ್ಲಿ ಗೆಲುವು ಸಿಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ದೇಶದ ರಾಜಕೀಯಕ್ಕೆ ತಿರುವು ನೀಡುವುದೇ ಬಿಹಾರ ಚುನಾವಣೆ?

ರಿಪಬ್ಲಿಕ್ ಟಿವಿ-ಜಾನ್ ಕಿ ಬಾತ್ ಸಮೀಕ್ಷೆ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 118 ರಿಂದ 138 ಸ್ಥಾನಗಳನ್ನು ಮತ್ತು ಆಡಳಿತಾರೂಢ ಎನ್‌ಡಿಎಗೆ 91-117 ಸ್ಥಾನಗಳನ್ನು ನೀಡಿದೆ. ಚಿರಾಗ್ ಪಾಸ್ವಾನ್ ಅವರ ಪಕ್ಷ 5-8 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನವೆಂಬರ್ 10 ರಂದು ಬಿಹಾರದ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ ಯಾವುದೇ ಪಕ್ಷ ಅಥವಾ ಒಕ್ಕೂಟಕ್ಕೆ 122 ಸ್ಥಾನಗಳಲ್ಲಿ ಗೆಲ್ಲುವ ಅಗತ್ಯವಿದೆ.

ರಾಜ್ಯದಲ್ಲಿರುವ ಎಲ್ಲಾ ಪಕ್ಷಗಳು ಚುನಾವಣಾ ಪೂರ್ವದಲ್ಲಿ ಸಾಕಷ್ಟು ಪ್ರಚಾರ ನಡೆಸಿವೆ. ಬಿಜೆಪಿ ಮತ್ತು ನಿತೀಶ್‌ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಮತ್ತು 19 ಲಕ್ಷ ಉದ್ಯೋಗಗನ್ನು ನೀಡುವ ಭರವಸೆ ನೀಡಿದೆ. ಆದರೂ ನಿತೀಶ್‌ ಕುಮಾರ್‌ ಅವರ ಮೇಲೆ ರಾಜ್ಯದ ಜನತೆ ಮುನಿಸಿಕೊಂಡಿರುವಂತೆ ಕಾಣುತ್ತಿದೆ. ಚಿರಾಗ್ ಪಾಸ್ವಾನ್ ಕೂಡ ನಿತೀಶ್‌ ಮೇಲಿನ ಮುನಿಸಿನಿಂದ ಮೈತ್ರಿಯಿಂದ ಹೊರಬಂದು ಅವರ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಇನ್ನು ತೇಜಸ್ವಿ ಯಾದವ್ ನೇತೃತ್ವದ ಕಾಂಗ್ರೆಸ್ ಮತ್ತು ಇತರ ಎಡ ಪಕ್ಷಗಳು ಒಟ್ಟಾಗಿದ್ದು, ಇವರ ಪರವಾದ ಒಲವು ರಾಜ್ಯದಲ್ಲಿ ಎದ್ದು ಕಾಣುತ್ತಿದೆ. ಇದಕ್ಕೆ ಸಾಕ್ಷಿ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಮತ್ತು ಚುನಾವಣಾ ಪೂರ್ವದಲ್ಲಿ ಅವರು ನಡೆಸಿದ ರ್ಯಾಲಿಗಳು. ಹಾಗಾಗಿ ಬಿಹಾರದ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂದು ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....